LIVE TV LocalCrimeNationalInternationalPoliticsEducationTechnologyEntertainmentSportsFeature
State News

ಪರೀಕ್ಷೆ ಒಂದೆಡೆ ಇರ್ಲಿ ಎರಡನೇ ಅಲೆ ಇನ್ನೂ ಹೋಗಿಲ್ಲ..ಮೂರನೇ ಅಲೆ ಮುನ್ಸೂಚನೆ ಇರುವಾಗಲೇ ನಿಯಮಗಳನ್ನು ಗಾಳಿಗೆ ತೂರಿದ್ರಾ ಶಿಕ್ಷಕರು.....

ಹುಮನಾಬಾದ್ -

ಸಧ್ಯ ಇನ್ನೂ ಮಹಾಮಾರಿ ಕರೋನಾ ಪೂರ್ಣ ಪ್ರಮಾಣದಲ್ಲಿ ಕಡಿಮೆಯಾಗಿಲ್ಲ ಇನ್ನೂ ಪೂರ್ಣ ಪ್ರಮಾಣದಲ್ಲಿ ಹೋಗಿಲ್ಲ ಹೀಗಿರುವಾಗ ಸಮಾಜಕ್ಕೆ ಮಾದರಿಯಾಬೇಕಾದ ಶಿಕ್ಷಕರು ಹೀಗೆ ಯಾಕೇ ಮಾಡಿದರು ಹೀಗೆ ಮಾಡಿದ್ದು ಸರಿನಾ ಎಂಬ ಪ್ರಶ್ನೆಯನ್ನು ಸಾಮಾಜಿಕ ಜಾಲ ತಾಣಗಳಲ್ಲಿ ಸಾರ್ವಜನಿಕರು ಕೇಳುತ್ತಾ ಪೊಟೊ ವನ್ನು ಶೇರ್ ಮಾಡ್ತಾ ಇದ್ದಾರೆ.ಹೌದು ಬೀದರ್ ಜಿಲ್ಲೆಯ ಹುಮನಾಬಾದ್ ಸರ್ಕಾರಿ ಪದವಿ ಪೂರ್ವ ಬಾಲಕರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೇ ಹಲವು ಸಂಘಟನೆಗಳ ಆಶ್ರಯದಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗಾಗಿ ಪರೀಕ್ಷೆ ಅನುಕೂಲವಾಗಲೆಂಬ ಉದ್ದೇಶಕ್ಕಾಗಿ ಶಾಲೆಯ ಸಮಸ್ತ ಶಿಕ್ಷಕ ಬಳಗದವರು ನೇರ ಪೋನ್ ಇನ್ ಕಾರ್ಯಕ್ರಮವನ್ನು ಮಾಡ್ತಾ ಇದ್ದಾರೆ. ನಿಜವಾಗಿಯೂ ಮಕ್ಕಳಿಗಾಗಿ ಮಾಡುತ್ತಿರುವ ಈ ಒಂದು ಕಾರ್ಯಕ್ರಮ ಉತ್ತಮವಾಗಿದ್ದು ಮೆಚ್ಚುವಂತಹದ್ದು ಆದರೆ ಈ ಒಂದು ಕಾರ್ಯಕ್ರಮದ ನೆನಪಿಗಾಗಿ ಶಾಲೆಯ ಸಮಸ್ತ ಶಿಕ್ಷಕ ಬಂಧುಗಳು ಶಾಲೆಯ ಮುಂದೆ ಪರೀಕ್ಷೆ ಒಂದೆಡೆ ಇರಲಿ ಎರಡನೇಯ ಅಲೆ ಇನ್ನೂ ಕೂಡಾ ಹೋಗಿಲ್ಲ ಇದರ ನಡುವೆ ಮೂರನೇಯ ಅಲೆ ಮುನ್ಸೂಚನೆ ಇರುವಾಗಲೇ ಶಿಕ್ಷಕರು ಸರಿಯಾಗಿ ಸಾಮಾಜಿಕ ಅಂತರವಿಲ್ಲದೇ ಮಾಸ್ಕ್ ಗಳನ್ನು ಹಾಕಿಕೊಳ್ಳದೇ ಎಲ್ಲಾ ನಿಮಯಗಳನ್ನು ಗಾಳಿಗೆ ತೂರಿ ಹೀಗೆ ಮಾಡಿದ್ದು ಸರಿನಾ.

ಇದನ್ನು ಸಾಮಾಜಿಕ ಜಾಲ ತಾಣಗಳಲ್ಲಿ ಹಾಗೇ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಅಶೋಕ ಸಜ್ಜನ ಕಳಕಳಿ ಯನ್ನು ವ್ಯಕ್ತಪಡಿಸಿದ್ದಾರೆ.ಪ್ರಮುಖವಾಗಿ ಒಂದನೇಯ ಅಲೆಗಿಂತ ಎರಡನೇಯ ಅಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನಾಡಿನಲ್ಲಿ ಶಿಕ್ಷಕರು ಮೃತರಾಗಿದ್ದಾರೆ ಇನ್ನೂ ಕೂಡಾ ಈ ಒಂದು ದೊಡ್ಡ ನೋವಿನಿಂದ ನಾಡಿನ ಶಿಕ್ಷಕ ಬಂಧುಗಳು ಹೊರ ಬಂದಿಲ್ಲ ಹೀಗಿರುವಾಗ ಸಧ್ಯ ಎಲ್ಲವನ್ನು ಮರೆತು ಹೀಗೆ ಮಾಡಿದ್ದು ಇದೇನಾ ಜವಾಬ್ದಾರಿ ನಾಳೆ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಹೇಗೆ ಮಾಡ್ತಾರೆ ಎಂಬ ಪ್ರಶ್ನೆ ಕಾಡುತ್ತಿದ್ದು ಹೀಗ್ಯಾಕೆ ಮಾಡಿದರು ಎಂಬೊದಕ್ಕೆ ಈ ಶಿಕ್ಷಕ ಬಂಧುಗಳೇ ಉತ್ತರಿಸಬೇಕು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....