LIVE TV LocalCrimeNationalInternationalPoliticsEducationTechnologyEntertainmentSportsFeature
State News

ಕಲಿಕಾ ಚೇತರಿಕೆ ಹಾಳೆಗಳಿಗೆ ಅನುದಾನದ ಕೊರತೆ ಶಿಕ್ಷಕರೆ ಮಾಡಿಸುತ್ತಿದ್ದಾರೆ ಝರಾಕ್ಸ್.....

ಬೆಂಗಳೂರು -

ಪ್ರಾಥಮಿಕ ಮತ್ತು ಪ್ರೌಢಶಾಲೆಯ ಮಕ್ಕಳಿಗೆ ಆರಂಭಿಸಿ ರುವ ಕಲಿಕಾ ಚೇತರಿಕೆಯ ಹಾಳೆಗಳಿಗೂ ಸರ್ಕಾರ ಅನು ದಾನದ ಕೊರತೆಯಾಗಿದೆ.ಶಿಕ್ಷಕರೇ ಕಲಿಕಾ ಹಾಳೆಗಳ ಝೆರಾಕ್ಸ್‌ ಪ್ರತಿ ಮಾಡಿಸಿಕೊಂಡು ವಿದ್ಯಾರ್ಥಿಗಳಿಗೆ ಬೋಧನೆ ಮಾಡುವಂತೆ ಶಿಕ್ಷಣ ಇಲಾಖೆ ಶಿಕ್ಷಕರಿಗೆ ಸೂಚಿ ಸಿದೆ.ವಿದ್ಯಾ ಪ್ರವೇಶ- ಕಲಿಕಾ ಚೇತರಿಕೆ'ಯ ಕಲಿಕಾ ಹಾಳೆ ಗಳನ್ನು ಝೆರಾಕ್ಸ್‌ ಮಾಡಿಸಲು ದಾನಿಗಳ ಬಳಿ ಹಣ ಸಂಗ್ರಹಿಸಿ ಎಂದು ಸಮಗ್ರ ಶಿಕ್ಷಣ ಯೋಜನೆ ರಾಜ್ಯ ನಿರ್ದೇ ಶಕರು ಜೂ. 27ರಂದು ಸುತ್ತೋಲೆ ಹೊರಡಿಸಿದ್ದಾರೆ.

ಕೋವಿಡ್‌ ಕಾರಣಕ್ಕೆ ವಿದ್ಯಾರ್ಥಿಗಳ ಕಲಿಕಾ ನಷ್ಟ ಸರಿ ದೂಗಿಸಲು1 ರಿಂದ 9ನೇ ತರಗತಿಯವರೆಗಿನ ವಿದ್ಯಾರ್ಥಿ ಗಳ ವಿದ್ಯಾಪ್ರವೇಶ-ಕಲಿಕಾ ಚೇತರಿಕೆ ಕಾರ್ಯಕ್ರಮ ಆರಂಭಿಸಲಾಗಿದೆ.ಈ ಮೂಲಕ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುವುದು ಕಾರ್ಯಕ್ರಮದ ಉದ್ದೇಶ.1ರಿಂದ 3ನೇ ತರಗತಿಯವರೆಗೆ ಮೊದಲ ಮೂರು ತಿಂಗಳಿಗೆ ವಿದ್ಯಾಪ್ರವೇಶ ಅನುಷ್ಠಾನಗೊಳಿಸಲಾಗಿದೆ.

ಈ ಕಾರ್ಯಕ್ರಮದ ಭಾಗವಾಗಿ ಶಿಕ್ಷಣ ಇಲಾಖೆಯ ವೆಬ್‌ ಸೈಟ್‌ನಲ್ಲಿ ಶಿಕ್ಷಕರ ಕೈಪಿಡಿ ಹಾಗೂ ಮಕ್ಕಳ ಕಲಿಕಾ ಹಾಳೆ ಗಳ ಮಾಹಿತಿಯನ್ನು ಅಪ್‌ಲೋಡ್‌ ಮಾಡಲಾಗಿದೆ. ದಾನಿಗಳ ನೆರವಿನಲ್ಲಿ ಈ ಹಾಳೆಗಳನ್ನು ಝೆರಾಕ್ಸ್‌ ಮಾಡಿಸಿ ಮಕ್ಕಳಿಂದ ಕಲಿಕಾ ಚಟುವಟಿಕೆಗಳನ್ನು ಮಾಡಿಸಬೇಕು ಎಂದು ಸೂಚಿಸಿದೆ.

ಶಾಲಾನುದಾನ ಅಥವಾ ಎಸ್‌ಡಿ ಎಂಸಿ ಅನುದಾನ ಲಭ್ಯ ಇದ್ದರೆ ಅಥವಾ ಯಾವುದೇ ಸರ್ಕಾರದ ಅನುದಾನವನ್ನು ಸಹ ಝೆರಾಕ್ಸ್‌ಗೆ ಬಳಸಬಹುದಾಗಿದೆ.ಒಂದು ತರಗತಿ ಅಥವಾ ವಿಭಾಗಕ್ಕೆ ಒಂದು ವಿಷಯಕ್ಕೆ ಒಂದು ಪ್ರತಿ ಮಾತ್ರ ಝೆರಾಕ್ಸ್‌ ಪ್ರತಿ ಸಿದ್ಧಪಡಿಸಿ ಎಲ್ಲ ಮಕ್ಕಳಿಂದ ಕಲಿಕಾ ಚಟು ವಟಿಕೆ ಮಾಡಿಸಬೇಕುನ್ನಲಾಗಿದೆ.

ಕಲಿಕಾ ಹಾಳೆಯ ಮುದ್ರಣ ಪ್ರತಿಗಳನ್ನು ನೀಡುವುದಾಗಿ ಇಲಾಖೆ ತಿಳಿಸಿದೆ.ಆದರೆ ಇನ್ನೂ ಕೈ ಸೇರಿಲ್ಲ.ಸದ್ಯ ಒಂದು ವಿಷಯದ ಝೆರಾಕ್ಸ್‌ಗೆ ದಾನಿಗಳನ್ನು ಹುಡುಕುತ್ತ ಹೋಗ ಬೇಕಾದ ಪರಿಸ್ಥಿತಿ ಇದೆ.ಬಹುತೇಕ ಕಡೆಗಳಲ್ಲಿ ಶಿಕ್ಷಕರೇ ಝೆರಾಕ್ಸ್‌ಗೆ ಖರ್ಚು ಮಾಡುತ್ತಿದ್ದಾರೆ.

ಒಂದು ತರಗತಿಗೆ ಒಂದು ಪ್ರತಿ ಝೆರಾಕ್ಸ್ ಮಾಡಿಸಿ ಕಲಿಸುವುದಾದರೂ ಹೇಗೆ.....ಪ್ರಾಥಮಿಕ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚಿದ್ದರೆ ಝೆರಾಕ್ಸ್‌ ₹800 ಅನ್ನು ಶಿಕ್ಷಕರೇ ಭರಿಸಬೇಕಿದೆ.

ಮಕ್ಕಳು ತ್ವರಿತಗತಿಯಲ್ಲಿ ಮತ್ತು ಸುಲಭವಾಗಿ ಕಲಿಯಲು ಅನುಕೂಲವಾಗುವಂತೆ ರೂಪಿಸಿರುವ ವರ್ಕ್‌ಶೀಟ್‌ಗಳೇ ಕಲಿಕಾ ಚೇತರಿಕೆಯ ಹಾಳೆಗಳು ಎಂದು ಶಿಕ್ಷಕರು ವಿವರಿಸಿ ದ್ದಾರೆ.ಚಿತ್ರಗಳ ಸಮೇತ ವಿದ್ಯಾರ್ಥಿಗಳಿಗೆ ಬೋಧನೆ ಮಾಡುವುದರಿಂದ ಕಲಿಕೆಗೆ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...