LIVE TV LocalCrimeNationalInternationalPoliticsEducationTechnologyEntertainmentSportsFeature
State News

ಆನ್ ಲೈನ್ ನಲ್ಲಿ ಪರಿಚಯ – ಆನ್ ಲೈನ್ ನಲ್ಲಿ ಮದುವೆಯ ಬೇಡಿಕೆ – ಆನ್ ಲೈನ್ ನಲ್ಲಿ ಹಣ ಹಾಕಿಸಿಕೊಂಡು ಆಫ್ ಲೈನ್ ಆದ

ಬೆಂಗಳೂರು -

ಮದುವೆಯ ಜಾಲ ತಾಣಗಳಲ್ಲಿ ಪರಿಚಯವಾಗಿ ಮದುವೆಯಾಗೊದಾಗಿ ನಂಬಿಸಿ ಯುವತಿಗೆ ನಾಲ್ಕು ಲಕ್ಷ ರೂಪಾಯಿ ವಂಚನೆ ಮಾಡಿರುವ ಪ್ರಕರಣ ಬೆಂಗಳೂರಿನಲ್ಲಿ ನಡೆದಿದೆ.ಶಶಿಧರ್ ಜೋಶಿ ಎಂಬುವರ ಹೆಸರಿನಲ್ಲಿ ಮ್ಯಾರೇಜ್ ಬ್ಯೂರೊ ಸಾಮಾಜಿಕ ಜಾಲ ತಾಣದಲ್ಲಿ ಖಾತೆಯೊಂದನ್ನು ತೆರೆದು ಯುವತಿಯೊಬ್ಬಳನ್ನು ಪರಿಚಯ ಮಾಡಿಕೊಂಡಿದ್ದಾರೆ.ನಂತರ ಮದುವೆಯಾಗೊದಾಗಿ ಹೇಳಿದ್ದರು.ಇತ್ತ ಮದುವೆಯಾಗಲು ವರನನ್ನು ಹುಡುಕಾಡುತ್ತಿದ್ದ ಯುವತಿಯ ಕಡೆಯವರು ಆಯಿತು ಬಿಡಿ ನೋಡಿದರಾಯಿತು ಎಂದುಕೊಂಡು ಸುಮ್ಮನಿದ್ದರು. ವೈವಾಹಿಕ ಜಾಲತಾಣವೊಂದರಲ್ಲಿ ಶಶಿಧರ ಜೋಶಿ ಎಂಬುವರ ಹೆಸರಿನಲ್ಲಿ ಖಾತೆ ತೆರೆದು ಫೋಟೊ ಸಮೇತ ಸ್ವ–ವಿವರ ಹಾಕಿದ್ದರು ಇವರು.

ಶಶಿಧರ್ ಜೋಶಿ ಹೆಸರಿನಲ್ಲಿ ರಿಕ್ವೆಸ್ಟ್ ಕಳುಹಿಸಿದ್ದ ಆರೋಪಿ ಮದುವೆಯಾಗುವುದಾಗಿ ಹೇಳಿದ್ದರು ಅಲ್ಲದೇ ಮಾನ್ಯತಾ ಟೆಕ್ ಪಾರ್ಕ್‌ನಲ್ಲಿರುವ ಸಾಫ್ಟ್‌ವೇರ್‌ ಕಂಪನಿಯೊಂದರಲ್ಲಿ ಮದುವೆಯಾಗಲು ವರನನ್ನು ಇವರು ಹುಡುಕಾಡುತ್ತಿದ್ದರಂತೆ. ಹೀಗೆ ಎಲ್ಲವನ್ನೂ ಹೇಳಿ ಯುವತಿಯನ್ನು ನಂಬಿಸಿದ್ದರು. ವೈವಾಹಿಕ ಜಾಲತಾಣವೊಂದರಲ್ಲಿ ಬೇರೆಯವರ ಹೆಸರಿನಲ್ಲಿ ಖಾತೆ ತೆರೆದು ಫೋಟೊ ಸಮೇತ ಸ್ವ–ವಿವರ ಹಾಕಿ ಶಶಿಧರ್ ಜೋಶಿ ಹೆಸರಿನಲ್ಲಿ ರಿಕ್ವೆಸ್ಟ್ ಕಳುಹಿಸಿದ್ದರು, ಯುವತಿಯನ್ನು ಸಂಪೂರ್ಣವಾಗಿ ಪರಿಚಯ ಮಾಡಿಕೊಂಡು ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿದ್ದ, ನಂತರ ಯುವತಿಯ ಮೊಬೈಲ್ ನಂಬರ್ ತಗೆದುಕೊಂಡು ಮಾತನಾಡಿದ್ದರಂತೆ ಶಶಿಧರ್.

ಮಾನ್ಯತಾ ಟೆಕ್ ಪಾರ್ಕ್‌ನಲ್ಲಿರುವ ಸಾಫ್ಟ್‌ ವೇರ್‌ ಕಂಪನಿಯೊಂದರಲ್ಲಿ ವ್ಯವಸ್ಥಾಪಕರಾಗಿರುವುದಾಗಿ ಹೇಳಿ ನಿಮ್ಮನ್ನೇ ಮದುವೆ ಮಾಡಿಕೊಳ್ಳುತ್ತೇನೆ ನಾನು ಹಲವೆಡೆ ಲಕ್ಷಾಂತರ ರೂಪಾಯಿ ಹಣ ಹೂಡಿಕೆ ಮಾಡಿದ್ದೇನೆ. ಬೆಂಗಳೂರಿನಲ್ಲೇ ಮನೆ ನಿರ್ಮಾಣ ಮಾಡಲು ಯೋಚಿಸಿದ್ದು, ಹಣದ ಅವಶ್ಯಕತೆ ಇದೆ. ನೀವು ಕೊಟ್ಟರೆ, ಹೂಡಿಕೆ ಹಣ ಬಂದ ನಂತರ ನಿಮಗೆ ನಿಮ್ಮ ಹಣವನ್ನು ಮರಳಿಸುತ್ತೇನೆ ಎಂದು ಆರೋಪಿ ಹೇಳಿದ್ದನಂತೆ. ಅದನ್ನು ನಂಬಿದ್ದ ಯುವತಿ, ಆರೋಪಿ ಹೇಳಿದ್ದ ಬ್ಯಾಂಕ್ ಖಾತೆಗಳಿಗೆ ₹ 4 ಲಕ್ಷ ಜಮೆ ಮಾಡಿದ್ದರು.ಅತ್ತ ಹಣ ಖಾತೆಗೆ ಬರುತ್ತಿದ್ದಂತೆ ಇತ್ತ ಮೊಬೈಲ್ ಆಫ್ ಆಗಿದೆ.ಮೊಬೈಲ್ ಸ್ವಿಚ್ ಆಫ್ ಆಗಿದ್ದು ಆರೋಪಿ ಕೂಡಾ ನಾಪತ್ತೆಯಾಗಿದ್ದಾನೆ. ವರನೊಬ್ಬ, ಹೊಸ ಮನೆ ನಿರ್ಮಿಸುವ ನೆಪದಲ್ಲಿ ನಗರದ ಯುವತಿಯಿಂದ ₹ 4 ಲಕ್ಷ ಪಡೆದು ವಂಚಿಸಿರುವ ಬಗ್ಗೆ ಪ್ರಕರಣ ದಾಖಲಾಗಿದೆ.

‘ವೈಟ್‌ಫೀಲ್ಡ್ ನಿವಾಸಿಯಾಗಿರುವ 26 ವರ್ಷದ ಯುವತಿ ದೂರು ನೀಡಿದ್ದಾರೆ. ಉತ್ತರ ಪ್ರದೇಶದವರು ಎನ್ನಲಾದ ಆರೋಪಿ ಶಶಿಧರ್ ಜೋಶಿ ಎಂಬುವರ ವಿರುದ್ಧ ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಲಾಗಿದೆ. ಖಾಸಗಿ ಕಂಪನಿ ಉದ್ಯೋಗಿ ಆಗಿರುವ ಯುವತಿ, ಪೋಷಕರ ಜೊತೆ ವೈಟ್‌ಫೀಲ್ಡ್‌ನಲ್ಲಿ ವಾಸವಿದ್ದಾರೆ.

ಮದುವೆಯಾಗಲು ವರನನ್ನು ಹುಡುಕಾಡುತ್ತಿದ್ದ ಅವರು, ವೈವಾಹಿಕ ಜಾಲತಾಣವೊಂದರಲ್ಲಿ ಖಾತೆ ತೆರೆದು ಫೋಟೊ ಸಮೇತ ಸ್ವ–ವಿವರ ಹಾಕಿದ್ದರು. ಶಶಿಧರ್ ಜೋಶಿ ಹೆಸರಿನಲ್ಲಿ ರಿಕ್ವೆಸ್ಟ್ ಕಳುಹಿಸಿದ್ದ ಆರೋಪಿ, ಮದುವೆಯಾಗುವುದಾಗಿ ಹೇಳಿದ ಮಾತನ್ನು ಕೇಳಿ ಹಣ ಕಳೆದುಕೊಂಡು ವಂಚನೆಗೊಳಗಾಗಿ ಪರದಾಡುತ್ತಿದ್ದಾರೆ.ಒಟ್ಟಾರೆ ಯಾರೇ ಆಗಲಿ ಮದುವೆಯಾಗೊದಾಗಿ ಹೇಳಿ ನಿಮಗೂ ಹೀಗೆ ಮೊಸ ಮಾಡಬಹುದು ಯಾರನ್ನೂ ನಂಬುವ ಮೊದಲು ದಯಮಾಡಿ ಒಮ್ಮೇ ಆಲೋಚಿಸಿ ವಿಚಾರಿಸಿ ಇಲ್ಲವಾದರೆ ನೀವು ಹೀಗೆ ಮೋಸ ಹೋಗಬಹುದು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...