LIVE TV LocalCrimeNationalInternationalPoliticsEducationTechnologyEntertainmentSportsFeature
Local News

BRTS ಸಮಸ್ಯೆ ಗೆ ಹೊಸ ಪ್ಲಾನ್ ಏನಾದರೂ ಸಮಸ್ಯೆ ಆದರೆ ಕೂಡಲೇ ವಾಟ್ಸ್ ಆಪ್ ಗೆ ಪೊಟೊ ಕಳಿಸಿ ಸಮಸ್ಯೆ ಹಂಚಿಕೊಳ್ಳಿ.....

ಹುಬ್ಬಳ್ಳಿ ಧಾರವಾಡ -

BRTS ಸೇವೆಯಲ್ಲಿ ಪ್ರಯಾಣಿಕರಿಗೆ ಮತ್ತಷ್ಟು ಸ್ನೇಹಿಯಾಗಿ ನೀಡಲು ನಿರ್ಧರಿಸಲಾಗಿದ್ದು ಯಾವುದೇ ಸಮಸ್ಯೆ ಉಂಟಾದಲ್ಲಿ ಕೂಡಲೇ ಟೋಲ್ ಫ್ರೀ ನಂಬರ್ ಅಥವಾ ವಾಟ್ಸಾ ಆಪ್ ಮೂಲಕ ತಮ್ಮ ಸಮಸ್ಯೆಗಳನ್ನು ಕಂಟ್ರೋಲ್ ರೂಮ್ ಗೆ ಹಂಚಿಕೊಳ್ಳಬಹುದಾಗಿದೆ. ಹೌದು ಹುಬ್ಬಳ್ಳಿ ಧಾರವಾಡ ಅವಳಿನಗರದ ಮಧ್ಯದಲ್ಲಿ ತ್ವರಿತ ಸಾರಿಗೆ ಸೇವೆ ಕಲ್ಪಿಸುವ ಸದುದ್ದೇಶದಿಂದ ಜಾರಿಗೆ ತಂದಿ ರುವ ಬಿಆರ್ಟಿಎಸ್ ಸೇವೆಯಲ್ಲಿ ಸಾರ್ವಜನಿಕರು ಒಂದಿ ಲ್ಲೊಂದು ರೀತಿಯಲ್ಲಿ ಸಮಸ್ಯೆಗಳನ್ನು ಅನುಭವಿಸುತ್ತಿ ದ್ದಾರೆ.ಈ ನಿಟ್ಟಿನಲ್ಲಿ ಸಾರ್ವಜನಿಕರ ಸಮಸ್ಯೆಗೆ ಸೂಕ್ತ ಕ್ರಮಗಳನ್ನು ಜರುಗಿಸುವ ಹಾಗೂ ಕುಂದುಕೊರತೆಗಳನ್ನು ನಿವಾರಿಸಲು BRTS ನಿರ್ಧಾರ ಮಾಡಿದೆ.

ಈ ಹಿಂದೆ ಚಿಗರಿ ಬಸ್ ಸೇವೆಯಲ್ಲಿ ಕೆಲವೊಂದು ನ್ಯೂನತೆ ಗಳನ್ನು ಅನುಭವಿಸುವ ಮೂಲಕ ಜನರು ಪ್ರಯಾಣ ಮಾಡಬೇಕಾಗಿತ್ತು ಆದರೆ ಈಗ ಯಾವುದೇ ಸಮಸ್ಯೆ ಇದ್ದರೂ ಟೋಲ್ ಫ್ರೀ ನಂಬರ್,ವಾಟ್ಸ್ ಆಪ್ ಮೂಲಕ ತಮ್ಮ ಸಮಸ್ಯೆಗಳನ್ನು ಹಂಚಿಕೊಳ್ಳಬಹುದಾಗಿದೆ.ಸ್ವಚ್ಚತೆ, ಸಿಬ್ಬಂದಿ ಅನುಚಿತ ವರ್ತನೆ,ಸಮಯದಲ್ಲಿ ವ್ಯತ್ಯಾಸ, ಸಂಚಾರ ನಿಯಮ ಉಲ್ಲಂಘನೆ ಹೀಗೆ ಎಲ್ಲ ರೀತಿಯ ಕುಂದುಕೊರತೆಗಳನ್ನು BRTS ಕಂಟ್ರೋಲ್‌ ರೂಮ್ ಗಮನಕ್ಕೆ ತರುವ ಕಾರ್ಯವನ್ನು ಮಾಡಬಹುದಾಗಿದೆ.

ಇನ್ನೂ ಬಿ.ಆರ್.ಟಿ.ಎಸ್ ಸಾರ್ವಜನಿಕ ಪ್ರಯಾಣಿಕರಿಗೆ ಪ್ರಯಾಣದಲ್ಲಿ ಯಾವುದೇ ತೊಂದರೆ ಹಾಗೂ ಕುಂದು ಕೊರತೆಗಳು ಕಂಡುಬಂದಲ್ಲಿ 9611537436 ನಂಬರ್ ಗೆ ವಿಡಿಯೋ ಹಾಗೂ ಪೋಟೋ ಕಳಿಸುವ ಮೂಲಕ ಸಾರ್ವಜನಿಕರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹು ದಾಗಿದೆ. ಅಲ್ಲದೇ 1800 5991010 ಸಂಖ್ಯೆಗೆ ಕರೆ ಮಾಡುವ ಮೂಲಕ ಸಮಸ್ಯೆಗಳನ್ನು ಕೂಡ ಅಧಿಕಾರಿಗಳ ಗಮನಕ್ಕೆ ತರಬಹುದಾಗಿದೆ. ಸಾರ್ವಜನಿಕರು ತಮ್ಮ ಸಮಸ್ಯೆಗೆ ಕೂಡಲೇ ಪರಿಹಾರ ಕಲ್ಪಿಸುವ ಕಾರ್ಯಕ್ಕೆ ಕೈ ಜೋಡಿಸಿ ಎಂಬುವುದು ಬಿ.ಆರ್.ಟಿ.ಎಸ್ ಯೋಜನೆ ಉದ್ದೇಶವಾಗಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....