LIVE TV LocalCrimeNationalInternationalPoliticsEducationTechnologyEntertainmentSportsFeature
State News

ಇನ್ಸ್ಪೆಕ್ಟರ್ ಆತ್ಮಹತ್ಯೆ – ಪೈರಿಂಗ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡ ಈಶ್ವರರಾವ್.....

ವಿಜಯನಗರ -

ಆಂಧ್ರ ಪ್ರದೇಶದ ವಿಜಯನಗರ ಜಿಲ್ಲೆಯ ಹೋಮ್ ಗಾರ್ಡ್ಸ್ ಉಸ್ತುವಾರಿಯಾಗಿದ್ದ ಸಶಸ್ತ್ರ ಮೀಸಲು ಪೊಲೀಸ್ ಇನ್ಸ್ಪೆಕ್ಟರ್ ಪಿ.ಈಶ್ವರ ರಾವ್ (34) ಸೇವಾ ರಿವಾಲ್ವರ್ನಲ್ಲಿ ಫೈರಿಂಗ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.ವಿಜಯನಗರ ಜಿಲ್ಲೆಯಲ್ಲಿರುವ ಪೊಲೀಸ್ ಕ್ವಾಟ್ರರ್ಸ್ ನ ತಮ್ಮ ವಸತಿ ಗೃಹದಲ್ಲಿ ಘಟನೆ ನಡೆದಿದೆ. ಮನೆಯಲ್ಲಿದ್ದ ಈಶ್ವರ ರಾವ್ ಕೋಣೆಗೆ ತೆರಳಿ ಬಾಗಿಲು ಹಾಕಿಕೊಂಡು ಫೈರಿಂಗ್ ಮಾಡಿಕೊಂಡಿದ್ದಾರೆ.

ಈ ವೇಳೆ ಅವರ ಪತ್ನಿ ಹರಿಪ್ರಿಯಾ ಮನೆಯಲ್ಲಿದ್ದರು. ಫೈರಿಂಗ್ ಶಬ್ದ ಕೇಳಿ ಆಘಾತಕ್ಕೆ ಒಳಗಾದ ಹರಿಪ್ರಿಯಾ, ಗಂಡನ ಸ್ಥಿತಿ ನೋಡಿ ತಕ್ಷಣ ಪೊಲೀಸ್ ಠಾಣೆಗೆ ಮಾಹಿತಿ ನೀಡಿದರು.ಈಶ್ವರ್ ಅವರನ್ನು ತಕ್ಷಣ ಆಸ್ಪತ್ರೆಗೆ ಸ್ಥಳಾಂತರಿ ಸಿದಾದರೂ ಅಷ್ಟರಲ್ಲಾಗಲೇ ಈಶ್ವರ್ ಪ್ರಾಣ ಪಕ್ಷಿ ಹಾರಿ ಹೋಗಿತ್ತು.ಆಸ್ಪತ್ರೆಗೆ ಭೇಟಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ದೀಪಿಕಾ ಅವರು ಮಾಹಿತಿ ಪಡೆದು ಕೊಂಡಿದ್ದಾರೆ.ಈಶ್ವರ ರಾವ್ ಅವರು ಪೂರ್ವ ಗೋದಾವರಿ ಜಿಲ್ಲೆಯ ವೇದುರುಪಕ ಸವರಮ್ ಮೂಲದವರು. 2011 ರಲ್ಲಿ ಆರ್ಎಸ್ಐ ಆಗಿ ಪೊಲೀಸ್ ಇಲಾಖೆ ಸೇರಿದರು. 2020ರಿಂದ ಜಿಲ್ಲಾ ಸಶಸ್ತ್ರ ಮೀಸಲು ಪಡೆದ ಇನ್ಸ್ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.ನಾಲ್ಕು ವರ್ಷದ ಹಿಂದ ಷ್ಟೇ ಹರಿಪ್ರಿಯಾ ಎಂಬುವರನ್ನು ಮದುವೆಯಾಗಿದ್ದು ಸಧ್ಯ ಮೂರು ವರ್ಷದ ಹೆಣ್ಣು ಮಗಳಿದ್ದಾಳೆ.ಹರಿಪ್ರಿಯಾ ಪ್ರಸ್ತುತ 7 ತಿಂಗಳ ಗರ್ಭಿಣಿ.ವೈಯಕ್ತಿಕ ಕಾರಣಗಳಿಂದ ಈಶ್ವರ್ ರಾವ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಪ್ರಕರಣ ದಾಖಲಾಗಿದ್ದು ಸಾವಿಗೆ ನಿಖರವಾದ ಕಾರಣ ಪತ್ತೆಹಚ್ಚಲು ತನಿಖೆ ಆರಂಭವಾಗಿದೆ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...