LIVE TV LocalCrimeNationalInternationalPoliticsEducationTechnologyEntertainmentSportsFeature
Local News

ವಕೀಲರ ಪೊಲೀಸರ ಜಟಾಪಟಿ – ಯಶಶ್ವಿ ಸಂಧಾನ ಸಭೆ

ಧಾರವಾಡ -

ಹುಬ್ಭಳ್ಳಿಯ ನವನಗರದಲ್ಲಿ ವಕೀಲ ವಿನೋದ ಪಾಟೀಲ ಬಂಧನ ಖಂಡಿಸಿ ಪೊಲೀಸರು ಮತ್ತು ವಕೀಲರ ನಡುವೆ ನಡೆಯುತ್ತಿದ್ದ ಸಂಘರ್ಷ ಕೊನೆಯಾಗಿದೆ. ಕಳೆದ ನವಂಬರ್ 26 ರಂದು ನವನಗರದ ಕರ್ನಾಟಕ ಸರ್ಕಲ್ ಬಳಿ ರಾತ್ರಿ ಹತ್ತೂವರೆಗೆ ವಕೀಲ ವಿನೋದ ಪಾಟೀಲ ಕೆಲವೊಂದಿಗೆ ಸೇರಿಕೊಂಡು ಗಲಾಟೆ ಮಾಡುತ್ತಿದ್ದರು. ಈ ಕುರಿತಂತೆ ಸಾರ್ವಜನಿಕರು ನವನಗರ ಪೊಲೀಸ್ ಠಾಣೆಗೆ ಪೊನ್ ಮಾಡಿ ಮಾಹಿತಿಯನ್ನು ನೀಡಿದ್ದರು. ಈ ಮಾಹಿತಿ ಬರುತ್ತಿದ್ದಂತೆ ಸ್ಥಳಕ್ಕೇ ಇನಸ್ಪೇಕ್ಟರ್ ಪ್ರಭು ಸೂರಿನ್ ಮತ್ತು ಸಿಬ್ಬಂದಿಗಳು ಹೋಗಿ ವಿಚಾರಣೆ ಮಾಡಿ ಇಲ್ಲಿಂದ ಹೋಗಿ ವಿವಾದವಿದ್ದರೇ ಪೊಲೀಸ್ ಠಾಣೆಗೆ ಬನ್ನಿ ಎಂದು ಹೇಳಿದ್ದರು. ನಾವು ಬರೊದಿಲ್ಲ ಹೊಗೊದಿಲ್ಲ ಎಂದು ಮಾತನಾಡಿ ಪೊಲೀಸರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದರು. ಇದನ್ನು ಗಂಭಿರವಾಗಿ ತಗೆದುಕೊಂಡಿದ್ದ ಪೊಲೀಸ್ ಇನಸ್ಪೇಕ್ಟರ್ ಪ್ರಭು ಸೂರಿನ್ ವಿನೋದ ಪಾಟೀಲ್ ರನ್ನು ವೈಧ್ಯಕೀಯ ಪರೀಕ್ಷೆ ಮಾಡಿಸಿ ಮೂವರನ್ನು ಬಂಧಿಸಿ ಕೈಗೆ ಬೇಡಿ ಹಾಕಿ ನ್ಯಾಯಾಲಯಕ್ಕೇ ಹಾಜರು ಮಾಡಿ ಜೈಲಿಗೆ ಕಳಿಸಿದ್ದರು.ಅತ್ತ ಇದೇಲ್ಲ ಆಗುತ್ತಿದ್ದಂತೆ ಇತ್ತ ಇದನ್ನು ಗಂಭಿರವಾಗಿ ತಗೆದುಕೊಂಡ ಹುಬ್ಬಳ್ಳಿ ಧಾರವಾಡ ನ್ಯಾಯವಾದಿಗಳು ಬೀದಿಗಿಳಿದು ವಕೀಲ ವಿನೋದ ಪಾಟೀಲ ಬೆನ್ನಿಗೆ ನಿಂತು ಸಭೆ ಮಾಡಿ ವಕೀಲರೊಂದಿಗೆ ಹೀಗೆ ನಡೆದುಕೊಂಡವರ ಮೇಲೆ ಸೂಕ್ತ ಕ್ರಮವನ್ನು ಕೈಗೊಳ್ಳುವಂತೆ ಪ್ರತಿಭಟನೆ ಮಾಡಿದ್ದರು. ಅಲ್ಲದೇ ಕೆಲ ಬೇಡಿಕೆಗಳನ್ನು ಇಟ್ಟುಕೊಂಡು ಪೊಲೀಸ್ ಅಧಿಕಾರಿಗಳಿಗೆ ಗಡುವು ನೀಡಿದ್ದರು. ಇನಸ್ಪೇಕ್ಟರ್ ಪ್ರಭು ಸೂರಿನ್ ಅವರನ್ನು ಕೂಡಲೇ ಸೇವೆಯಿಂದ ಅಮಾನತು ಮಾಡಬೇಕು ಅವರ ಮೇಲೆ ಪ್ರಕರಣವನ್ನು ದಾಖಲಿಸಿ ತನಿಖೆ ಮಾಡುವಂತೆ ಪಟ್ಟು ಹಿಡಿದಿದ್ದರು. ವಕೀಲರ ಬೇಡಿಕೆಗಳಿಗೆ ಮಣಿದ ಹಿರಿಯ ಪೊಲೀಸ್ ಅಧಿಕಾರಿಗಳು ವಕೀಲರ ಕೈಗೆ ಬೇಡಿ ಹಾಕಿದ ಒರ್ವ ಪೇದೆಯನ್ನು ಅಮಾನತು ಮಾಡಿ ಇತ್ತ ಇನ್ಸ್ಪೆಕ್ಟರ್ ಅವರನ್ನು ಪೊಲೀಸ್ ಆಯುಕ್ತರ ಕಚೇರಿಗೆ ವರ್ಗಾವಣೆ ಮಾಡಿದ್ದರು. ಇಷ್ಟಾದರೂ ಕೂಡಾ ಎಚ್ಚೇತ್ತುಕೊಳ್ಳದ ವಕೀಲರು ನಾಳೆ ಸೋಮವಾರದ ಗಡುವು ನೀಡಿದ್ದರು. ಸೋಮವಾರದ ಒಳಗಾಗಿ ಇನ್ಸ್ಪೆಕ್ಟರ್ ಅವರನ್ನು ಸೇವೆಯಿಂದ ಅಮಾನತು ಮಾಡಬೇಕು ಅವರ ಮೇಲೆ ಪ್ರಕರಣ ದಾಖಲಿಸಿ ತನಿಖೆ ಮಾಡುವಂತೆ ಪಟ್ಟು ಹಿಡಿದು ಗಡುವು ನೀಡಿದ್ದರು. ಗಡುವು ನೀಡಿದ ಹಿನ್ನಲೆಯಲ್ಲಿ ಇದರಿಂದ ಎಚ್ಚೆತ್ತುಕೊಂಡ ಹಿರಿಯ ಪೊಲೀಸ್ ಅಧಿಕಾರಿಗಳು ಧಾರವಾಡ ಜಿಲ್ಲಾ ವಕೀಲರ ಸಂಘದಲ್ಲಿ ತುರ್ತು ಸಭೆ ಮಾಡಿ ರಾಜಿ ಸಂಧಾನವನ್ನು ಮಾಡಿದ್ರು.

ಕೆಲವೊತ್ತು ಆಗಿರುವ ವಿಚಾರಗಳ ಕುರಿತಂತೆ ಮಾತನಾಡಿ ಕೊನೆಗೆ ಇನಸ್ಪೇಕ್ಟರ್ ಪ್ರಬು ಸೂರಿನ್ ಅವರಿಂದ ಮಾತನಾಡಿಸಿ ಇದೊಂದು ಉದ್ದೇಶಪೂರ್ವಕವಾದ ಘಟನೆಯಲ್ಲ ಆಗಿರುವ ಘಟನೆಗೆ ವಿಷಾದವ್ಯಕ್ತಪಡಿಸುತ್ತೇನೆ ಎನ್ನುತ್ತಾ ಕ್ಷಮೆ ಕೇಳಿದರು. ಇನ್ನೊಮ್ಮೆ ಹೀಗೆ ಆಗಲಾರದಂತೆ ನೋಡಿಕೊಳ್ಳುತ್ತೇವೆ ಎನ್ನುತ್ತಾ ರಾಜಿ ಸಂಧಾನ ಸಭೆಯನ್ನು ಮುಗಿಸಿದ್ರು.

ಇನ್ನೂ ಈ ಒಂದು ಸಭೆಯಲ್ಲಿ ವಕೀಲರ ಸಂಘದ ಅಧ್ಯಕ್ಷರು ಮುಖಂಡರು ನ್ಯಾಯವಾದಿಗಳು ಉಪಸ್ಥಿತರಿದ್ದರು. ಇನ್ನೂ ಇತ್ತ ಪೊಲೀಸ್ ಇಲಾಖೆಯಿಂದ ಉಪನಗರ ಇನಸ್ಪೇಕ್ಟರ್ ಪ್ರಮೋದ ಯಲಿಗಾರ, ವಿದ್ಯಾಗಿರಿ ಪೊಲೀಸ್ ಠಾಣೆ ಇನಸ್ಪೇಕ್ಟರ್ ಮಹಾಂತೇಶ ಬಸಾಪೂರ , ಸೇರಿದಂತೆ ಹಲವರು ಉಪಸ್ಥಿತರಿದ್ದರು.ಅಂತೂ ಇಂತೂ ಕಳೆದ ಹತ್ತು ದಿನಗಳಿಂದ ವಕೀಲರು ಮತ್ತು ಪೊಲೀಸರ ನಡುವೆ ನಡೆಯುತ್ತಿದ್ದ ತಿಕ್ಕಾಟ ಶಾಂತವಾಗಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....