LIVE TV LocalCrimeNationalInternationalPoliticsEducationTechnologyEntertainmentSportsFeature
State News

ಶ್ರೀಲಂಕಾ ದಲ್ಲಿ ದೇಶದ ಕೀರ್ತಿ ಪತಾಕಿ ಹಾರಿಸಿದ ಇನಸ್ಪೇಕ್ಟರ್ ಮುರುಗೇಶ ಚೆನ್ನಣ್ಣನವರ - ದ್ವೀಪ ರಾಷ್ಟ್ರದಲ್ಲಿ ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದ ಐರನ್ ಮ್ಯಾನ್ ಮುರುಗೇಶ ಚೆನ್ನಣ್ಣನವರ ಗೆ ಸಾಥ್ ನೀಡಿದ ಅಮನ್ ಶಾನಭಾಗ.....ಸಾಧನೆಗೆ ಸ್ಪೂರ್ತಿ ನೀಡಿದ ಪೊಲೀಸ್ ಅಧಿಕಾರಿ ಪತ್ನಿ.....

ಶ್ರೀಲಂಕಾ -

ಶ್ರೀಲಂಕಾ ದಲ್ಲಿ ದೇಶದ ಕೀರ್ತಿ ಪತಾಕಿ ಹಾರಿಸಿದ ಇನಸ್ಪೇಕ್ಟರ್ ಮುರುಗೇಶ ಚೆನ್ನಣ್ಣನವರ - ದ್ವೀಪ ರಾಷ್ಟ್ರದಲ್ಲಿ ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದ ಐರನ್ ಮ್ಯಾನ್ ಮುರುಗೇಶ ಚೆನ್ನಣ್ಣನವರ ಗೆ ಸಾಥ್ ನೀಡಿದ ಅಮನ್ ಶಾನಭಾಗ.....ಸಾಧನೆಗೆ ಸ್ಪೂರ್ತಿ ನೀಡಿದ ಪೊಲೀಸ್ ಅಧಿಕಾರಿ ಪತ್ನಿ.....

ಬಿಡುವಿಲ್ಲದ ಪೊಲೀಸ್ ಕರ್ತವ್ಯದ ನಡುವೆಯೂ ಕೂಡಾ ಈಗಾಗಲೇ ಸೈಕ್ಲಿಂಗ್ ಸೇರಿದಂತೆ ಹಲವು ಕ್ರೀಡೆಗಳಲ್ಲಿ ಸಾಧನೆಯನ್ನು ಮಾಡಿ ಐರನ್ ಮ್ಯಾನ್ ಆಗಿರುವ ಪೊಲೀಸ್ ಇನಸ್ಪೇಕ್ಟರ್ ಮುರಗೇಶ ಚೆನ್ನಣ್ಣನವರ ಮತ್ತೊಂದು ಐತಿಹಾಸಿಕ ಸಾಧನೆಯನ್ನು ಮಾಡಿದ್ದಾರೆ.ಹೌದು ದೇಶದ ಪಕ್ಕದ ರಾಷ್ಟ್ರ ಶ್ರೀಲಂಕಾ ದಲ್ಲಿ ದೇಶದ ಕೀರ್ತಿ ಪತಾಕಿಯನ್ನು ಹಾರಿಸಿದ್ದಾರೆ.

ಹಿಂದೂಮಹಾಸಾಗರ,ಬಂಗಾಲಕೊಲ್ಲಿಯ ಸಮುದ್ರ. ದಲ್ಲಿ ಐತಿಹಾಸಿಕ ಸಾಧನೆ ಮಾಡುವ ಮೂಲಕ ಇನಸ್ಪೇಕ್ಟರ್ ಮುರುಗೇಶ ಚೆನ್ನಣ್ಣನವರ ಅವರು ಮತ್ತೊಂದು ಸಾಥನೆ ಮಾಡಿ ರಾಜ್ಯದ ಪೊಲೀಸ್ ಇಲಾಖೆಯ ಗೌರವನ್ನು ಹೆಚ್ಚಿಸಿದ್ದಾರೆ.ಶ್ರೀಲಂಕಾ ದ ತಲೈ ಮನ್ನಾರ್ ದಿಂದ ಭಾರತದ ಧುನುಷ್ ಕೋಡಿ ವರೆಗೆ ಒಟ್ಟು 28 ಕಿಮಲೋ ಮೀಟರ್ ಈಜು ಮಾಡಿ ಸಾಧನೆ ಮಾಡಿದ್ದಾರೆ

ಮುರುಗೇಶ ಚನ್ನಣ್ಣವರ.ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ಮಾಡುತ್ತಿರುವ ಇವರು ಬಿಡುವಿಲ್ಲದ ತಮ್ಮ ಕರ್ತವ್ಯದ ನಡುವೆಯೂ ಕೂಡಾ ಪ್ರತಿನಿತ್ಯ ನಿರಂತರವಾಗಿ ಅಭ್ಯಾಸವನ್ನು ಮಾಡಿಕೊಳ್ಳುತ್ತಾ ಸಧ್ಯ ಹುಬ್ಬಳ್ಳಿಯ MBBS ವಿದ್ಯಾರ್ಥಿ ಅಮನ ಶಾನಬಾಗ ಅವರೊಂದಿಗೆ ಶ್ರೀಲಂಕಾದಿಂದ ಭಾರತದ ಧನುಷ್ ಕೋಡಿಯವರೆಗೆ ರಾಮ ಸೇತು ಮೂಲಕ 28 ಕಿಲೋಮೀಟರ್ ಸ್ವಿಮ್ಮಿಂಗ್ ರಿಲೇ ಯಲ್ಲಿ ಸಾಧನೆ ಮಾಡುವ ಮೂಲಕ ತಂಡದಲ್ಲಿ ಸಾಧಿಸಿದ್ದಾರೆ.

ಈ ವಿಶೇಷ ತಂಡವು ಉತ್ತರ ಪ್ರದೇಶ ಮತ್ತು ಹರಿಯಾಣದ ಇಬ್ಬರು IAS ಅಧಿಕಾರಿಗಳು ಹಾಗೂ ಪಚ್ಚಿಮ ಬೆಂಗಾಲ ಮತ್ತು ಹರಿಯಾಣದ ಅಂಗವಿಕಲ ಕ್ರೀಡಾಪಟುಗಳನ್ನು ಒಳಗೊಂಡಿತ್ತು ಈ ತಂಡವು 28 ಕಿಲೋಮೀಟರನ ಕಷ್ಟಕರ ವಾದ ಈಜನ್ನು ಹಿಂದೂ ಮಹಾಸಾಗರ ಮತ್ತು ಬಂಗಾಲಕೊಲ್ಲಿಯ ಸಮುದ್ರದಲ್ಲಿ ಪ್ರತಿಕುಲ ವಾತಾವರಣ ಮತ್ತು ಅತಿಯಾದ ಅಲೆಗಳಲ್ಲಿ ಕೇವಲ 8 ಗಂಟೆ 30 ನಿಮಷದಲ್ಲಿ ಈಜುವುದರ ಮೂಲಕ ಮುಗಿಸಿ ಈ ಅದ್ಭುತ ಸಾಧನೆ ಯನ್ನು ಮಾಡಿದ್ದಾರೆ

ಮುರುಗೇಶ ಚನ್ನಣ್ಣವರ ಧರ್ಮಪತ್ನಿ ಶ್ರೀಮತಿ ಶ್ವೇತಾ ಚನ್ನಣ್ಣವರ ಅವರು ಇವರ ಜೊತೆ ಬೋಟಿನಲ್ಲಿ ಶ್ರೀಲಂಕಾ ಗೆ ಹೋಗಿದ್ದಲ್ಲದೆ ಪ್ರಾರಂಭದಿಂದ ಮುಕ್ತಾಯದವರೆಗೂ ಜೊತೆಯಲ್ಲಿ ಇದ್ದುಕೊಂಡು ಸ್ಪೂರ್ತಿ ನೀಡಿದ್ದು ವಿಶೇಷವಾಗಿತ್ತು.ಈ ಯಶಸ್ಸಿಗೆ ಕೈ ಜೋಡಿಸಿದ್ದಾರೆ ಐರನಮ್ಯಾನ ಅವರ ಸಾಧನೆಗೆ.ಇನ್ನೂ ಈ ಹಿಂದೆ ಕಾಶ್ಮೀರ ಟು ಕನ್ಯಾಕುಮಾರಿ ಸೈಕ್ಲಿಂಗ್ ಮುಂತಾದ ಸಾಧನೆಗಳನ್ನು ಮಾಡುವದರ ಮೂಲಕ ಪೊಲೀಸ ಇಲಾಖೆಯಲ್ಲಿ ಮತ್ತು ಸಾರ್ವಜನಿಕ ವಲಯದಲ್ಲಿ ಒಳ್ಳೇಯ ಅಧಿಕಾರಿಯಾಗಿರುವ ಮುರುಗೇಶ ಚನ್ನಣ್ಣವರ ಇವರು ಮತ್ತೊಂದು ಮೈಲುಗಲ್ಲು ಸಾಧಿಸಿದ್ದಾರೆ.

ಮುರುಗೇಶ ಚನ್ನಣ್ಣವರ ಮತ್ತು ಅಮನ ಶಾನಬಾಗ ಮುಂಬರುವ ಜೂನ್ ತಿಂಗಳಲ್ಲಿ ವಿಶ್ವದ ಅತಿ ಕಷ್ಟಕರ ವಾದ ಇಂಗ್ಲಿಷ ಕಾಲುವೆ(ಇಂಗ್ಲೆಂಡ ಮತ್ತು ಫ್ರಾನ್ಸ ಮಧ್ಯದ 36 ಕಿಲೋಮೀಟರ ಕಾಲುವೆ)ಯನ್ನು ಈಜಲು ಹೊರಟಿರುವದು ನಮ್ಮ ನಾಡು ಮತ್ತು ಕರ್ನಾಟಕ ಪೊಲೀಸ್ ಇಲಾಖೆ ಹೆಮ್ಮೆ ಪಡುವ ವಿಷಯವಾಗಿದ್ದು ಇದೆ ಹುಮ್ಮಸ್ಸಿನಿಂದ ಇಂಗ್ಲಿಷ್ ಕಾಲುವೆ ಈಜಿ ಯಶಸ್ಸು ಕಾಣಲಿ ಎಂಬ ಶುಭ ಹಾರೈಕೆಗಳು ಬರುತ್ತಿದ್ದು

ಇನ್ನೂ ಶ್ರೀಲಂಕಾ ದಲ್ಲಿ ಈ ಒಂದು ಸಾಧನೆಯನ್ನು ಮಾಡಿರುವ ಇವರ ಸಾಧನೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಗೋಪಾಲ ಬ್ಯಾಕೋಡ್,ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಭರಮನಿ, ಪೊಲೀಸ್ ಉಪ ಅಧೀಕ್ಷರು ಧಾರವಾಡ ಗ್ರಾಮೀಣ ಎಸ್ ಎಮ್ ನಾಗರಾಜ ಸೇರಿದಂತೆ ಹುಬ್ಬಳ್ಳಿಯ ಗ್ರಾಮೀಣ ಪೊಲೀಸ್ ಅಧಿಕಾರಿಗಳು ಸಿಬ್ಬಂದಿಗಳು ಸೇರಿದಂತೆ ಎಲ್ಲರೂ ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಶ್ರೀಲಂಕಾ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...