LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಹೊಸ ವರ್ಷಾಚರಣೆ - ಡಿಜೆ ನೃತ್ಯ, ಪಾರ್ಟಿ ನಿಷೇಧ – ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು -

ಎಲ್ಲರೂ ನಿರೀಕ್ಷೆ ಮಾಡುತ್ತಿದ್ದ ಹೊಸ ವರ್ಷಾಚರಣೆ ಕುರಿತಂತೆ ರಾಜ್ಯ ಸರ್ಕಾರ ಮಾರ್ಗಸೂಚಿಯನ್ನು ಪ್ರಕಟ ಮಾಡಿದೆ. ಕೋವಿಡ್ ಕಾರಣ ಇದೇ ಡಿಸೆಂಬರ್ 30 ರಿಂದ 2021ರ ಜನೇವರಿ.2 ರವರಗೆ ಕ್ಲಬ್, ಪಬ್, ರೆಸ್ಟೋರೆಂಟ್ ಸೇರಿದಂತೆ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ಡಿಜೆ ನೃತ್ಯ, ವಿಶೇಷ ಪಾರ್ಟಿ ಸೇರಿದಂತೆ ಒಂದೆಡೆ ಜನ ಸೇರುವ ವಿವಿಧ ಕಾರ್ಯಕ್ರಮಗಳನ್ನು ಸರ್ಕಾರವು ನಿಷೇಧಿಸಿದೆ.ಕ್ರಿಸ್‌ಮಸ್ ಹಬ್ಬ ಹಾಗೂ ಹೊಸ ವರ್ಷ ಆಚರಣೆಯ ಕಾರಣ ಸರ್ಕಾರವು ಕೆಲ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.

ರಾಜ್ಯದಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ, ಹೆಚ್ಚು ಜನ ಸೇರುವ ವಸತಿ ಸಮುಚ್ಛಯಗಳಲ್ಲಿ ಹಾಗೂ ಜನ ಸೇರುವ ಸ್ಥಳಗಳಲ್ಲಿ ಸಾಮೂಹಿಕ ಕೂಟಗಳನ್ನು ನಿಷೇಧಿಸಿ, ಆದೇಶ ಹೊರಡಿಸಿದೆ. ಆಚರಣೆಯ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಸಿಡಿಸಲು ಅವಕಾಶ ನೀಡಲಾಗಿದ್ದು, ಕೋವಿಡ್ ಹರಡುವಿಕೆ ತಡೆಯುವ ಸಂಬಂಧ ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಯನ್ನು ಸರಳವಾಗಿ ಮತ್ತು ಅರ್ಥಗರ್ಭಿತವಾಗಿ ಆಚರಿಸುವಂತೆ ಸರ್ಕಾರವು ಆದೇಶದಲ್ಲಿ ತಿಳಿಸಿದೆ. ಚರ್ಚ್‌ಗಳಲ್ಲಿ ಹೆಚ್ಚು ಜನರು ಗುಂಪು ಸೇರದಂತೆ ಹಾಗೂ ಅಂತರ ಕಾಯ್ದುಕೊಳ್ಳುವಂತೆ ಮೇಲ್ವಿಚಾರಕರು ಮತ್ತು ಆಯೋಜಕರು ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು. ಹಸ್ತಲಾಘವ ಮತ್ತು ಆಲಿಂಗನವನ್ನು ನಿಷೇಧಿಸಲಾಗಿದೆ.

ಹೊಸ ವರ್ಷದ ಸಂದರ್ಭದಲ್ಲಿ ಕ್ಲಬ್‌, ಪಬ್, ರೆಸ್ಟೋರೆಂಟ್‌ಗಳು ಸಾಮಾನ್ಯ ದಿನಗಳಂತೆ ವ್ಯವಹಾರ ನಡೆಸಲು ಅವಕಾಶವಿದೆ. ಮದ್ಯ ಮಾರಾಟದ ಮೇಲೆ ನಿರ್ಬಂಧವಿಲ್ಲ. ಆದರೆ, ವಿಶೇಷ ಪಾರ್ಟಿ ಹಾಗೂ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ. ಜನರು ಒಂದೆಡೆ ಸೇರುವ ಹಾಗಿಲ್ಲ ಎಂದು ಆದೇಶದಲ್ಲಿ ಉಲ್ಲೇಖಿಸಿ ಕೇಂದ್ರ ಸರ್ಕಾರದ ಸೂಚನೆಯಂತೆ ರಾಜ್ಯ ಸರ್ಕಾರ ಕೆಲ ಮಾರ್ಗಸೂಚಿಗಳನ್ನು ಹಾಕಿ ಸಾರ್ವಜನಿಕರಿಗೆ ಪ್ರಕಟ ಮಾಡಿದೆ. ಇದರಂತೆ ಎಲ್ಲರೂ ಸಧ್ಯ ಬರುತ್ತಿರುವ ಹೊಸ ವರ್ಷದ ಆಚರಣೆಯನ್ನು ಮತ್ತು ಕ್ರೀಸ್ ಮಸ್ ಆಚರಣೆಯನ್ನು ಮಾಡಬೇಕೆಂದು ಮಾರ್ಗಸೂಚಿ ಸೂಚನೆಗಳನ್ನು ಹೇಳಿ ಪ್ರಕಟ ಮಾಡಿ ಆದೇಶವನ್ನು ಹೊರಡಿಸಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...