ಬೆಂಗಳೂರು -
180 ಶಿಕ್ಷಕರಿಗೆ ಕಾರಣ ಕೇಳಿ ನೊಟೀಸ್ ನೀಡಿದ ಘಟನೆ ಚಿಕ್ಕಬಳ್ಳಾಪುರ ದಲ್ಲಿ ನಡೆದಿದೆ ಹೌದು ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಅವರು ಸರ್ಕಾರಿ ಶಾಲೆಗೆ ದಿಢೀರ್ ಭೇಟಿ ನೀಡಿದ ವೇಳೆ, ವಿದ್ಯಾರ್ಥಿಗಳಿಗೆ 'ಅ, ಆ, ಇ, ಈ' ಅಕ್ಷರಗಳು ಹಾಗೂ ಕನಿಷ್ಠ ಮೂಲಭೂತ ಗಣಿತದ ಲೆಕ್ಕಗಳೂ ಬಾರದಿರುವುದು ಕಂಡುಬಂದಿದ್ದು, ಅವರ ಶೈಕ್ಷಣಿಕ ಹಿನ್ನಡೆಯನ್ನು ಕಂಡು ಶಾಸಕರು ಬೇಸರ ವ್ಯಕ್ತಪಡಿಸಿ ದ್ದಾರೆ
ಹೀಗಾಗಿ 180 ಶಿಕ್ಷಕರಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ ಮಕ್ಕಳ ಈ ಶೈಕ್ಷಣಿಕ ನಿರ್ಲಕ್ಷ್ಯ ಹಾಗೂ ಶಿಕ್ಷಕರ ಬೇಜವಾಬ್ದಾರಿಗೆ ತೀವ್ರ ಅಸಮಾ ಧಾನ ವ್ಯಕ್ತಪಡಿಸಿದ ಶಾಸಕ ಪ್ರದೀಪ್ ಈಶ್ವರ್, ಕೂಡಲೇ ಸಂಬಂಧಪಟ್ಟ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. 1 ರಿಂದ 6ನೇ ತರಗತಿ ವರೆಗೆ ಈ ಮಕ್ಕಳಿಗೆ ಬೋಧನೆ ಮಾಡಿರುವ ಹಾಗೂ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಒಟ್ಟು 180 ಸರ್ಕಾರಿ ಪ್ರಾಥಮಿಕ ಶಾಲೆಗಳ ಶಿಕ್ಷಕರಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಗಳ ಮೂಲಕ ಕಾರಣ ಕೇಳಿ ನೋಟಿಸ್ ಜಾರಿ ಮಾಡಿಸಲಾಗಿದೆ. ಸೂಕ್ತ ಶಿಕ್ಷಣ ನೀಡದ ಶಿಕ್ಷಕರನ್ನು ಅಮಾನತುಗೊಳಿಸುವಂತೆಯೂ ಶಾಸಕರು ಎಚ್ಚರಿಕೆ ನೀಡಿದ್ದಾರೆ.2026-27ನೇ ಸಾಲಿನ ಶೈಕ್ಷಣಿಕ ಪ್ರಗತಿ ಪರಿಶೀಲನೆ ರಾಜ್ಯದಲ್ಲಿ ಗುಣಮಟ್ಟದ ಶಿಕ್ಷಣವನ್ನು ಖಾತರಿಪಡಿಸುವ ನಿಟ್ಟಿನಲ್ಲಿ, ಪ್ರಸಕ್ತ 2026-27ನೇ ಸಾಲಿನಲ್ಲಿ ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ ಶಾಲೆಗಳ 7ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿ ರುವ ವಿದ್ಯಾರ್ಥಿಗಳ ಪ್ರಗತಿ ಮತ್ತು ಕಲಿಕಾ ಮಟ್ಟವನ್ನು ಗಂಭೀರವಾಗಿ ಪರಿಶೀಲಿಸಲಾಗಿದೆ.
ಕಲಿಕೆಯಲ್ಲಿ ಹಿಂದುಳಿದಿರುವ ವಿದ್ಯಾರ್ಥಿಗಳಿಗೆ ಒಂದನೇ ತರಗತಿಯಿಂದ ಇಲ್ಲಿಯವರೆಗೆ ಬೋಧನೆ ಮಾಡಿರುವ ಶಿಕ್ಷಕರ ಕಾರ್ಯವೈಖರಿಯ ಬಗ್ಗೆಯೂ ಮೌಲ್ಯಮಾಪನ ಕೈಗೊಳ್ಳಲಾಗಿದೆ. ಶಿಸ್ತು ಕ್ರಮಕ್ಕೆ ಸೂಚನೆ ಮತ್ತು ವರದಿ ಸಲ್ಲಿಕೆ ಹೌದು ಶಿಕ್ಷಕರಿಗೆ ನೀಡಿರುವ ನೋಟಿಸ್ಗೆ ಸಮರ್ಪಕವಾದ ಸಮಜಾ ಯಿಷಿಯನ್ನು ಪಡೆದುಕೊಳ್ಳಲು ಸೂಚಿಸಲಾಗಿದೆ.
ಮಕ್ಕಳ ವಿದ್ಯಾಭ್ಯಾಸದಲ್ಲಿ ಲೋಪವೆಸಗಿರುವುದು ಸಾಬೀತಾದಲ್ಲಿ ನಿಯಮಾನುಸಾರ ಕಠಿಣ ಶಿಸ್ತು ಕ್ರಮ ಜರುಗಿಸಿ, ಆ ಕುರಿತಾದ ಸಂಪೂರ್ಣ ವರದಿಯನ್ನು ಸಲ್ಲಿಸುವಂತೆ ಸಂಬಂಧಪಟ್ಟ ಅಧಿಕಾರಿಗೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ. ಈ ದಿಢೀರ್ ಬೆಳವಣಿ ಗೆಯು ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣದ ಸುಧಾರಣೆಗೆ ಹೊಸ ಚರ್ಚೆಗೆ ನಾಂದಿ ಹಾಡಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....