LIVE TV LocalCrimeNationalInternationalPoliticsEducationTechnologyEntertainmentSportsFeature
State News

ಮಂಗಳೂರಿನಲ್ಲಿ ಅಪಹರಣ - ಕೋಲಾರದಲ್ಲಿ ಬಂಧನ - ಸುಖಾಂತ್ಯ ಕಂಡ ಮಗು ಅಪಹರಣ ಪ್ರಕರಣ

ಬೆಳ್ತಂಗಡಿ  -

ಉಜಿರೆಯಲ್ಲಿ ಬಾಲಕನ ಕಿಡ್ನಾಪ್ ಪ್ರಕರಣ ಕೊನೆಗೂ ಸುಖಾಂತ್ಯ ಕಂಡಿದೆ. ಪೊಲೀಸರು ಮಗುವನ್ನು ಸುರಕ್ಷಿತ ವಾಗಿ ಕೋಲಾರ ಪೊಲೀಸರು ರಕ್ಷಿಸಿದ್ದಾರೆ. ಕೋಲಾರದಲ್ಲಿ ಮಗುವನ್ನು ಪತ್ತೆ ಹಚ್ಚಿ 6 ಜನ ಅಪಹರಣಕಾರರನ್ನು ಪೊಲೀಸರು ಬಂಧಿಸಿದ್ದಾರೆ‌. ಅಪಹರಣವಾದ 48 ಗಂಟೆ ಗಳಲ್ಲಿ ಪ್ರಕರಣವನ್ನು ಭೇದಿಸಿದ್ದಾರೆ. ಉಜಿರೆಯ ಬಿಜೋಯ್ ಅವರ ಮಗ ಅನುಭವ್ (8) ಮನೆಯಂಗಳದಲ್ಲಿ ಆಡುತ್ತಿದ್ದಾಗಲೇ ಎರಡು ದಿನಗಳ ಹಿಂದೆ ಅಪಹರಣಕಾರರು ಅಪಹರಿಸಿದ್ದರು.

ಕೋಲಾರದ ಮಾಸ್ತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಹರಣಕಾರರನ್ನು ಮಗುವಿನೊಂದಿಗೆ ವಿಶೇಷ ತಂಡ ಪೊಲೀಸರು ಶನಿವಾರ ಬೆಳಗ್ಗೆ ಪತ್ತೆ ಹಚ್ಚಿದರು. ಕೂಡಲೇ ಅಪಹರಣಕಾರರನ್ನು ಕೋಲಾರ ಪೊಲೀಸ್ ಠಾಣೆಗೆ ಕರೆತರಲಾಯಿತು. ಬೆಳ್ತಂಗಡಿ ನ್ಯಾಯಾಲಯಕ್ಕೆ ಆರೋಪಿಗಳನ್ನು ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ., ಉಪನಿರೀಕ್ಷಕ ಬಂದಕುಮಾರ್, ಧರ್ಮಸ್ಥಳ ಠಾಣೆ ಉಪನಿರೀಕ್ಷಕ ಪವನ್ ಕುಮಾರ್ ನೇತೃತ್ವದ ವಿಶೇಷ ತಂಡ ಹಾಜರು ಪಡಿಸಿತು.ಪ್ರಕರಣ ಘಟಿಸಿದ ಕೂಡಲೇ ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್ ನೇತೃತ್ವದಲ್ಲಿ ನಾಲ್ಕು ತಂಡಗಳ ರಚಿಸಿ ಪ್ರಕರಣವನ್ನು ಬೇಧಿಸಲು ಕಾರ್ಯಶೀಲರಾಗಿದ್ದರು.ಕೊನೆಗೂ ಮಂಗಳೂರಿನ ಕಿಡ್ಯಾಪರ್ಸ್ ಕೋಲಾರದಲ್ಲಿ ಅರೆಸ್ಟ್ ಆಗಿದ್ದಾರೆ.ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕು ಮಾಸ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಕೂರ್ನಹೊಸಳ್ಳಿ ಗ್ರಾಮದಲ್ಲಿ ಅರೆಸ್ಟ್ ಆಗಿದ್ದಾರೆ. ಕೂರ್ನಹೊಸಳ್ಳಿ ಗ್ರಾಮದ ಮಂಜುನಾಥ್ ಎಂಬುವರ ಮನೆಯೊಂದರಲ್ಲಿ ಮಗುವನ್ನು ಇರಿಸಿದ್ದರು.ಕೋಲಾರ ಎಸ್ಪಿ ಕಾರ್ತಿಕ್ ರೆಡ್ಡಿ‌ ನೆರವಿನಿಂದ ಬಂಧಿಸಿದ ಮಂಗಳೂರು ಪೊಲೀಸ್ ವಿಶೇಷ ತಂಡ ಯಶಸ್ವಿಯಾಗಿ ಕಾರ್ಯಾಚರಣೆ ಮಾಡಿ ಮಗುವನ್ನು ರಕ್ಷಣೆ ಮಾಡಲಾಗಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...