ಬೆಂಗಳೂರು -
ರಾಜ್ಯದ ಸರ್ಕಾರಿ ಶಾಲೆಯ ಒಂದರಿಂದ 10ನೇ ತರಗತಿ ಮಕ್ಕಳಿಗೆ 2026- 27 ನೇ ಸಾಲಿನಲ್ಲಿ ವಿತರಿಸಿದ ಶೂ ಮತ್ತು ಸಾಕ್ಸ್ ಗಳ ಗುಣಮಟ್ಟದ ಬಗ್ಗೆ ಆರೋಪಗಳು ಕೇಳಿ ಬಂದ ಹಿನ್ನೆಲೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಈ ಒಂದು ಬೆನ್ನಲ್ಲೇ ತನಿಖೆ ಆರಂಭಗೊಂಡಿದೆ
ಸರ್ಕಾರಿ ಶಾಲೆಗಳ ಒಂದರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ವಿತರಿಸಿದ ಶೂ ಮತ್ತು ಸಾಕ್ಸ್ ಗಳು ಒಂದು ವಾರದಲ್ಲಿಯೇ ಕಿತ್ತುಕೊಂಡು ಹೋಗುತ್ತಿವೆ. ಈ ಹಿನ್ನೆಲೆಯಲ್ಲಿ ದೂರುಗಳು ಸಲ್ಲಿಕೆಯಾಗಿದ್ದವು. ಭ್ರಷ್ಟಾಚಾರ ಆರೋಪ ಕೂಡ ಕೇಳಿ ಬಂದಿದ್ದ ಹಿನ್ನೆಲೆ ಯಲ್ಲಿ ಲೋಕಾಯುಕ್ತರು ವರದಿ ಕೇಳಿದ್ದರು ಸಧ್ಯ ತನಿಖೆ ತೀವ್ರಗೊಂಡಿದ್ದು ಅಧಿಕಾರಿಗಳಲ್ಲಿ ಢವ ಢವ ಶುರುವಾಗಿದೆ
ಉಪ ಲೋಕಾಯುಕ್ತರ ಸೂಚನೆ ಬೆನ್ನಲ್ಲೇ ಉಪ ಲೋಕಾಯುಕ್ತ-2ರ ವ್ಯಾಪ್ತಿಯ 16 ಜಿಲ್ಲೆಗಳಿಗೆ ಸಂಬಂಧಿಸಿದಂತೆ ಉಪ ನಿರ್ದೇಶಕರು ಶಿಕ್ಷಣ ಇಲಾಖೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ವಿರುದ್ಧ ದೂರು ದಾಖಲಿಸಿದೆ. ಆಯಾ ಜಿಲ್ಲೆಯ ಪೊಲೀಸ್ ಅಧೀಕ್ಷಕರು ಈ ಬಗ್ಗೆ ಪ್ರಾಥಮಿಕ ತನಿಖೆ ನಡೆಸಿ ಸಂಬಂಧಿತ ದಾಖಲೆಗಳ ಜೊತೆಗೆ ಎರಡು ವಾರ ದೊಳಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.
ಎಲ್ಲಾ ಜಿಲ್ಲೆಗಳ ಉಸ್ತುವಾರಿ ಸಚಿವರು, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು, ಮುಖ್ಯಮಂತ್ರಿಗಳಿಗೂ ಈ ಕುರಿತಂತೆ ಸೂಕ್ತ ನಿರ್ದೇಶನ ನೀಡಲು ಸೂಚಿಸ ಲಾಗಿದೆ. ಮಕ್ಕಳಿಗೆ ವಿತರಿಸಲಾದ ಶೂ ಮತ್ತು ಸಾಕ್ಸ್ ಗಳು ಕಳಪೆ ಗುಣಮಟ್ಟದಿಂದ ಕೂಡಿದ ಬಗ್ಗೆ ದೂರು ಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಇತ್ತೀಚೆಗಷ್ಟೇ ಶಿಕ್ಷಣ ಇಲಾಖೆ ಕೂಡ ಆಯಾ ಜಿಲ್ಲೆಗಳ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ನೇತೃತ್ವ ದಲ್ಲಿ ತನಿಖೆಗೆ ಆದೇಶಿಸಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....