LIVE TV LocalCrimeNationalInternationalPoliticsEducationTechnologyEntertainmentSportsFeature
State News

NEP ಪಠ್ಯಕ್ರಮ ಅಳವಡಿಕೆ ಹೇಗೆ ಗೊತ್ತಾ - ಯಾವಾಗ ಯಾವ ಯಾವ ಶಾಲೆಯಲ್ಲಿ ಅಳವಡಿಸುತ್ತಾರೆ ಗೊತ್ತಾ ಕಂಪ್ಲೀಟ್ ಮಾಹಿತಿ.....

ಬೆಂಗಳೂರು -

ಎನ್‌ಇಟಿ ಪ್ರಕಾರವಾಗಿ ಶಾಲೆಪೂರ್ವ ವಿದ್ಯಾರ್ಥಿಗಳಿಗೆ ಹೊಸ ಪಠ್ಯಕ್ರಮ ಇರಲಿದೆ.ತರಬೇತಿ ಪಡೆದ ಅಂಗನವಾಡಿ ಕಾರ್ಯಕರ್ತರು ಈ ಪಠ್ಯಕ್ರಮ ಬೋಧಿಸುತ್ತಾರೆ. ಅಲ್ಲಿಯ ವರೆಗೂ ವಿದ್ಯಾರ್ಥಿಗಳು ಹಿಂದಿನಂತೆ ಚಟುವಟಿಕೆ ಆಧಾರಿ ತವಾಗಿ ಕಲಿಕೆ ಮಾಡಲಿದ್ದಾರೆ.ಅಂಗನವಾಡಿಗಳಲ್ಲಿ ಜಾರಿಗೆ ಬರಲಿರುವ ಎನ್‌ಇಪಿ ಆಧಾರಿತ ಪಠ್ಯಕ್ರಮದಲ್ಲಿ ಒಂದನೇ ತರಗತಿ ಸೇರ್ಪಡೆಗೆ ಅಗತ್ಯವಾಗುವ ನಿಟ್ಟಿನಲ್ಲಿ ಕಲಿಕೆಗಳು ಇರುತ್ತವೆ ಎಂದು ಎನ್‌ಇಪಿ ಕಾರ್ಯಪಡೆ ಮಾಹಿತಿ ನೀಡಿ ದ್ದಾರೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ರಚಿಸಿದ ಒಂದು ಉಪಸಮಿತಿ ಮತ್ತು ಪ್ರಾಥಮಿಕ ಪ್ರೌಢ ಶಿಕ್ಷಣ ಇಲಾಖೆ ಸೇರಿ ಹೊಸ ಪಠ್ಯಕ್ರಮವನ್ನು ರಚಿಸುವ ಕಾರ್ಯ ಮುಂದುವರಿದಿದೆ. ಅದರೆ ಈಗ ಅಂಗನವಾಡಿ ಶಾಲೆಗಳಿಗೆ ಕೊಡಲಾಗುತ್ತಿರುವುದು ತಾತ್ಕಾಲಿಕ ಪಠ್ಯಕ್ರಮವಾಗಿರುತ್ತದೆ ಎನ್‌ಸಿಇಆರ್‌ಟಿಯವರು ಅಕ್ಟೋಬರ್‌ನಲ್ಲಿ ಹೊಸ ಪಠ್ಯಕ್ರ ಮದ ರೂಪುರೇಖೆ ಪ್ರಕಟಿಸಲಿದ್ದಾರೆ.ಅದನ್ನು ಆಧರಿಸಿ ಪಠ್ಯಕ್ರಮವನ್ನು ಪರಿಷ್ಕರಿಸಲಾಗುತ್ತದೆ ಎಂದು ಅಧಿಕಾರಿ ಗಳು ಹೇಳಿದ್ದಾರೆ.

ಇತ್ತ ಎನ್‌ಇಪಿ ಪಠ್ಯಕ್ರಮ ಜಾರಿಗೆ ತರಲಿರುವ ಅಂಗನ ವಾಡಿ ಕಾರ್ಯಕರ್ತರು ಈಗಲೂ ತರಬೇತಿಯಲ್ಲಿ ನಿರತರಾ ಗಿದ್ದಾರೆ.ಒಟ್ಟು 20 ಸಾವಿರ ಅಂಗನವಾಡಿ ಶಿಕ್ಷಕರ ಪೈಕಿ ಎಂಟು ಸಾವಿರ ಮಂದಿಗೆ ತರಬೇತಿ ಬಾಕಿ ಇದೆ.ರಾಜ್ಯದಲ್ಲಿ ಈ ಶೈಕ್ಷಣಿಕ ವರ್ಷಕ್ಕೆ ಮುನ್ನವೇ ಎನ್‌ಇಪಿ ಮಾದರಿಯಲ್ಲಿ ಪಠ್ಯಕ್ರಮ ಅಳವಡಿಸಲು ವಿಳಂಬವಾಗಲು ಇಲಾಖೆಗಳ ನಡುವೆ ಸಮನ್ವಯತೆ ಕೊರತೆ ಕಾರಣ ಎನ್ನಲಾಗಿದೆ. ಎನ್‌ಇಪಿ ಯೋಜನೆಯಲ್ಲಿ ಅಂಗನವಾಡಿ ಕೇಂದ್ರಗಳನ್ನು ಕೆಳ ಪ್ರಾಥಮಿಕ ಶಾಲೆಗಳ (ಒಂದು ಮತ್ತು ಎರಡನೇ ತರಗತಿ)ಜೊತೆ ವಿಲೀನ ಮಾಡುವ ಪ್ರಸ್ತಾವ ಇದೆ.ಹೀಗಾಗಿ ಅಂಗನವಾಡಿ ಕಾರ್ಯಕರ್ತೆಯರು ಕೆಲಸ ಕಳೆದುಕೊಳ್ಳುವ ಭಯದಲ್ಲಿ ಎನ್‌ಇಪಿ ಅಳವಡಿಕೆಗೆ ಮನಸ್ಸು ಮಾಡಿರಲಿಲ್ಲ. ಅವರನ್ನು ಒಪ್ಪಿಸಿ ತರಬೇತಿ ನೀಡುವ ಕೆಲಸ ವಿಳಂಬವಾ ಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....