LIVE TV LocalCrimeNationalInternationalPoliticsEducationTechnologyEntertainmentSportsFeature
Sports News

ಮುಂದಿನ ವಾರ SSLC ಫಲಿತಾಂಶ ಸರಳವಾಗಿ ಮುಗಿದಿದೆ ಮೌಲ್ಯಮಾಪನ ಕಾರ್ಯ.....

ಬೆಂಗಳೂರು -

ವಿದ್ಯಾರ್ಥಿಗಳ ಜೀವನದಲ್ಲಿ ಎಸ್‌ಎಸ್‌ಎಲ್‌ಸಿ ಬಹು ಮುಖ್ಯವಾದ ಹಂತ. ಈಗಗಾಲೇ ಪರೀಕ್ಷೆಯನ್ನು ಬರೆದು ಫಲಿತಾಂಶಕ್ಕಾಗಿ ಕಾಯುತ್ತಿರುವ ವಿದ್ಯಾರ್ಥಿಗಳಿಗೆ ಶೀಘ್ರವೇ ಫಲಿತಾಂಶ ಪ್ರಕಟವಾಗಲಿದೆ.SSLC ವಿದ್ಯಾರ್ಥಿ ಗಳ ಮೌಲ್ಯಮಾಪನ ಮುಕ್ತಾಯವಾಗಿದ್ದು ಫಲಿತಾಂಶ ಪ್ರಕಟಣೆಗೆ ದಿನಗಣನೇ ಪ್ರಾರಂಭವಾಗಿದೆ.SSLC ಪರೀಕ್ಷೆ ಯನ್ನು ಬರೆದ ವಿದ್ಯಾರ್ಥಿಗಳು ಬೇಸಿಗೆಯ ರಜೆಯನ್ನು ಅನುಭವಿಸುತ್ತಿದ್ದಾರೆ. ಈ ನಡುವೆ SSLC ಪರೀಕ್ಷೆಯನ್ನು ಬರೆದಿರುವ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳು ಮೌಲ್ಯ ಮಾಪನ ಸಂಪೂರ್ಣವಾಗಿ ಮುಗಿದಿದೆ.

ಶಿಕ್ಷಕರು ಈಗಾಗಲೇ ವಿದ್ಯಾರ್ಥಿಗಳ ಅಂಕವನ್ನು ನಮೂದಿ ಸಿದ್ದಾರೆ. ಉತ್ತರ ಪತ್ರಿಕೆಯಲ್ಲಿ ನಮೂದಾಗಿರುವ ಅಂಕಗ ಳನ್ನು ರಿಜಿಸ್ಟರ್ ನಂಬರ್ ಸಹಿತ ಬೇರೊಂದು ಶೀಟ್ ನಲ್ಲಿ ಅಂಕಗಳನ್ನು ನಮೂದು ಮಾಡಲಾಗಿರುತ್ತದೆ.ಆ ಬಳಿಕ ಡಿಜಿಟಲ್ ಎಂಟ್ರಿಯೂ ಆಗಿರೋದರಿಂದ ಫಲಿತಾಂಶವನ್ನು ನೀಡುವುದ ತಡವಾಗುವುದಿಲ್ಲ.ಮೇ 12 ರಂದು ಫಲಿತಾಂ ಶವನ್ನು ನೀಡಲು ಎಸ್‌ಎಸ್‌ಎಲ್‌ಸಿ ಬೋರ್ಡ್ ಸಂಪೂ ರ್ಣವಾಗಿ ಸಜ್ಜಾಗುತ್ತಿದೆ.ಈ ಬಾರಿ ಪರೀಕ್ಷೆಯನ್ನು 8,73,846 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲು ನೊಂದಣಿಯನ್ನು ಮಾಡಿಕೊಂಡಿದ್ದರು.ಇದರಲ್ಲಿ ಬಹುತೇ ಕರು ಪರೀಕ್ಷೆಗೆ ಹಾಜರಾಗಿದ್ದರೂ ಬೆರಳೆಣಿಕೆಯ ವಿದ್ಯಾರ್ಥಿ ಗಳಷ್ಟೇ ಗೈರು ಹಾಜರಾಗಿದ್ದರು.ಎಸ್‌ಎಸ್‌ಎಲ್‌ಸಿ ಪರೀಕ್ಷೆ ಯ ಆರಂಭದಿಂದಲೂ ಶಿಕ್ಷಣ ಸಚಿವ ಬಿಸಿ ನಾಗೇಶ್ ವಿದ್ಯಾರ್ಥಿಗಳಿಗೆ ಧೈರ್ಯವನ್ನು ತುಂಬುತ್ತಿದ್ದಾರೆ. ಮಕ್ಕಳಿಗೆ ಪರೀಕ್ಷೆಯ ಭಯ ಇರಬಾರದು ಮತ್ತು ಕೋವಿಡ್ ಕಾರಣ ದಿಂದಾಗಿ ಕೆಲವು ಶಾಲೆೆಗಳಲ್ಲಿ ಸರಿಯಾಗಿ ಪಠ್ಯವನ್ನು ಬೋಧನೆ ಮಾಡಿರಲಿಲ್ಲ ಆದ್ದರಿಂದ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗಿದ್ದರು. ಮಕ್ಕಳ ಆತಂಕವನ್ನು ದೂರ ಮಾಡಲು ಸರಳವಾದ ಪ್ರಶ್ನೆ ಪತ್ರಿಕೆಯನ್ನು ವಿದ್ಯಾರ್ಥಿಗಳಿಗೆ ನೀಡಲಾಗಿತ್ತು. ಪರೀಕ್ಷೆಯನ್ನು ಬರೆದ ವಿದ್ಯಾರ್ಥಿಗಳು ಸುಲಭವಾದ ಪ್ರಶ್ನೆ ಪತ್ರಿಕೆಯಾದ್ದರಿಂದ ಸಂತಸಗೊಂ ಡಿದ್ದರು.ಇನ್ನು ಮೌಲ್ಯ ಮಾಪನದ ವೇಳೆಯು ಶಿಕ್ಷಕರು ಕಠಿಣ ದೋರಣೆ ತೋರದೆ ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಮೌಲ್ಯಮಾಪನ ಕಾರ್ಯವನ್ನು ಮುಗಿಸಿದ್ದಾರೆ.ಇನ್ನು ಕರ್ನಾಟಕ ಸೆಕೆಂಡರಿ ಎಜುಕೇಷನ್ ಬೋರ್ಡ್ (KSEEB) ವೆಬ್ ನಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಫಲಿತಾಂಶ ಪ್ರಕಟವಾಗಲಿದೆ. ಮೊದಲು ಶಿಕ್ಷಣ ಸಚಿವರಾದ ಬಿಸಿ ನಾಗೇಶ್ ರವರು ಫಲಿತಾಂಶವನ್ನು ಘೋಷಣೆ ಮಾಡಲಿದ್ದಾರೆ. ಎಷ್ಟು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಗಳಿಸಿದ್ದಾರೆ. ಡಿಸ್ಟಿಂಕ್ಷನ್,ಪ್ರಥಮ ಶ್ರೇಣಿ, ದ್ವಿತೀಯ ಶ್ರೇಣಿ ಪಡೆದವರರು ಎಷ್ಟು ವಿದ್ಯಾರ್ಥಿಗಳು ಪಡೆದಿದ್ದಾರೆ. ಯಾವ ಯಾವ ಜಿಲ್ಲೆ ಪ್ರಥಮ ಎಂಬದನ್ನೆಲ್ಲಾ ಫಲಿತಾಂಶದ ವೇಳೆ ಶಿಕ್ಷಣ ಸಚಿವರು ವಿವರಿಸಲಿದ್ದಾರೆ. ಬಳಿಕ ವೆಬ್ ಸೈಟ್ ನಲ್ಲಿ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗಲಿದೆ.ವಿದ್ಯಾರ್ಥಿಗಳು KSEEB ವೆಬ್ ಸೈಟ್ ನಲ್ಲಿ sslc result ಅನ್ನು ಆಯ್ಕೆಮಾಡಬೇಕು.ಆ ಬಳಿಕ ನಿಮ್ಮ ನೊಂದಣಿ ಸಂಖ್ಯೆ (ರಿಜಿಸ್ಟರ್ ನಂಬರ್) ಅನ್ನು ನಮೂದಿಸಬೇಕು. ವಿದ್ಯಾರ್ಥಿಯ ಪ್ರವೇಶ ಪತ್ರ (Hall ticket) ನಮೂದಾಗಿರುವ ಜನ್ಮದಿನಾಂಕವನ್ನು ಎಂಟ್ರಿ ಮಾಡಬೇಕು. ಆ ಬಳಿಕ View Your Result ಎಂಬು ದರ ಮೇಲೆ ಕ್ಲಿಕ್ ಮಾಡಿದ್ರೆ ಫಲಿತಾಂಶ ಕಾಣಲಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....