LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಹದಗೆಟ್ಟ ರಸ್ತೆ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಪಕ್ಷದಿಂದ ರಸ್ತೆ ಮಧ್ಯದಲ್ಲಿ ಹೋಮ - ರಸ್ತೆಯಲ್ಲಿ ಯೇ ವಿಶೇಷವಾಗಿ ಹೋಮ ಮಾಡಿ ಗಮನ ಸೆಳೆದ ಕೈ ಪಕ್ಷದವರು.....

ಹುಬ್ಬಳ್ಳಿ -

ಗಣ ಹೋಮದ ಮೂಲಕ ರಾಷ್ಟ್ರೀಯ ಗಣ್ಯರ ಗಮನ ಸೆಳೆದ ಕಾಂಗ್ರೆಸ್: ರಸ್ತೆ ಮಧ್ಯದಲ್ಲಿ ಹೋಮ ಸರ್ಕಾರದ ವಿರುದ್ಧ ಆಕ್ರೋಶ…!

ಹೌದು ಹುಬ್ಬಳ್ಳಿ ಹೆಸರಿಗೆ ಮಾತ್ರ ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ.ಈ ನಗರ ಸ್ಮಾರ್ಟ್ ಆಗುವುದು ಜನಪ್ರತಿನಿಧಿಗಳ ಮಕ್ಕಳ ಮದುವೆ ಹಾಗೂ ಆಡಳಿತಾ ರೂಢ ಪಕ್ಷದ ಏನಾದರೂ ಕಾರ್ಯಕ್ರಮ ಇದ್ದಾಗ ಮಾತ್ರ. ಉಳಿದ ದಿನಗಳಲ್ಲಿ ಇದರ ಪಾಡು ಹೇಳ ತೀರದು.ಈ ಎಲ್ಲ ವ್ಯವಸ್ಥೆಗೆ ಬೇಸತ್ತಿರುವ ಕಾಂಗ್ರೆಸ್ ಪಕ್ಷ ಬಿಜೆಪಿ ನೇತೃತ್ವದ ಸರ್ಕಾರವನ್ನು ಕಣ್ಣು ತೆರೆಸಲು ವಿನೂತನ ಪ್ರಯತ್ನಕ್ಕೆ ಮುಂದಾಗಿದೆ.

ಹೌದು.. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯು ಸ್ಮಾರ್ಟ್ ಸಿಟಿ ಯೋಜನೆ ಮಾತ್ರವಲ್ಲದೆ ಯಾವುದೇ ಅನುದಾನ ಬಂದರೂ ಕೂಡ ಧೂಳು ಮುಕ್ತ, ಗುಂಡಿ ಮುಕ್ತ ಮಾಡಲು ಸಾಧ್ಯವಾಗುತ್ತಿಲ್ಲ.ಅಲ್ಲದೆ ಸರ್ಕಾರ ಹಾಗೂ ಸರ್ಕಾರ ಜನಪ್ರತಿನಿಧಿಗಳು ಮಾತ್ರ ಹರಕೆ ಉತ್ತರ ವನ್ನು ನೀಡುವ ಕಾರ್ಯವನ್ನು ಮಾಡುತ್ತಿದ್ದಾರೆ ವಿನಃ ಯಾವುದೇ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಕಾಂಗ್ರೆಸ್ ಹದಗೆಟ್ಟ ಹುಬ್ಬಳ್ಳಿ-ಧಾರವಾಡ ರಸ್ತೆಗಳ ದುರಸ್ತಿಗೆ ಆಗ್ರಹಿಸಿ ರಸ್ತೆ ಮಧ್ಯದಲ್ಲಿಯೇ ಗಣ ಹೋಮ ಮಾಡುವ ಮೂಲಕ ವಿನೂತನ ಪ್ರತಿಭಟನೆ ನಡಸಿದೆ.ಹುಬ್ಬಳ್ಳಿಯ ಕೊಪ್ಪಿಕರ ರಸ್ತೆಯಲ್ಲಿ ವಿಭಿನ್ನವಾಗಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಮುಖಂಡರು ಸರ್ಕಾರ ಹಾಗೂ ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

https://youtu.be/CEmtFBGnt8Q

ಇನ್ನೂ ಹುಬ್ಬಳ್ಳಿಯ ಕೊಪ್ಪಿಕರ ರಸ್ತೆಯಲ್ಲಿ ಗಣಹೋಮ ಮಾಡುವ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪ ಡಿಸಿದರು.ಇಬ್ಬರು ಅರ್ಚಕರಿಂದ ಮಂತ್ರ ಘೋಷ ಪಟಣ ಮಾಡಿ ಶಾಸ್ತ್ರೋಕ್ತವಾಗಿ ಗಣಹೋಮ ನೆರವೆರಸಿದ ಕಾಂಗ್ರೆಸ್ ಕಾರ್ಯಕರ್ತರು,ಕಳೆದು ಎರಡೂ ವರ್ಷದಿಂದ ಹದಗೆಟ್ಟ ಹುಬ್ಬಳ್ಳಿ-ಧಾರವಾಡ ರಸ್ತೆಗಳನ್ನು ದುರಸ್ತಿ ಮಾಡುವಂತೆ ಒತ್ತಾಯಿಸಿದರು.ನಾಳೆ ಬಿಜೆಪಿ ಕಾರ್ಯಕಾ ರಣಿ ಸಭೆಯಲ್ಲಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿ ದಂತೆ ಹಲವು ಗಣ್ಯಾತಿಗಣ್ಯರು ಭಾಗಿಯಾಗುತ್ತಿದ್ದಾರೆ. ಇದರ ಹಿನ್ನೆಲೆಯಲ್ಲಿ ರಾಷ್ಟ್ರೀಯ ನಾಯಕರ ಗಮನ ಸೆಳೆಯಲು ಕಾಂಗ್ರೆಸ್ ಕಾರ್ಯಕರ್ತರು ವಿಭಿನ್ನವಾಗಿ ಪ್ರತಿಭಟನೆ ನಡೆಸಿದರು.

https://youtu.be/ZVdqbSwxAxw

ಒಟ್ಟಿನಲ್ಲಿ ಕಾಂಗ್ರೆಸ್ ಒಂದಿಲ್ಲೊಂದು ರೀತಿಯಲ್ಲಿ ಪ್ರತಿಭಟ ನೆ ಮಾಡುವ ಮೂಲಕ ಸರ್ಕಾರದ ಹಾಗೂ ಜನಪ್ರತಿನಿ ಧಿಗಳ ಗಮನ ಸೆಳೆಯುವ ಕೆಲಸ ಮಾಡುತ್ತಿದೆ.ಆದರೆ ನಮ್ಮ ಸರ್ಕಾರಕ್ಕೆ ಮಾತ್ರ ಅವಳಿನಗರದ ಜನರ ಸಮಸ್ಯೆ ಮಾತ್ರ ಕಾಣದೇ ಇರುವುದು ದುರದೃಷ್ಟಕರ ಸಂಗತಿಯಾ ಗಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...