LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಕುಡಿಯುವ ನೀರಿನ ಪೈಪ್ ಲೈನ್ - ಕಾಮಗಾರಿಗೆ ಜಗದೀಶ್ ಶೆಟ್ಟರ್ ಭೂಮಿ ಪೂಜೆ

ಹುಬ್ಬಳ್ಳಿ -

24 ಲಕ್ಷ ವೆಚ್ಚದ ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿಗೆ ಹುಬ್ಬಳ್ಳಿಯಲ್ಲಿ ಚಾಲನೆ ನೀಡಲಾಯಿತು. ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಭೂಮಿ ಪೂಜಾ ಕಾಮಾಗಾರಿಗೆ ಚಾಲನೆ ನೀಡಿದರು. ನಗರದ ವಾರ್ಡ್ ನಂಬರ್ 35 ರ ಶ್ರೀ ಶಾಕ್ತ ಪೀಠ ನಗರ, ಗಣೇಶ ಕಾಲೋನಿ, ಧನ್ವಂತರಿ ಕಾಲೋನಿ, ಆಶ್ರಯ ಕಾಲೋನಿ , ಮಹಾಲಕ್ಷ್ಮಿ ಬಡಾವಣೆ, ಶಟ್ಟನ ಗೌಡ್ರ ಕಾಲೋನಿ ಸೇರಿದಂತೆ ಸುತ್ತಮುತ್ತಲಿನ ಬಡಾವಣೆಗಳಿಗೆ 24 ಲಕ್ಷ ವೆಚ್ಚದ ಕುಡಿಯುವ ನೀರಿನ ಸಂಪರ್ಕ ಕಲ್ಪಿಸುವ ಪೈಪ್ ಲೈನ್ ಕಾಮಗಾರಿಗೆ ಬೃಹತ್ ಮತ್ತು‌ ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಭೂಮಿ ಪೂಜೆ ನೆರವೇರಿಸಿದರು.

ಶಾಕ್ತ ಪೀಠ ನಗರದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು. ಅವಳಿ ನಗರದಲ್ಲಿ 24*7 ನಿರಂತರ ಕುಡಿಯುವ ನೀರು ಸರಬರಾಜು ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ. ಉಣಕಲ್ ಕೆರೆಯ ಹಿಂಬಾಗದ ಅನಧಿಕೃತವಾದ ಬಡಾವಣೆಗಳ ನಿವಾಸಿಗಳು ಕುಡಿಯುವ ನೀರಿನ ಸೌಲಭ್ಯ ಕಲ್ಪಿಸುಂತೆ ಹಲವು ಬಾರಿ ಮನವಿ ಮಾಡಿದ್ದರು.

ಇದರ ಅನ್ವಯ ಕುಡಿಯುವ ನೀರು ಸರಬರಾಜು ಮಂಡಳಿಯಿಂದ 24 ಲಕ್ಷ ವೆಚ್ಚದಲ್ಲಿ ಕುಡಿಯುವ ನೀರಿನ ಪೈಪ್ ಲೈನ್ ಸಂಪರ್ಕ ಕಲ್ಪಿಸಲಾಗುತ್ತಿದೆ ಎಂದರು. ಇನ್ನೂ 1 ಕಿ.ಮೀ ಮುಖ್ಯ ಪೈಪ್ ಲೈನ್ ಹಾಗೂ 400 ಮೀಟರ್ ಒಳ ಪೈಪ್ ಲೈನ್ ಗಳನ್ನು ಹೊಸದಾಗಿ ಹಾಕಲಾಗುತ್ತಿದೆ. ಅನಧಿಕೃತ ಬಡವಾಣೆಗಳನ್ನು ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗುತ್ತಿದೆ. ಉಣಕಲ್ ಹುಲಿಕೊಪ್ಪ ರಸ್ತೆಯನ್ನು ಲೋಕೋಪಯೋಗಿ ಇಲಾಖೆ ಅಡಿ ತರಲಾಗಿದೆ. ಶೀಘ್ರವಾಗಿ ರಸ್ತೆ ಅಗಲೀಕರಣದೊಂದಿಗೆ ಮೇಲ್ದರ್ಜೆಗೆ ಏರಿಸಲಾಗುವುದು.

ಉಣಕಲ್ ಕೆರೆಯ ಸುತ್ತ ಮುತ್ತ ಅನಧಿಕೃತ ಬಡಾವಣೆಗಳನ್ನು ನಿರ್ಮಿಸುವದನ್ನು ನಿಲ್ಲಿಸಬೇಕು. ಇದರಿಂದಾಗಿ ಕೆರೆ ಪರಿಸರ ಹಾಳಾಗುವುದು ಎಂದು ಶೆಟ್ಟರ್ ಹೇಳಿದರು. ಇನ್ನೂ ಉಣಕಲ್ ಕೆರೆ ಉಳಿಸಲು ಎಲ್ಲರೂ ಪ್ರಯತ್ನಿಸಬೇಕು. ಸ್ಮಾರ್ಟ್ ಸಿಟಿ ಅಡಿಯಲ್ಲಿ ಉಣಕಲ್ ಕೆರೆಯನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿ ‌ಪಡಿಸಲಾಗುತ್ತಿದೆ ಎಂದು‌ ಹೇಳಿದರು.ಈ ಒಂದು ಭೂಮಿ ಪೂಜಾ ಕಾರ್ಯಕ್ರಮದಲ್ಲಿ ಪಾಲಿಕೆ ಮಾಜಿ ಸದಸ್ಯರಾದ ಮಹೇಶ್ ಬುರಲಿ, ತಿಪ್ಪಣ್ಣ ಮಜ್ಜಿಗೆ, ಮುಖಂಡರಾದ ಮಲ್ಲಿಕಾರ್ಜುನ ಸಾವಕಾರ್, ಸಂತೋಷ್ ಚೌವ್ಹಾಣ್ ಸೇರಿದಂತೆ ಪಕ್ಷದ ಹಲವು ನಾಯಕರು ಮುಖಂಡರು ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...