LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಧಾರವಾಡ ಜಿಲ್ಲೆಯಲ್ಲೂ ಪತ್ತೆ ಯಾದ ಓಮಿಕ್ರಾನ್ ಯಾರೂ ಭಯಪಡಬೇಕಿಲ್ಲ ಹುಷಾರಾಗಿರಿ ಎಂದರು ಜಿಲ್ಲಾಧಿಕಾರಿ.....

ಧಾರವಾಡ -

ಧಾರವಾಡ ಜಿಲ್ಲೆಯಲ್ಲಿ ಮೊದಲ ಓಮಿಕ್ರಾನ್ ಸೋಂಕಿತ ವ್ಯಕ್ತಿ ಪತ್ತೆಯಾಗಿದ್ದು, ಯಾರೂ ಭಯಪಡಬೇಕಿಲ್ಲ ಆದರೆ, ಎಚ್ಚರಿಕೆಯಿಂದ ಇರಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು.

ಧಾರವಾಡದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು 54 ವರ್ಷದ ಮಹಿಳೆಯಲ್ಲಿ ಓಮಿಕ್ರಾನ್ ಸೋಂಕು ಇರುವುದು ಗೊತ್ತಾಗಿದೆ. ಆದರೆ, ಮಹಿಳೆ ಗುಣಮುಖರಾಗಿ ದ್ದಾರೆ.ಅವರಲ್ಲಿ ಯಾವುದೇ ತೀವ್ರತರದ ಲಕ್ಷಣಗಳು ಕಂಡು ಬಂದಿಲ್ಲ ಡಿಸೆಂಬರ್ 4 ರಂದು ಅವರನ್ನು ತಪಾಸಣೆ ನಡೆಸಲಾಗಿತ್ತು ಮಾರನೇ ದಿನ ಅವರಿಗೆ ಕೊರೊನಾ ಇದೆ ಎಂದು ಗೊತ್ತಾಯಿತು ನಂತರ ಅವರನ್ನು ಓಮಿಕ್ರಾನ್ ತಪಾಸಣೆಗೊಳಪಡಿಸಿದಾಗ ಅವರಲ್ಲಿ ಓಮಿಕ್ರಾನ್ ಸೋಂಕು ಇರುವುದು ನಿನ್ನೆ ಗೊತ್ತಾಗಿದೆ. ಐದು ದಿನಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಅವರು ಇದೀಗ ಗುಣ ಮುಖರಾಗಿದ್ದಾರೆಂದರು

ಖಾಸಗಿ ಸಂಸ್ಥೆಯಲ್ಲಿ ಈ ಮಹಿಳೆ ಕೆಲಸ ಮಾಡುತ್ತಿದ್ದಾರೆ. ಜ್ವರದಿಂದ ಅವರು ಬಳಲುತ್ತಿದ್ದರು ಇದೀಗ ಅವರನ್ನು ಎರಡು ಬಾರಿ ಮತ್ತೊಮ್ಮೆ ತಪಾಸಣೆಗೊಳಪಡಿಸಲಾಗಿದ್ದು, ಎರಡೂ ವರದಿಗಳು ಇದೀಗ ನೆಗೆಟಿವ್ ಎಂದು ಬಂದಿವೆ. ಸದ್ಯ ಅವರಲ್ಲಿ ಸೋಂಕಿನ ಲಕ್ಷಣಗಳಿಲ್ಲ ಆದರೂ ಇನ್ನೂ ಒಂದು ವಾರ ಹೋಮ್ ಐಸೋಲೇಷನ್‌ನಲ್ಲಿರಲು ಸೂಚಿ ಸಲಾಗಿದೆ ಎಂದರು.ಇನ್ನೂ ಇವರ ಪ್ರಾಥಮಿಕ ಸಂಪರ್ಕಕ್ಕೆ ಬಂದ 137 ಜನರನ್ನು ತಪಾಸಣೆ ನಡೆಸಲಾಗಿದ್ದು ಯಾರ ಲ್ಲೂ ಸೋಂಕು ಪತ್ತೆಯಾಗಿಲ್ಲ ಇವರು ಕೆಲಸ ಮಾಡುತ್ತಿದ್ದ ಸಂಸ್ಥೆಯಲ್ಲಿನ ಎಲ್ಲಾ ಸಿಬ್ಬಂದಿಯನ್ನು ತಪಾಸಣೆ ಮಾಡ ಲಾಗಿದ್ದು, ಯಾರಲ್ಲೂ ಸೋಂಕು ಪತ್ತೆಯಾಗಿಲ್ಲ ಎಂದರು.

ಎಸ್‌ಡಿಎಂ ಘಟನೆ ಆದ ಮೇಲೆ ಇದೀಗ ಜಿಲ್ಲೆಯಲ್ಲಿ ಒಂದಂಕಿಯ ಕೊರೊನಾ ಸೋಂಕಿತರು ಪತ್ತೆಯಾಗುತ್ತಿ ದ್ದಾರೆ. ಅವರ ವರದಿಯನ್ನೂ ಓಮಿಕ್ರಾನ್‌ ತಪಾಸಣೆಗೆ ಕಳುಹಿಸಲಾಗುತ್ತಿದೆ. ಸದ್ಯ ಓಮಿಕ್ರಾನ್ ಸೋಂಕಿಗೆ ಒಳಗಾಗಿರುವ ಈ ಮಹಿಳೆ ಸಂಪೂರ್ಣ ಗುಣಮುಖರಾಗಿ ದ್ದಾರೆ.ಡಿಸೆಂಬರ್ 6 ರಂದು ಇವರ ಸ್ಯಾಂಪಲ್ ಕಲೆಕ್ಟ್ ಮಾಡಿ ಓಮಿಕ್ರಾನ್ ತಪಾಸಣೆಗೆ ಕಳುಹಿಸಲಾಗಿತ್ತು. ಅದರ ವರದಿ ನಿನ್ನೆ ಬಂದಿದೆ ಎಂದರು

https://youtu.be/RRinTB2zt7M

ಆದರೆ ಅವರು ಈಗಾಗಲೇ ಗುಣ ಮುಖರಾಗಿದ್ದಾರೆ. ಇವರು ಕೋವಿಶೀಲ್ಡ್ ಎರಡೂ ಡೋಸ್‌ ಗಳನ್ನು ಪಡೆದುಕೊಂಡಿದ್ದರು.ಇವರ ಪರ್ಸನಲ್‌ ಡೀಟೆಲ್ಸ್ ಬಹಿರಂಗಪಡಿಸಲು ಬರುವುದಿಲ್ಲ ಎಂದರು.

ಇವರಿಗೆ ಟ್ರಾವೆಲ್ ಹಿಸ್ಟರಿ ಏನೂ ಇಲ್ಲ ಇವರು ಕೆಲಸ ಮಾಡುತ್ತಿದ್ದ ಕಚೇರಿಗೆ ರಜೆ ಘೋಷಣೆ ಮಾಡಲಾಗಿದೆ. ಇವರ ಸಂಪರ್ಕಕ್ಕೆ ಬಂದ ಎಲ್ಲರನ್ನೂ ತಪಾಸಣೆ ಮಾಡ ಲಾಗಿದ್ದು, ಯಾರಲ್ಲೂ ಸೋಂಕು ಪತ್ತೆಯಾಗಿಲ್ಲ ಎಂದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....