LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಕರ್ನಾಟಕ ಒನ್ ಕೇಂದ್ರಗಳನ್ನು ಉತ್ತಮವಾಗಿ ನಿರ್ವಹಣೆ ಮಾಡಿ

ಹುಬ್ಬಳ್ಳಿ ,-

ಸಾರ್ವಜನಿಕರಿಗೆ ಅನುಕೂಲವಾಗುವಂತೆ 26 ಇಲಾಖೆಗಳ 64 ಸೇವೆಗಳನ್ನು ಕರ್ನಾಟಕ ಒನ್ ಕೇಂದ್ರಗಳಲ್ಲಿ ನೀಡಲಾಗುತ್ತಿದೆ. ಈ ಕೇಂದ್ರಗಳಲ್ಲಿ ಕಂಪ್ಯೂಟರ್ ಹಾಗೂ ಇತರೆ ತಾಂತ್ರಿಕ ದೋಷಗಳು ಬರದಂತೆ ಉತ್ತಮ ರೀತಿಯಲ್ಲಿ ಅಧಿಕಾರಿಗಳು ಕೇಂದ್ರದ ನಿರ್ವಹಣೆ ಮಾಡಬೇಕು ಎಂದು  ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.ಹುಬ್ಬಳ್ಳಿ ವೀರಾಪುರ ಓಣಿಯಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕರ್ನಾಟಕ ಒನ್ ಸಮಗ್ರ ನಾಗರಿಕ ಸೇವಾ ಕೇಂದ್ರದ ಕಟ್ಟಡ ಉದ್ಘಾಟಿಸಿ ಹಾಗೂ ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ವಿತರಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಗೌರವ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ, ಬಂಕಾಪುರದಿಂದ ಚನ್ನಮ್ಮ ವೃತ್ತದವರೆಗೆ ನಾಲ್ಕುದ ಪಥ ರಸ್ತೆ ನಿರ್ಮಿಸಲಾಗಿದೆ. ನೂತನ ಫೈ ಓವರ್ ನಿರ್ಮಾಣದ ಸಂದರ್ಭದಲ್ಲಿ ಬಂಕಾಪುರದ ವರೆಗೂ ಮೇಲುಸೇತುವೆಯನ್ನು ವಿಸ್ತರಣೆ ಮಾಡಲಾಗುವುದು. ಈ ಭಾಗದ ಶಾಲೆಗಗಳಿಗೆ ಡೆಸ್ಕ್ ಹಾಗೂ ಸ್ಮಾರ್ಟ್ ಬೋರ್ಡ್‍ಗಳನ್ನು ಸಂಸದರ ಅನುದಾನದಲ್ಲಿ ನೀಡಲಾಗಿದೆ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಶಾಸಕ ಅಬ್ಬಯ್ಯ ಪ್ರಸಾದ್ ಸುಮಾರು 2 ಕೋಟಿ ಅನುದಾನದಲ್ಲಿ ಮೂರು ಹಂತಸ್ತಿನ ಕಟ್ಟಡ ನಿರ್ಮಾಣ ಮಾಡಲಾಗಿದೆ. ಇದರಲ್ಲಿ ಕರ್ನಾಟಕ ಒನ್, ಗ್ರಾಮಲೆಕ್ಕಾಧಿಕಾರಿ ಕಾರ್ಯಾಲಯ ಹಾಗೂ ರೈತಭವನಗಳು ಕಾರ್ಯನಿರ್ವಹಿಸಲಿವೆ. ಸರ್ಕಾರದ ಆಡಳಿತ ವ್ಯವಸ್ಥೆ ವಿಕೇಂದ್ರಿಕರಣಗೊಳ್ಳಬೇಕು. ಈ ನಿಟ್ಟಿನಲ್ಲಿ ಹಳೇ ಹುಬ್ಬಳ್ಳಿ, ಶ್ರೀರಾಮಪುರ ಓಣಿ ಹಾಗೂ ವೀರಾಪುರ ಓಣಿಗಳಲ್ಲಿ ಜನರಿಗೆ ಅನುಕೂಲವಾಗುವಂತೆ ಕರ್ನಾಟಕ ಒನ್ ಕೇಂದ್ರಗಳನ್ನು ತೆರೆಯಲಾಗಿದೆ. ಸರ್ಕಾರಿ ಜಾಗ ಮತ್ತು ಕಟ್ಟಡಗಳು ಖಾಸಗಿ ವ್ಯಕ್ತಿಗಳ ಕೈಗೆ ಸೇರಬಾರದು ಹಾಗೂ ವೈಯಕ್ತಿಕ ಆಸಕ್ತಿಗೆ ಬಳಕೆ ಆಗಬಾರದು. 2016-17ನೇ ಸಾಲಿನಲ್ಲಿ ಕ್ಷೇತ್ರ ಅಭಿವೃದ್ಧಿಗೆ ಸಿ.ಎಂ.ನಿಧಿಯಡಿ 100 ಕೋಟಿ ಅನುದಾನಲ್ಲಿ ನೀಡಲಾಗಿದೆ. ಇದನ್ನು ಕ್ಷೇತ್ರ ಅಭಿವೃದ್ಧಿಗೆ ಬಳಸಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಪರಿಶಿಷ್ಟ ಜಾತಿ, ಪಂಗಡ ಹಾಗೂ ಇತರೆ ವಿದ್ಯಾರ್ಥಿಗಳಿಗೆ ಪಾಲಿಕೆ ಅನುದಾದಲ್ಲಿ ಲ್ಯಾಪ್‍ಟಾಪ್ ವಿತರಿಸಲಾಯಿತು.

ರುದ್ರಾಕ್ಷಿ ಮಠದ ಬಸವಲಿಂಗ ಸ್ವಾಮಿ ಸಾನಿಧ್ಯ ವಹಿಸಿದ್ದರು. ಶಾಸಕರಾದ ಅರವಿಂದ ಚಂದ್ರಕಾಂತ ಬೆಲ್ಲದ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ.ಸುರೇಶ್ ಇಟ್ನಾಳ್, ಮಾಜಿ ಶಾಸಕ ವೀರಭದ್ರಪ್ಪ ಹಾಲರವಿ, ಪಾಲಿಕೆ ಮಾಜಿ ಸದಸ್ಯ ಶಿವಾನಂದ ಮುತ್ತಣ್ಣವರ್, ರೈತ ಮುಖಂಡ ಪರ್ವತಪ್ಪ ಬೆಳಗಣ್ಣವರ ಸೇರಿದಂತೆ ಮತ್ತಿತರು ಇದ್ದರು.  

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...