LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಎರಡನೇ ದಿನ‌ 94 ನಾಮಪತ್ರ ಸಲ್ಲಿಕೆ.

ಧಾರವಾಡ -

ಗ್ರಾಮ ಪಂಚಾಯತ್ ಚುನಾವಣೆ-2020
ಎರಡನೆ (ಡಿ.8) 94 ನಾಮಪತ್ರಗಳ ಸಲ್ಲಿಕೆಯಾಗಿವೆ.ಜಿಲ್ಲೆಯಲ್ಲಿ ಮೊದಲ ಹಂತದ ಗ್ರಾಮಪಂಚಾಯತ ಸಾರ್ವತ್ರಿಕ ಚುನಾವಣೆಗೆ ಅಭ್ಯರ್ಥಿಗಳಿಂದ ನಾಮಪತ್ರ ಸ್ವೀಕಾರ ಆರಂಭವಾಗಿದ್ದು ಎರಡನೆ ದಿನವಾದ ಇಂದು (ಡಿ. 8) ವಿವಿಧ ಗ್ರಾಮಪಂಚಾಯತಿಗಳಲ್ಲಿ ಒಟ್ಟು 94 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ.

ಧಾರವಾಡ ತಾಲೂಕಿನಲ್ಲಿ ಇಂದು ವಿವಿಧ ಗ್ರಾಮ ಪಂಚಾಯತಿಗಳಲ್ಲಿ ಅನುಸೂಚಿತ ಜಾತಿಗೆ ಮಿಸಲಿರುವ ಸ್ಥಾನಗಳಿಗೆ ಎರಡು ನಾಮಪತ್ರಗಳು, ಅನುಸೂಚಿತ ಪಂಗಡಕ್ಕೆ ಮೀಸಲು ಇರುವ ಸ್ಥಾನಗಳಿಗೆ ನಾಲ್ಕು, ಹಿಂದುಳಿದ ‘ಅ’ ವರ್ಗಕ್ಕೆ ಮೀಸಲಿರುವ ಸ್ಥಾನಗಳಿಗೆ ಎರಡು, ಹಿಂದುಳಿದ ‘ಬ’ ವರ್ಗಕ್ಕೆ ಮೀಸಲಿರುವ ಸ್ಥಾನಗಳಿಗೆ ಒಂದು ಮತ್ತು ಸಾಮಾನ್ಯ ವರ್ಗಕ್ಕೆ ಇರುವ ಸ್ಥಾನಗಳಿಗೆ ಇಪ್ಪತ್ತೆಂಟು ಸೇರಿದಂತೆ ಒಟ್ಟು 37 ನಾಮಪತ್ರ ಸಲ್ಲಿಕೆಯಾಗಿವೆ.

ಅಳ್ನಾವರ ತಾಲೂಕಿನಲ್ಲಿ ಸಾಮಾನ್ಯ ವರ್ಗಕ್ಕೆ ಇರುವ ಸ್ಥಾನಗಳಿಗೆ ಮೂರು ನಾಮಪತ್ರಗಳು ಸಲ್ಲಿಕೆಯಾಗಿವೆ.ಕಲಘಟಗಿ ತಾಲೂಕಿನಲ್ಲಿ ಇಂದು ವಿವಿಧ ಗ್ರಾಮ ಪಂಚಾಯತಿಗಳಲ್ಲಿ ಅನುಸೂಚಿತ ಜಾತಿಗೆ ಮಿಸಲಿರುವ ಸ್ಥಾನಗಳಿಗೆ ಆರು ನಾಮಪತ್ರಗಳು, ಅನುಸೂಚಿತ ಪಂಗಡಕ್ಕೆ ಮೀಸಲು ಇರುವ ಸ್ಥಾನಗಳಿಗೆ ಆರು, ಹಿಂದುಳಿದ ‘ಅ’ ವರ್ಗಕ್ಕೆ ಮೀಸಲಿರುವ ಸ್ಥಾನಗಳಿಗೆ ಒಂಬತ್ತು, ಹಿಂದುಳಿದ ‘ಬ’ ವರ್ಗಕ್ಕೆ ಮೀಸಲಿರುವ ಸ್ಥಾನಗಳಿಗೆ ಒಂದು ಮತ್ತು ಸಾಮಾನ್ಯ ವರ್ಗಕ್ಕೆ ಇರುವ ಸ್ಥಾನಗಳಿಗೆ 36 ಸೇರಿದಂತೆ ಒಟ್ಟು 58 ನಾಮಪತ್ರ ಸಲ್ಲಿಕೆಯಾಗಿವೆ.ಧಾರವಾಡ ತಾಲೂಕಿನ ಗ್ರಾಮಪಂಚಾಯತಿಗಳಿಗೆ ಇಂದು 33 ನಾಮಪತ್ರಗಳು, ಕಲಘಟಗಿ ತಾಲೂಕಿನ ಗ್ರಾಮಪಂಚಾತಿಗಳಿಗೆ 58 ನಾಮಪತ್ರಗಳು ಮತ್ತು ಅಳ್ನಾವರ ತಾಲೂಕಿನ ಗ್ರಾಮಪಂಚಾತಿಗಳಿಗೆ 03 ನಾಮಪತ್ರಗಳು ಸೇರಿ ಒಟ್ಟು 94 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಜಿಲ್ಲಾಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸಿಗಲಿದೆ ಸ್ಥಾನ CM ಭರವಸೆ - ಸಚಿವ ಸ್ಥಾನ ನಿರೀಕ್ಷೆ ಯಲ್ಲಿದ್ದ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿದ ನಾಡ ದೊರೆ.....ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....