LIVE TV LocalCrimeNationalInternationalPoliticsEducationTechnologyEntertainmentSportsFeature
State News

ಶಿಕ್ಷಕರ ಮತದಾರರ ಪಟ್ಟಿಯಲ್ಲಿ ಕಾರ್ಖಾನೆ ನೌಕರರು, ಬ್ಯಾಂಕ್ ಸಿಬ್ಬಂದಿ - ಚುನಾವಣೆ ಸಮಯ ದಲ್ಲಿ ಎಡವಟ್ಟು ಬಯಲು.....

ಬಾಗಲಕೋಟೆ -

ಪ್ರಸ್ತುತ ವಾಯವ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆಯಲ್ಲಿ ಗೆಲ್ಲಲೇಬೇಕೆಂಬ ಉದ್ದೇಶದಿಂದ ಮತದಾರರ ಪಟ್ಟಿಯಲ್ಲಿ ಕಾರ್ಖಾನೆ ನೌಕರರು,ಬ್ಯಾಂಕ್‌ ಸಿಬ್ಬಂದಿ ಹೆಸರು ಸೇರಿಸ ಲಾಗಿದೆ ಈ ಕುರಿತು ಸಮಗ್ರ ದಾಖಲೆ ಕಲೆ ಹಾಕುತ್ತಿದ್ದು, ಕ್ರಿಮಿನಲ್‌ ಕೇಸ್‌ ದಾಖಲಿಸಲಾಗುವುದು ಎಂದು ಅತಿಥಿ ಉಪನ್ಯಾಸಕರೂ ಆಗಿರುವ ಪಕ್ಷೇತರ ಅಭ್ಯರ್ಥಿ ಬಸಪ್ಪ ಮನಿಗಾರ ಹೇಳಿದರು.ಬಾಗಲಕೋಟಿ ಯಲ್ಲಿ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು ನಾನು ಕಳೆದ 12 ವರ್ಷಗ ಳಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕನಾಗಿ ಸೇವೆ ಸಲ್ಲಿಸುತ್ತಿದ್ದೇನೆ ಬಾಗಲಕೋಟೆ, ಬೆಳಗಾವಿ ಹಾಗೂ ವಿಜಯಪುರ ಜಿಲ್ಲೆಗಳ ಅತಿಥಿ ಉಪ ನ್ಯಾಸಕರು,ಈ ಬಾರಿ ವಾಯವ್ಯ ಶಿಕ್ಷಕರ ಮತಕ್ಷೇತ್ರದಿಂದ ಸ್ಪರ್ಧಿಸಲು ಒಮ್ಮತದ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿ ದ್ದಾರೆ.ಹೀಗಾಗಿ ಮೂರು ಜಿಲ್ಲೆಗಳ ಶಿಕ್ಷಕರು,ಅತಿಥಿ ಉಪನ್ಯಾಸಕರು,ಮತದಾರರು ನನಗೆ ಮತ ನೀಡಿ ಗೆಲ್ಲಿಸ ಬೇಕು ಎಂದು ಮನವಿ ಮಾಡಿದರು

ಈ ಕ್ಷೇತ್ರವನ್ನು ಎರಡು ಬಾರಿ ಪ್ರತಿನಿಧಿಸಿರುವ ಅರುಣ ಶಹಾಪುರ ಅವರು ಆಡಳಿತ ದುರುಪಯೋಗಪಡಿಸಿ ಕೊಂಡು ಮತದಾರರ ಪಟ್ಟಿ ಅಕ್ರಮವಾಗಿ ರಚಿಸಲು ಕಾರಣರಾಗಿದ್ದಾರೆ.ಸುಮಾರು 3 ಸಾವಿರಕ್ಕೂ ಹೆಚ್ಚು ಮತದಾರರನ್ನು ಅಕ್ರಮವಾಗಿ ಸೇರಿಸಲಾಗಿದೆ.ನಾನು ಕಾರ್ಯ ನಿರ್ವಹಿಸುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉಪನ್ಯಾಸಕರಾಗಿದ್ದಾರೆ ಎಂಬ ದಾಖಲೆ ಸಲ್ಲಿಸಿ 7 ಜನರನ್ನು ಮತದಾರರ ಪಟ್ಟಿಯಲ್ಲಿ ಸೇರಿಸಲಾ ಗಿದೆ.ಅವರೆಲ್ಲ ವಾಸ್ತವದಲ್ಲಿ ಶಿಕ್ಷಕರೇ ಆಗಿಲ್ಲ.ಕಾರ್ಖಾನೆ, ಬ್ಯಾಂಕ್‌ ನೌಕರರಾಗಿದ್ದಾರೆ.ಹೀಗೆಯೇ ಮೂರೂ ಜಿಲ್ಲೆಗಳ ಲ್ಲಿ ಅಕ್ರಮವಾಗಿ ಮತದಾರರ ಪಟ್ಟಿಗೆ ಸೇರ್ಪಡೆಯಾದವರ ದಾಖಲೆ ಸಂಗ್ರಹಿಸಲಾಗುತ್ತಿದೆ ಎಂದರು.

ಅಕ್ರಮವಾಗಿ ಮತದಾರರ ಪಟ್ಟಿಗೆ ಸೇರ್ಪಡೆಯಾದವರು ಮತ್ತು ಇದಕ್ಕೆ ಕಾರಣರಾದವರ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಿಸಲಾಗುವುದು.ಅಲ್ಲದೇ ಮತದಾನದ ದಿನ ಅವರು ಮತ ಚಲಾಯಿಸುವ ಕುರಿತೂ ವಿಡಿಯೋ ಮಾಡಿ, ಅದನ್ನು ಚುನಾವಣೆ ಆಯೋಗ ಹಾಗೂ ಪ್ರಕರಣದ ಜತೆಗೆ ದಾಖಲೆ ನೀಡಲಾಗುವುದು ಎಂದು ಹೇಳಿದರು.

ಈ ಕ್ಷೇತ್ರ ಪ್ರತಿನಿಧಿಸಿದ ವ್ಯಕ್ತಿಗಳು ಶಿಕ್ಷಕರ,ಉಪನ್ಯಾಸಕರ ಸಮಸ್ಯೆಗೆ ಸ್ಪಂದಿಸುವ ನಿಟ್ಟಿನಲ್ಲಿ ಯಾವುದೇ ರೀತಿಯ ಕೆಲಸ ಮಾಡಿಲ್ಲ.ಅಲ್ಲದೇ ರಾಜ್ಯದಲ್ಲಿದ್ದ 14 ಸಾವಿರ ಅತಿಥಿ ಉಪನ್ಯಾಸಕರಲ್ಲಿ ಸುಮಾರು 7 ಸಾವಿರ ಅತಿಥಿ ಉಪನ್ಯಾ ಸಕರನ್ನು ಮನೆಗೆ ಕಳುಹಿಸಿ ಅವರ ಬದುಕೇ ಹಾಳು ಮಾಡಿದ ಅಪಕೀರ್ತಿ ಬಿಜೆಪಿ ಸರ್ಕಾರಕ್ಕೆ ಸಲ್ಲುತ್ತದೆ.ಈ 7 ಸಾವಿರ ಅತಿಥಿ ಉಪನ್ಯಾಸಕರ ಶಾಪ,ಬಿಜೆಪಿ ಸರ್ಕಾರಕ್ಕೆ ತಟ್ಟಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶೈಕ್ಷಣಿಕ ಕ್ಷೇತ್ರದ ಸುಧಾರಣೆ, ಶಿಕ್ಷಕರು,ಅತಿಥಿ ಶಿಕ್ಷಕರು, ಅತಿಥಿ ಉಪನ್ಯಾಸಕರ ಜ್ವಲಂತ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ನನ್ನದೇ ಆದ ಪ್ರಣಾಳಿಕೆ ಹಾಕಿಕೊಂಡಿದ್ದೇನೆ.ಆ ನಿಟ್ಟಿನಲ್ಲಿ ನಾನು ಕಾರ್ಯ ನಿರ್ವಹಿಸುವೆ.ಮೂರು ಜಿಲ್ಲೆಗಳ ಮತದಾರರು ನನ್ನನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.ಅತಿಥಿ ಉಪನ್ಯಾಸಕರಾದ ವಿಜಯಕುಮಾರ ಕಂದಗಲ್‌, ಭೀಮಪ್ಪ ಇಟಕನ್ನವರ, ಮೊಹ್ಮದ ಆಸಿಫ್‌ ಪಡೇಕನೂರ, ಶಂಕರಗೌಡ ಪಾಟೀಲ ಉಪಸ್ಥಿತರಿದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...