ಹುಬ್ಬಳ್ಳಿ -
ಹುಬ್ಬಳ್ಳಿಯ ಗೋಕುಲ್ ರಸ್ತೆಯಲ್ಲಿರುವ ಸುವರ್ಣ ವಿದ್ಯಾ ಸಂಸ್ಥೆಯ ನ್ಯೂ ಹಾರಿಜಾನ್ ಶಾಲೆಯಲ್ಲಿ ನೂತನ ಶಾಲಾ ಸಂಸತ್ತಿನ ಉದ್ಘಾಟನಾ ಕಾರ್ಯ ಕ್ರಮವನ್ನು ಶಾಸಕ N H ಕೋನರೆಡ್ಡಿ ಉದ್ಘಾಟನೆ ಮಾಡಿದರು ಈ ಒಂದು ಸಮಾರಂಭದಲ್ಲಿ ಪಾಲ್ಗೊಂಡ ಅವರು ಚಾಲನೆ ನೀಡಿ ನೂತನವಾಗಿ ಆಯ್ಕೆಯಾದ ವಿದ್ಯಾರ್ಥಿ ಪ್ರತಿನಿಧಿಗಳಿಗೆ ಶುಭ ಹಾರೈಸಿದೆನು.
ಶಾಲಾ ಸಂಸತ್ತು ಕೇವಲ ಹುದ್ದೆ ಅಥವಾ ಜವಾಬ್ದಾರಿ ಯಲ್ಲ; ನಾಯಕತ್ವ, ಶಿಸ್ತು, ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಸಾಮಾಜಿಕ ಹೊಣೆಗಾರಿಕೆಯನ್ನು ವಿದ್ಯಾರ್ಥಿ ಗಳಲ್ಲಿ ಬೆಳೆಸುವ ಮಹತ್ವದ ವೇದಿಕೆಯಾಗಿದೆ. ಇಂದಿನ ವಿದ್ಯಾರ್ಥಿಗಳೇ ನಾಳೆಯ ಸಮಾಜದ ನಾಯಕರು ಎಂಬ ಆಶಯದೊಂದಿಗೆ ಪ್ರತಿಯೊಬ್ಬ ವಿದ್ಯಾರ್ಥಿಯೂ ಆತ್ಮವಿಶ್ವಾಸದಿಂದ ಮುನ್ನಡೆ ಯುವಂತೆ ಪ್ರೇರೇಪಿಸಿದೆನು.

ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಪ್ರೊ. ಎಸ್.ಜಿ. ಕೊಣ್ಣೂರ, ಅರುಣಕುಮಾರ ಮಜ್ಜಗಿ, ಪ್ರಾಂಶುಪಾಲರಾದ ಶ್ರೀಮತಿ ಸರಿತಾ ಸೇರಿದಂತೆ ಆಡಳಿತ ಮಂಡಳಿಯ ಸದಸ್ಯರು, ಶಿಕ್ಷಕ ವೃಂದ ಹಾಗೂ ಮುದ್ದು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸುದ್ದಿ ಸಂತೆ ನ್ಯೂಸ್ ನವಲಗುಂದ.....