LIVE TV LocalCrimeNationalInternationalPoliticsEducationTechnologyEntertainmentSportsFeature
State News

ಹೆಡ್ ಕಾನ್ಸ್‌ಟೇಬಲ್ ಗೆ ಜೈಲು ಶಿಕ್ಷೆ ಲಂಚ ಪಡೆದ ಪ್ರಕರಣ ದಲ್ಲಿ ನಾಲ್ಕು ವರ್ಷ ಜೈಲು.....

ಬೆಂಗಳೂರು -

ಪ್ರಕರಣವೊಂದರಲ್ಲಿ ಬಂಧಿತರಾಗಿದ್ದ ಆರೋಪಿಯ ದ್ವಿಚಕ್ರ ವಾಹನ ಬಿಡುಗಡೆಗೆ ₹10,000 ಲಂಚ ಪಡೆದ ಆರೋಪದ ಪ್ರಕರಣದಲ್ಲಿ ನಗರದ ಬಾಗಲ ಗುಂಟೆ ಪೊಲೀಸ್‌ ಠಾಣೆಯ ಹೆಡ್‌ ಕಾನ್‌ಸ್ಟೆಬಲ್‌ ಮಂಜಣ್ಣ ಎಂ.ಕೆ. ದೋಷಿ ಎಂದು ಸಾರಿರುವ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಪ್ರಕರಣಗಳ ವಿಶೇಷ ನ್ಯಾಯಾಲಯ, ಅಪರಾಧಿಗೆ ನಾಲ್ಕು ವರ್ಷ ಜೈಲು ಶಿಕ್ಷೆ ಮತ್ತು ₹ 1 ಲಕ್ಷ ದಂಡ ವಿಧಿಸಿದೆ.

ಹೌದು 2017ರ ಜುಲೈ ತಿಂಗಳಿನಲ್ಲಿ ಬಾಗಲಗುಂಟೆ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದರಲ್ಲಿ ವ್ಯಕ್ತಿಯೊಬ್ಬರನ್ನು ಬಂಧಿಸಲಾಗಿತ್ತು.ಅವರ ಬೈಕ್‌ ಅನ್ನೂ ಪೊಲೀಸರು ವಶಪಡಿಸಿಕೊಂಡಿದ್ದರು. ನ್ಯಾಯಾಲಯದಿಂದ ಜಾಮೀನು ಪಡೆದು ಬಿಡುಗಡೆ ಯಾಗಿದ್ದ ಆ ವ್ಯಕ್ತಿ, ತಮ್ಮ ಬೈಕ್‌ ಮರಳಿಸುವಂತೆ ಪೊಲೀಸರನ್ನು ಸಂಪರ್ಕಿಸಿದ್ದರು.ಬೈಕ್‌ ನೀಡಲು ₹ 20,000 ಲಂಚ ಕೊಡುವಂತೆ ಹೆಡ್‌ ಕಾನ್‌ಸ್ಟೆಬಲ್‌ ಮಂಜಣ್ಣ ಬೇಡಿಕೆ ಇಟ್ಟಿದ್ದರು.ಈ ಕುರಿತು ಬೈಕ್‌ ಮಾಲೀಕ ಎಸಿಬಿ ಬೆಂಗಳೂರು ನಗರ ಘಟಕಕ್ಕೆ ದೂರು ನೀಡಿದ್ದರು.2017ರ ಜುಲೈ 15ರಂದು ದೂರುದಾರರಿಂದ ₹ 10,000 ಲಂಚ ಪಡೆಯುತ್ತಿದ್ದ ಹೆಡ್‌ ಕಾನ್‌ಸ್ಟೆಬಲ್‌ ಬಂಧಿಸಿದ್ದ ಎಸಿಬಿ ಅಧಿಕಾರಿ ಗಳು 2018ರಲ್ಲಿ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು.

ಮೂರು ವರ್ಷಗಳಿಂದಲೂ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿತ್ತು.ನಿನ್ನೆ ಈ ಒಂದು ಪ್ರಕರ ಣದ ವಿಚಾರಣೆಯನ್ನು ಪೂರ್ಣಗೊಳಿಸಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ಮಂಜಣ್ಣ ದೋಷಿ ಎಂದು ಆದೇಶ ನೀಡಿದ್ದಾರೆ. ಅಪರಾಧಿಗೆ ನಾಲ್ಕು ವರ್ಷಗಳ ಜೈಲು ಶಿಕ್ಷೆ ಮತ್ತು ₹ 1 ಲಕ್ಷ ದಂಡ ವಿಧಿಸಿ ಆದೇಶ ಹೊರಡಿಸಿದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....