LIVE TV LocalCrimeNationalInternationalPoliticsEducationTechnologyEntertainmentSportsFeature
State News

ಪೌರ ಕಾರ್ಮಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿದ ಪಾಲಿಕೆಯ CAO - ಸಮಸ್ಯೆಗಳಿಗೆ ಸ್ಪಂದಿಸಿದ ಮುಖ್ಯ ಲೆಕ್ಕಾಧಿಕಾರಿ ಶಂಕರಾನಂದ ಬನಶಂಕರಿ ಯವರಿಗೆ ಸನ್ಮಾನಿಸಿ ಗೌರವಿಸಿದ ಪೌರಕಾರ್ಮಿಕರು ನೌಕರರ ಸಂಘ.....

ಹುಬ್ಬಳ್ಳಿ -

ಪೌರ ಕಾರ್ಮಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿದ ಪಾಲಿಕೆಯ CAO - ಸಮಸ್ಯೆಗಳಿಗೆ ಸ್ಪಂದಿಸಿದ ಮುಖ್ಯ ಲೆಕ್ಕಾಧಿಕಾರಿ ಶಂಕರಾನಂದ ಬನಶಂಕರಿ ಯವರಿಗೆ ಸನ್ಮಾನಿಸಿ ಗೌರವಿಸಿದ ಪೌರಕಾರ್ಮಿಕರು ನೌಕರರ ಸಂಘ.....

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಪೌರ ಕಾರ್ಮಿಕರ ಕೆಲವೊಂದಿಷ್ಟು ಸಮಸ್ಯೆ ಮತ್ತು ಬೇಡಿಕೆಗಳ ಕುರಿತಂತೆ ಪಾಲಿಕೆಯ ಮುಖ್ಯ ಲೆಕ್ಕಾಧಿಕಾರಿ ಶಂಕರಾ ನಂದ ಬನಶಂಕರಿಯವರು ಸ್ಪಂದಿಸಿದ್ದಾರೆ ಹೌದು ಪ್ರಮುಖವಾಗಿ ಪೌರ ಕಾರ್ಮಿಕರಿಗೆ ಪ್ರಮುಖ ಬೇಡಿಕೆ ಯಾಗಿದ್ದ ಪ್ರತಿ ತಿಂಗಳು 5ನೇ ದಿನಾಂಕದ ಒಳಗಾಗಿ ವೇತನ ಮಾಡುವ ಕುರಿತಂತೆ ಬೇಡಿಕೆಯನ್ನು ಇಟ್ಟಿದ್ದ ಪೌರ ಕಾರ್ಮಿಕರ ಮನವಿಯಂತೆ ಸಧ್ಯ 5ನೇ ದಿನಾಂಕದ ಒಳಗಾಗಿ ವೇತನವಾಗುತ್ತಿದೆ.

ಇದರೊಂದಿಗೆ.868 ಮಹಿಳಾ ಪೌರ ಕಾರ್ಮಿಕರಿಗೆ ವೈಧ್ಯಕೀಯ ವಿಶೇಷ ಭತ್ಯೆ ಯನ್ನು ನೀಡಲಾಗುತ್ತಿದ್ದು ಇನ್ನೂ ಈ ಹಿಂದೆ ಜುಲೈ ತಿಂಗಳಿನಲ್ಲಿ ನಡೆದ ಪ್ರತಿಭಟ ನೆಯ ಸಮಯದಲ್ಲಿ 10 ದಿನದ ವೇತನವನ್ನು ನೀಡುವ ಬಗ್ಗೆ ಮನವಿ ಮಾಡಲಾಗಿತ್ತು ಇದನ್ನು ಸಧ್ಯ ನೀಡಲಾ ಗುತ್ತಿದ್ದು ಇದರೊಂದಿಗೆ 126 ಖಾಯಂ ಪೌರ ಕಾರ್ಮಿಕರ ವೇತನವನ್ನು ನೀಡಲಾಗುತ್ತಿದ್ದು

ಇದೇಲ್ಲಾ ಬೇಡಿಕೆಗಳ ಕುರಿತಂತೆ ಸಾಮಾನ್ಯ ಸಭೆಯಲ್ಲಿ ಠರಾವು ಮಾಡಲಾಗಿತ್ತು ಈ ಒಂದು ಬೇಡಿಕೆಗಳನ್ನು ತ್ವರಿತವಾಗಿ ಈಡೇರಿಸಿದ ಹಿನ್ನಲೆಯಲ್ಲಿ ಪಾಲಿಕೆಯ ಮುಖ್ಯ ಲೆಕ್ಕಾಧಿಕಾರಿಯವರಿಗೆ ಪೌರ ಕಾರ್ಮಿಕರು ಮತ್ತು ನೌಕರರ ಸಂಘದಿಂದ ಸನ್ಮಾನಿಸಿ ಗೌರವಿಸಲಾ ಯಿತು.ಹುಬ್ಬಳ್ಳಿಯ ಕಚೇರಿಯಲ್ಲಿ ಧಾರವಾಡ ಜಿಲ್ಲಾ ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡಗಳ ಪೌರಕಾರ್ಮಿಕರು ಮತ್ತು ನೌಕರರ ಸಂಘದ ವತಿಯಿಂದ ಈ ಒಂದು ಸನ್ಮಾನವನ್ನು ಮಾಡಿ ಗೌರವಿಸಲಾಯಿತು.

ಶಾಲು ಹೊದಿಸಿ ಮುತ್ತಿನ ಮಾಲಿ ಹಾಕಿ ಸಿಹಿಯನ್ನು ತಿನ್ನಿಸುವ ಮೂಲಕ ಅಭಿನಂದನೆಗಳನ್ನು ಸಲ್ಲಿಸಿದ ಪೌರ ಕಾರ್ಮಿಕರು ಮತ್ತು ಸಂಘದವರು ಆತ್ಮೀಯವಾಗಿ ಸನ್ಮಾನಿಸಿ ಗೌರವವನ್ನು ಸಲ್ಲಿಸಿದರು. ಈ ಒಂದು ಸಂದರ್ಭದಲ್ಲಿ ವಿಜಯ ಗುಂಟ್ರಾಳ ಜೊತೆ ಗಂಗಮ್ಮ ಸಿದ್ರಾಂಪೂರ,ಗಾಳೆಪ್ಪ ಧ್ವಾಸಲಕೇರಿ,ಅನಿತಾ ಇನಗೊಂಡ,ಮರೆಪ್ಪ ಭೂಕನೆಟ್ಟಿ,ಪಾರವ್ವ ಹೊಸಮನಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಅಲಿ ಕುಂದಗೋಳ ಜೊತೆ ಪ್ರಮೋದ್ ಕಪಲಿ ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ ಧಾರವಾಡ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...