LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಧಾರವಾಡ ಜಿಲ್ಲೆಯಲ್ಲಿ ಅನ್ ಲಾಕ್ ಆದ್ರೂ ಪೂರ್ಣ ಪ್ರಮಾಣದಲ್ಲಿಲ್ಲ ಯಾವುದಕ್ಕೂ ಅವಕಾಶ ಜಿಲ್ಲಾಧಿಕಾರಿ ಆದೇಶದಲ್ಲಿ ಯಾವುದಕ್ಕೆ ಅವಕಾಶವಿದೆ ಯಾವುದಕ್ಕಿಲ್ಲ ಕಂಪ್ಲೀಟ್ ರಿಪೊರ್ಟ್.....

ಧಾರವಾಡ -

ಪಾಸಿಟಿವಿಟಿ ಕಡಿಮೆಯಾದ ಹಿನ್ನಲೆಯಲ್ಲಿ ಧಾರವಾ ಡ ಜಿಲ್ಲೆಯಲ್ಲಿ ನಾಳೆಯಿಂದ ಸ್ವಲ್ಪು ಮಟ್ಟಿಗೆ ರಿಲ್ಯಾ ಕ್ಸ್ ಸಿಗಲಿದೆ.ಇದರೊಂದಿಗೆ ಜಿಲ್ಲೆಯಲ್ಲಿ ಕೆಲವೊಂ ದಿಷ್ಟು ವಲಯಗಳಿಗೆ ಜಿಲ್ಲಾಧಿಕಾರಿ ನಿತೀಶ್ ಪಾಟೀ ಲ್ ಅವಕಾಶವನ್ನು ನೀಡಿದ್ದಾರೆ.ಇನ್ನೂ ನಾಳೆ ಲಾಕ್ ಡೌನ್ ಮುಕ್ತಾಯವಾಗುತ್ತಿರುವ ಹಿನ್ನಲೆಯಲ್ಲಿ ಧಾರ ವಾಡ ಜಿಲ್ಲಾಧಿಕಾರಿ ಜಿಲ್ಲೆಯಲ್ಲಿ ಹೊಸ ಮಾರ್ಗಸೂ ಚಿಗಳ ಆದೇಶವನ್ನು ಪ್ರಕಟ ಮಾಡಿದ್ದಾರೆ. ಪ್ರಮುಖ ವಾಗಿ ನಾಳೆಯಿಂದ ಜೂನ್ 21 ರವರೆಗೆ ಈ ಒಂದು ಹೊಸ ಮಾರ್ಗಸೂಚಿಗಳು ಅನ್ವಯವಾಗಲಿದ್ದು ಜಿಲ್ಲಾಧಿಕಾರಿಗಳು ಜಿಲ್ಲೆಯಲ್ಲಿ ಯಾವುದಕ್ಕೆ ಅವಕಾ ಶ ನೀಡಿದ್ದಾರೆ ನೀಡಿಲ್ಲ ಕುರಿತಂತೆ ನೋಡೊದಾದರೆ

ಯಾವುದಕ್ಕೆ ಅವಕಾಶ

ಪ್ರತಿಶತ 50 ರಷ್ಟು ಕಾರ್ಮಿಕರನ್ನು ಬಳಕೆ ಮಾಡಿಕೊಂಡು ಕೈಗಾರಿಕೆಗಳಿಗೆ ಜಿಲ್ಲೆಯಲ್ಲಿ ಅವಕಾಶ
ಇನ್ನೂ ಪ್ರತಿಶತ 30 ರಷ್ಟು ಬಳಕೆ ಮಾಡಿಕೊಂಡು ಬಟ್ಟೆ ಕಾರ್ಖಾನೆ ತೆರೆಯಲು ಅವಕಾಶ
ಕಿರಾಣಿ,ತರಕಾರಿ,ಮೀನ ಮಾಂಸ.ಡೇರಿ,ಹಾಲಿನ ಕೇಂದ್ರಗಳು,ಪ್ರಾಣಿಗಳ ಆಹಾರದ ಅಂಗಡಿಗಳಿಗೆ ತೆರೆಯಲು ಅವಕಾಶ ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ರವರೆಗೆ ಮಾತ್ರ
ಬೀದಿ ಬದಿಯ ವ್ಯಾಪಾರಿಗಳಿಗೂ ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ರವರೆಗೆ ವ್ಯಾಪಾರ ಮಾಡಲು ಅವಕಾಶ
ಮಧ್ಯದ ಅಂಗಡಿ ಗಳಿಗೆ ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ರವರೆಗೆ ಪಾರ್ಸಲ್ ಕೊಡಲು ಅವಕಾಶ ನೀಡಲಾಗಿದೆ
ಕಟ್ಟಡ ನಿರ್ಮಾಣದ ವಸ್ತುಗಳ ಮಾರಾಟದ ಅಂಗಡಿಗಳಿಗೆ ಅನುಮತಿ ನೀಡಲಾಗಿದೆ. ಸಿಮೆಂಟ್, ಕಬ್ಬಿಣ, ಹಾಗೇ ದುರಸ್ತಿ ಕಾರ್ಯಗಳ ಅಂಗಡಿಗಳಿಗೂ ಕೂಡಾ ಅನುಮತಿಯನ್ನು ನೀಡಲಾಗಿದೆ.
ವಾಯು ವಿಹಾರಕ್ಕೆ ಅನುಮತಿ ಬೆಳಿಗ್ಗೆ 5 ರಿಂದ 10 ಗಂಟೆಯ ವರೆಗೆ ಯಾವುದೇ ಗುಂಪು ಸೇರುವಂತಿಲ್ಲ ಯಾವುದೇ ಕಾರ್ಯಕ್ರಮವನ್ನು ಮಾಡುವಂತಿಲ್ಲ

ಟ್ಯಾಕ್ಸಿ.ರಿಕ್ಸಾ ಗಳಿಗೆ ಸಂಚರಿಸಲು ಅವಕಾಶ ಇಬ್ಬರು ಪ್ರಯಾಣಿಕರನ್ನು ಕರೆದುಕೊಂಡು ಹೋಗಲು ಅನುಮತಿ
ಎಲ್ಲಾ ಸರ್ಕಾರಿ ಕಚೇರಿಗಳ ಆರಂಭಕ್ಕೆ ಅವಕಾಶ ಪ್ರತಿಶತ 50 ರಷ್ಟು ಮಾತ್ರ ಕಾರ್ಯವನ್ನು ಮಾಡಬೇಕು
ತರಬೇತಿ ಕಾರ್ಯಕ್ರಮಗಳಿಗೆ ಆರೋಗ್ಯ ಇಲಾಖೆಗೆ ಮಾತ್ರ ಅವಕಾಶ
ಆಪ್ಟೀಕಲ್ ಅಂಗಡಿ ಗಳ ಆರಂಭಕ್ಕೆ ಅವಕಾಶ ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ರವರೆಗೆ ಮಾತ್ರ ತೆರೆಯಲು ಅವಕಾಶ

ಯಾವುದಕ್ಕೆ ಅವಕಾಶವಿಲ್ಲ

ಜೂನ್ 21 ರವರೆಗೆ ಜಿಲ್ಲೆಯಲ್ಲಿ ಯಾವುದೇ ಮದುವೆ ಸೇರಿದಂತೆ ಇನ್ನಿತರ ಕಾರ್ಯಕ್ರಮ ಮಾಡಲು ಅವಕಾಶವಿಲ್ಲ,
ಪ್ರತಿದಿನ ರಾತ್ರಿ 7 ರಿಂದ ಬೆಳಿಗ್ಗೆ 5 ಗಂಟೆಯವರೆಗೆ ನಿಷೇಧಾಜ್ಞೆಯನ್ನು ವಿಧಿಸಲಾಗಿದೆ
ವಾರದ ಕರ್ಫ್ಯೂ ಶುಕ್ರವಾರಸಂಜೆ 7 ರಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ
ರಾತ್ರಿಯ ಕರ್ಫ್ಯೂವೇಳೆಯಲ್ಲಿ ಅಗತ್ಯವಾಗಿ ಸಂಚರಿಸಲು ಅವಕಾಶವನ್ನು ಕೆಲವೊಂದಿಷ್ಟು ವಲಯಗಳಿಗೆ ನೀಡಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...