LIVE TV LocalCrimeNationalInternationalPoliticsEducationTechnologyEntertainmentSportsFeature
State News

SSLC ಪರೀಕ್ಷೆ ಸಿದ್ದತೆ ಆರಂಭಿಸಿದ ಅಧಿಕಾರಿಗಳು - ವಾರದೊಳಗೆ ಮಾದರಿ ಪ್ರಶ್ನೆ ಪತ್ರಿಕೆಗಳು ಲಭ್ಯ

ಬೆಂಗಳೂರು -

ಕೊರೋನಾ ಸಾಂಕ್ರಾಮಿಕ ರೋಗದ ಆತಂಕದ ನಡುವೆಯೇ ಜುಲೈ ಮೂರನೇ ವಾರದಲ್ಲಿ SSLC ಪರೀಕ್ಷೆ ಆರಂಭಿಸುವುದಾಗಿ ಹೇಳಿರುವ ಬೆನ್ನಲ್ಲೇ ಈಗ ರಾಜ್ಯ ಶಿಕ್ಷಣ ಇಲಾಖೆಯು ಪರೀಕ್ಷೆಗಾಗಿ ಭರ್ಜರಿಯಾದ ಸಿದ್ದತೆಯನ್ನು ಆರಂಭಿಸಿದೆ.ಹೌದು ನಿನ್ನೆಯಷ್ಟೇ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು SSLC ಪರೀಕ್ಷಾ ಪೂರ್ವ ಸಿದ್ಧತೆ ಬಗ್ಗೆ ರಾಜ್ಯದ ಎಲ್ಲಾ 34 ಶೈಕ್ಷಣಿಕ ಜಿಲ್ಲೆಗಳ ಜಿಲ್ಲಾ ಉಪನಿರ್ದೇಶಕರು ಕ್ಷೇತ್ರ ಶಿಕ್ಷಣಾಧಿ ಕಾರಿಗಳು ಮತ್ತು ಇಲಾಖೆಯ ಹಿರಿಯ ಅಧಿಕಾರಿಗ ಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಮಾತುಕತೆ ನಡೆಸಿದರು.

ಈ ವೇಳೆ ಅಧಿಕಾರಿಗಳಿಗೆ ಪರೀಕ್ಷೆಯನ್ನು ಯಶಸ್ವಿ ಯಾಗಿ ನಡೆಸಲು,ವಿದ್ಯಾರ್ಥಿಗಳು ಹಾಗೂ ಪೋಷಕ ರ ವಿಶ್ವಾಸ ಗಳಿಸಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.ಅಲ್ಲದೇ ವಾರದೊ ಳಗೆ ಆಯಾ ಬಿಇಓ ಕಚೇರಿಗಳ ಮೂಲಕ ಮಾದರಿ ಪ್ರಶ್ನೆ ಪತ್ರಿಕೆಗಳು ಶಾಲೆಗಳಿಗೆ ತಲುಪಲಿವೆ.ಮಕ್ಕಳಿಗೆ ಓಎಂಆರ್ ಶೀಟ್ ರೂಪದಲ್ಲಿರುವ ಪ್ರಶ್ನೆ ಪತ್ರಿಕೆ ಗಳಿಗೆ ಹೇಗೆ ಉತ್ತರಿಸಬೇಕೆಂದು ಶಿಕ್ಷಕರು ಸಲಹೆ ನೀಡಬೇಕು ಎಂದರು.

ಪರೀಕ್ಷೆಯಲ್ಲಿ ಪ್ರತಿ ವಿಷಯಕ್ಕೆ 40 ಅಂಕದ ಪ್ರಶ್ನೆ ಗಳನ್ನು ಕೇಳಲಾಗುತ್ತದೆ.ಪ್ರತೀ ಪ್ರಶ್ನೆಗೂ ಪ್ರಶ್ನೆ ಪತ್ರಿಕೆಯಲ್ಲೇ ನಾಲ್ಕು ಉತ್ತರಗಳನ್ನು ನೀಡಲಾಗಿರು ತ್ತದೆ.ಅದರಲ್ಲಿ ಸರಿಯಾದ ಉತ್ತರ ಗುರುತು ಮಾಡ ಬೇಕು.ಪ್ರಶ್ನೆಗಳು ನೇರ ಮತ್ತು ಸುಲಭವಾಗಿರುವುದ ರಿಂದ ಮಕ್ಕಳಿಗೆ ಹೆಚ್ಚಿನ ಗೊಂದಲಗಳಾಗುವುದಿಲ್ಲ ಎಂದು ತಿಳಿಸಿದ್ದಾರೆ

ಮಕ್ಕಳ ಮುಂದಿನ ವ್ಯಾಸಾಂಗಕ್ಕೆ SSLC ಪರೀಕ್ಷೆ ದಿಕ್ಸೂಚಿಯಾಗಲಿರುವ ಕಾರಣ ಕೋವಿಡ್ ತಹಬ ದಿಗೆ ಬಂದ ಬಳಿಕವಷ್ಟೇ ಕೇವಲ ಎರಡು ದಿನ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ.ಈ ಬಾಗಿ ಬದಲಾಗಿರುವ ಪರೀಕ್ಷಾ ಪದ್ಧತಿ ಕುರಿತು ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸುವ ಕೆಲಸ ನಮ್ಮ ಅಧಿಕಾರಿ ಗಳು ಹಾಗೂ ಶಿಕ್ಷಕರು ಮಾಡಬೇಕು.ಸಾಧ್ಯವಾದರೆ ಶಾಲೆಗಳು ಆರಂಭಗೊಂಡ ಬಳಿಕ ನಿತ್ಯ ನಾಲ್ಕೈದು ಮಕ್ಕಳನ್ನು ಶಾಲೆಗೆ ಕರೆಸಿಕೊಂಡು ಆತ್ಮವಿಶ್ವಾಸ ತುಂಬಿ ಎಂದು ಸಲಹೆ ನೀಡಿದರು.

ಈಗಾಗಲೇ ಕೆಲವು ಜಿಲ್ಲೆಗಳಲ್ಲಿ ಶಿಕ್ಷಣಾಧಿಕಾರಿಗಳು ಹಾಗೂ ಶಿಕ್ಷಕರು ಮಕ್ಕಳನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿದ್ದಾರೆ. ಈ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಹೆಚ್ಚಿಸುವ ಕೆಲಸ ಮಾಡಲಾಗುತ್ತಿದೆ. ಕಳೆದ ವರ್ಷಕ್ಕಿಂತಲೂ ಈ ವರ್ಷ ಹೆಚ್ಚಿನ ಮುಂಜಾ ಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.ಪರೀಕ್ಷಾ ಕೊಠಡಿಗೆ ಬರುವ ಶಿಕ್ಷಕರಿಗೆ 2 ಡೋಸ್ ಲಸಿಕೆ ಪಡೆಯುವುದನ್ನು ಕಡ್ಡಾಯ ಮಾಡಲಾಗಿದೆ.ಲಸಿಕೆ ಕುರಿತು ಈಗಾಗಲೇ ಆರೋಗ್ಯ ಇಲಾಖೆಯೊಂದಿಗೆ ಮಾತುಕತೆ ನಡೆಸಲಾಗುತ್ತಿದೆ ಎಂದಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....