LIVE TV LocalCrimeNationalInternationalPoliticsEducationTechnologyEntertainmentSportsFeature
State News

ಶಿಕ್ಷಕಿಯಿಂದ ಅಮಾನವೀಯ ಕೃತ್ಯ.....ಕ್ರಮಕ್ಕೆ ಪೋಷಕರ ಒತ್ತಾಯ.....

ಶಿವಮೊಗ್ಗ -

ಶಿಕ್ಷಕಿಯಿಂದ ಅಮಾನವೀಯ ಕೃತ್ಯ ಸಾಗರದಲ್ಲಿ ರಕ್ತ ಬರುವಂತೆ ವಿದ್ಯಾರ್ಥಿಗಳಿಗೆ ಥಳಿಸಿದ ಅತಿಥಿ ಶಿಕ್ಷಕಿ ಹೌದು ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದಾರೆಂಬ ಕಾರಣಕ್ಕೆ ಪ್ರಾಥಮಿಕ ಶಾಲೆಯ ಪುಟ್ಟ ಮಕ್ಕಳಿಗೆ ಅತಿಥಿ ಶಿಕ್ಷಕಿಯೊಬ್ಬರು ಕೋಲಿನಿಂದ ರಕ್ತ ಬರುವಂತೆ ಮನಬಂದಂತೆ ಥಳಿಸಿರುವ ಅಮಾನವೀಯ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನಲ್ಲಿ ನಡೆದಿದೆ.

ತುಮರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಿರುವಾಸೆ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಒಂದು ಘಟನೆ ಸಂಭವಿಸಿದ್ದು, ರಕ್ಷಿತಾ ಎಂಬ ಅತಿಥಿ ಶಿಕ್ಷಕಿ ಮಕ್ಕಳ ಮೇಲೆ ಈ ಕ್ರೌರ್ಯ ಮೆರೆದಿದ್ದಾರೆ.ರಕ್ತ ಬರುವಂತೆ ಮನಸೋಇಚ್ಛೆ ಹಲ್ಲೆ

ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಎರಡು, ಮೂರು ಮತ್ತು ನಾಲ್ಕನೇ ತರಗತಿಯ ಮೂವರು ವಿದ್ಯಾರ್ಥಿಗಳಿಗೆ ಶಿಕ್ಷಕಿ ಕೋಲಿನಿಂದ ಅಮಾನವೀ ಯವಾಗಿ ಹೊಡೆದಿದ್ದಾರೆ ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸಿದ್ದಾರೆ ಎಂಬ ಕ್ಷುಲ್ಲಕ ಕಾರಣಕ್ಕೆ ಕೋಪಗೊಂಡ ಶಿಕ್ಷಕಿ, ಮಕ್ಕಳ ಬೆನ್ನಿನ ಮೇಲೆ ಬಾಸುಂಡೆ ಎದ್ದು ರಕ್ತ ಬರುವ ಮಟ್ಟಿಗೆ ಥಳಿಸಿದ್ದಾರೆ.

ಮನೆಗೆ ತೆರಳಿದ ಮಕ್ಕಳ ಬೆನ್ನಿನ ಮೇಲಿನ ಗಾಯ ಗಳನ್ನು ಕಂಡು ಪೋಷಕರು ಬೆಚ್ಚಿಬಿದ್ದಿದ್ದಾರೆ.
ಶಿಕ್ಷಕಿ ವಿರುದ್ಧ ಕ್ರಮಕ್ಕೆ ಆಗ್ರಹವನ್ನು ಪೋಷಕರು ಮಾಡಿದ್ದು ವಿದ್ಯಾರ್ಥಿಗಳಿಗೆ ಅಕ್ಷರ ಕಲಿಸಬೇಕಾದ ಶಿಕ್ಷಕಿಯೇ ಈ ರೀತಿ ರಾಕ್ಷಸೀ ಪ್ರವೃತ್ತಿ ಪ್ರದರ್ಶಿಸಿರು ವುದಕ್ಕೆ ಗ್ರಾಮಸ್ಥರು ಹಾಗೂ ಪೋಷಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಕ್ಕಳ ಮೇಲೆ ಹಲ್ಲೆ ನಡೆಸಿರುವ ಅತಿಥಿ ಶಿಕ್ಷಕಿ ರಕ್ಷಿತಾ ವಿರುದ್ಧ ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳು ತಕ್ಷಣವೇ ಶಿಸ್ತುಕ್ರಮ ಜರುಗಿಸಬೇಕು ಎಂದು ಪೋಷಕರು ಪಟ್ಟು ಹಿಡಿದಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಶಿವಮೊಗ್ಗ.....

Author
Ravikumar Ullagaddi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದನದ ಶೆಡ್‌ನಂತಿರುವ ಕಟ್ಟದಲ್ಲಿ 172 ಮಕ್ಕಳು 5 ವರ್ಷಗಳಿಂದ ಇದೇ ಸ್ಥಿತಿ‌ - ನರಕಯಾತನೆ ಶಾಲೆ.....ಶಿಕ್ಷಣ ಸಚಿವ ರಿಗೆ ಶಿಕ್ಷಕ ದಿನಾಚರಣೆ ಶುಭಾಶಯ ಕೋರಿದ KSPSTA - ಸಚಿವರನ್ನು ಭೇಟಿ ಮಾಡಿದ ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತೃತ್ವದಲ್ಲಿನ ನಿಯೋಗ.....ಸರ್ಕಾರಿ ಶಾಲೆಗಳಿಗೆ ಪತ್ರಕರ್ತರು, ಯೂಟ್ಯೂಬರ್‌ಗಳ ಪ್ರವೇಶ ನಿರ್ಬಂಧ ಅರ್ಜಿ ವಿಚಾರಣೆಗೆ ನ್ಯಾಯಾಲಯ ನಕಾರ.....ಭೀಕರ ಅಪಘಾತ ಶಿಕ್ಷಕರ ಸಂಘದ ಅಧ್ಯಕ್ಷ ಪ್ರಾಣಾಪಾಯದಿಂದ ಪಾರು - ಶಾಲೆಗೆ ಹೊರಟಿದ್ದ ಸಮಯದಲ್ಲಿ ಅಪಘಾತ..... ಮಾತೆ ಸಾವಿತ್ರಿಬಾಯಿ ಫುಲೆ ರಾಜ್ಯ ಪ್ರಶಸ್ತಿ - ಪ್ರಶಸ್ತಿ ಗೌರವ ನಮ್ಮ ಸಂಘದ ಒಂದು ಹೆಮ್ಮೆಯ ವಿಚಾರವಾಗಿದೆ ಎಂದ ಸಂಸ್ಥಾಪಕ ರಾಷ್ಟ್ರೀಯ ಅಧ್ಯಕ್ಷರಾಗಿರುವ ಡಾ.ಲತಾ. ಎಸ್. ಮುಳ್ಳೂರು.....ಇಂದಿರಾದೇವಿ ಶಿಕ್ಷಣ ಸೇವೆಗೆ ಜಿಲ್ಲಾ ಮಟ್ಟದ ಪ್ರಶಸ್ತಿ ಗೌರವ.....ಪೊಲೀಸ್ ಇಲಾಖೆಯ ಸೇವೆಗೆ ಯಶಸ್ವಿ 19 ವರ್ಷ 19 ವರ್ಷಗಳ ಸೇವಾ ಪಯಣದ ಸಂಭ್ರಮದಲ್ಲಿ ಒಂದೆಡೆ ಸೇರಿದ ಮಿತ್ರರು.....ಸರ್ಕಾರಿ ಶಾಲೆಯಲ್ಲೇ ಸ್ಪೋಕನ್‌ ಇಂಗ್ಲಿಷ್‌ ಕ್ರಾಂತಿ - ಕವನ್ ಮೇಷ್ಟ್ರು ಕಲಿಸಿದ ಪಾಠಕ್ಕೆ ಮಕ್ಕಳೇ ಸಾಕ್ಷಿ....ನಮ್ಮ ಸರ್ಕಾರಿ ಶಾಲೆ ನಮ್ಮ ಹೆಮ್ಮೆ.....ನವಲಗುಂದ ಕ್ಷೇತ್ರವನ್ನು ಬರಗಾಲ ಪೀಡಿತ ಘೋಷಣೆ - ಶಾಸಕ N H ಕೋನರೆಡ್ಡಿ ಮನವಿಗೆ ಸ್ಪಂದಿಸಿದ ರಾಜ್ಯ ಸರ್ಕಾರ.....ಕ್ಷೇತ್ರದ ಸಮಸ್ತ ರೈತರ ಪರವಾಗಿ CM ,DCM ಗೆ ಅಭಿನಂದನೆ ಸಲ್ಲಿಸಿದ ಜನಸೇವಕ.....ರಾಜ್ಯದ ಸಮಸ್ತ ಶಿಕ್ಷಕರ ಬಾಕಿ ವೇತನ ಕುರಿತು ಮಹತ್ವದ ಚರ್ಚೆ ಮಾಡಿದ ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತೃತ್ವದ ನಿಯೋಗ.....