LIVE TV LocalCrimeNationalInternationalPoliticsEducationTechnologyEntertainmentSportsFeature
Sports News

ಶಿಕ್ಷಕಿಯ ಅರ್ಜಿಯನ್ನು ತಿರಸ್ಕರಿಸಿದ ಹೈಕೋರ್ಟ್ ವಿಚಾರಣೆ ಎದುರಿಸಲು ಸೂಚನೆ

ಬೆಂಗಳೂರು -

ಬೆಂಗಳೂರಿನ ಖಾಸಗಿ ಶಾಲೆಯ ನರ್ಸರಿ ತರಗತಿಯಲ್ಲಿ ಐದು ವರ್ಷದ ಬಾಲಕಿಯ ಪ್ಯಾಂಟ್ ಅನ್ನು ಇತರ ಮಕ್ಕಳ ಮುಂದೆ ಎಳೆದು ಅವಮಾನ ಮಾಡಿ ಶಿಕ್ಷಿಸಿದ ಮಹಿಳಾ ಶಿಕ್ಷಕಿಯ ವಿರುದ್ಧದ ಕ್ರಿಮಿನಲ್ ಮೊಕದ್ದಮೆ ರದ್ದುಗೊಳಿ ಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ.ಹಾಗಾಗಿ ಆ ಶಿಕ್ಷಕಿ ಇದೀಗ ವಿಚಾರಣೆಯನ್ನು ಎದುರಿಸಲೇಬೇಕಾಗಿದೆ. ಜೊತೆಗೆ ಇದು ಶಾಲೆಗಳಲ್ಲಿ ಮಕ್ಕಳನ್ನು ದಂಡಿಸುವ,ಟೀಸ್ ಮಾಡುವ ಶಿಕ್ಷಕರಿಗೆ ಎಚ್ಚರಿಕೆ ಗಂಟೆಯಾಗಿದೆ.ಶಿಕ್ಷಕರು ಅನಗತ್ಯವಾಗಿ ಮಕ್ಕಳನ್ನು ತೀವ್ರತರನಾದ ಶಿಕ್ಷೆಗೆ ಗುರಿ ಪಡಿಸಬಾರದು ಎಂಬೊಂದನ್ನು ನ್ಯಾಯಾಲಯ ತಿಳಿಸಿದೆ

ಶಿಕ್ಷೆಯ ಅಳತೆಯಾಗಿ ಶಿಕ್ಷಕರಿಂದ ಎಳೆಯ ವಯಸ್ಸಿನಲ್ಲಿ ಯೇ ಮಕ್ಕಳನ್ನು ಆಘಾತಗೊಳಿಸುವುದು ಮಗುವಿನ ಮೇಲೆ ವಿನಾಶಕಾರಿ ಮಾನಸಿಕ ಪ್ರಭಾವವನ್ನು ಬೀರುತ್ತದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಅಲ್ಲದೆ ನ್ಯಾಯಾಲಯವು ಐದು ವರ್ಷ ವಯಸ್ಸಿನ ಹೆಣ್ಣು ಮಗುವಿನೊಂದಿಗೆ ವ್ಯವಹರಿಸುವ ಶಿಕ್ಷಕರಿಗೆ ಕ್ಷಮಿಸಲಾಗದ ಮತ್ತು ಅನುಚಿತವಾಗಿದೆ.ಅಂತಹ ಕೃತ್ಯವನ್ನು ಪೂರ್ಣ ಪ್ರಮಾಣದ ವಿಚಾರಣೆಯಲ್ಲಿ ಅರ್ಜಿದಾರರು ಸಾಬೀತು ಪಡಿಸದ ಹೊರತು ನಿಸ್ಸಂದೇಹವಾಗಿ ಅಸಭ್ಯವಾಗಿದೆ ಎಂದು ಹೇಳಿದೆ.

ಸಂತ್ರಸ್ತ ಮಗುವಿನ ತಾಯಿ 2017ರಲ್ಲಿ ಹಲಸೂರು ಠಾಣೆ ಯಲ್ಲಿ ನೀಡಿದ ದೂರಿನ ಆಧಾರದ ಮೇಲೆ ತನ್ನ ವಿರುದ್ಧ ಸಲ್ಲಿಸಿರುವ ಆರೋಪಪಟ್ಟಿಯನ್ನು ಪ್ರಶ್ನಿಸಿ 41 ವರ್ಷದ ಶಿಕ್ಷಕಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗ ಪ್ರಸನ್ನ ಅವರಿದ್ದ ಏಕಸದಸ್ಯಪೀಠ ವಜಾಗೊಳಿಸಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....