LIVE TV LocalCrimeNationalInternationalPoliticsEducationTechnologyEntertainmentSportsFeature
Sports News

ಪೊಲೀಸ್ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ಪ್ರತಾಪ್‌ ರೆಡ್ಡಿ ಅಧಿಕಾರ ಹಸ್ತಾಂತರ ಮಾಡಿ ನಿರ್ಗಮಿಸಿದ ಕಮಲ್ ಪಂತ್.....

ಬೆಂಗಳೂರು -

ರಾಜಧಾನಿ ಬೆಂಗಳೂರಿನ ನೂತನ ಪೊಲೀಸ್ ಆಯುಕ್ತ ರಾಗಿ ಎಡಿಜಿಪಿ ಸಿ.ಎಚ್.ಪ್ರತಾಪ್ ರೆಡ್ಡಿ ಅಧಿಕಾರ ವಹಿಸಿ ಕೊಂಡರು.ಹೌದು ನಿರ್ಗಮಿತ ಕಮಿಷನರ್ ಕಮಲ್ ಪಂತ್ ಅವರು ನೂತನ ಪೊಲೀಸ್ ಆಯುಕ್ತರಿಗೆ ಅಧಿಕಾರ ಹಸ್ತಾಂತರಿಸಿದರು.1991ನೇ ಬ್ಯಾಚ್‌ ಐಪಿಎಸ್ ಅಧಿಕಾರಿ ಯಾಗಿರುವ ಇವರು ಆಂಧ್ರಪ್ರದೇಶದ ಗುಂಟೂರು ಜಿಲ್ಲೆ ಮೂಲದ ಪ್ರತಾಪ್ರೆಡ್ಡಿ,ಬೆಂಗಳೂರು ನಗರದ 35ನೇ ಕಮಿಷನರ್ ಆಗಿ ಅಧಿಕಾರ ಸ್ವೀಕರಿಸಿದರು.

ಬೆಂಗಳೂರಿನ ನ್ಯಾಷನಲ್ ಅಸೋಸಿಯೇಷನ್ ಆಫ್ ಸಾಫ್ಟ್ ವೇರ್ ಆ್ಯಂಡ್ ಸರ್ವೀಸಸ್ ಕಂಪನೀಸ್(ಸೈಬರ್ ಸೆಕ್ಯೂರಿಟಿ ವಿಂಗ್)ಸಲಹೆಗಾರರಾಗಿ ಪ್ರತಾಪ್ ರೆಡ್ಡಿ ಕಾರ್ಯ ನಿರ್ವಹಿಸಿದ್ದರು.1994ರಲ್ಲಿ ಮುಖ್ಯಮಂತ್ರಿಗಳ ಪದಕಕ್ಕೆ ಭಾಜನರಾಗಿದ್ದರು.ಕೆಲ ಕಾಲ ಸೈಬರ್ ಸೆಕ್ಯೂರಿಟಿ ವಿಭಾಗದ ನಿರ್ದೇಶಕರಾಗಿದ್ದರು.ತಾಂತ್ರಿಕ ಕಾರ್ಯಾಚರಣೆ ಗಳಲ್ಲಿ ಪರಿಣತಿ ಹೊಂದಿರುವ ವಿರಳ ಐಪಿಎಸ್ ಅಧಿಕಾರಿ ಗಳಲ್ಲಿ ಇವರೂ ಒಬ್ಬರಾಗಿದ್ದಾರೆ.ವಿಜಯಪುರ,ಕಲಬುರ ಗಿಯಲ್ಲಿ ಎಸ್ಪಿಯಾಗಿಯೂ ಸೇವೆ ಸಲ್ಲಿಸಿದ್ದಾರೆ.

ಸಿಬಿಐ ಸೇವೆಗೂ ತೆರಳಿದ್ದ ಸಂದರ್ಭ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಭಾರಿ ಪ್ರಮಾಣದ ಬ್ಯಾಂಕಿಂಗ್,ಸೆಕ್ಯೂರಿಟಿ ವಂಚನೆ ಬೇಧಿಸಿ ಆರೋಪಿಗಳನ್ನು ಸೆರೆಹಿಡಿಯುವಲ್ಲಿ ಪ್ರತಾಪ್ರೆಡ್ಡಿ ಪ್ರಮುಖ ಪಾತ್ರ ವಹಿಸಿ ದ್ದರು.ಕೊಲೆ,ಕಳ್ಳತನ,ಮಹಿಳೆಯರ ವಿರುದ್ಧದ ಅಪರಾಧ ಗಳು,ಹಣಕಾಸಿನ ವಂಚನೆಗಳ ತನಿಖೆಗಳು,ಸರ್ಕಾರಿ ಸಂಸ್ಥೆ ಗಳಿಂದ ಹಕ್ಕುಗಳ ಉಲ್ಲಂನೆ ಸೇರಿ ಹಲವು ಅಪರಾಧ ಪ್ರಕರಣಗಳನ್ನು ಬೇಧಿಸಿ ಆರೋಪಿಗಳಿಗೆ ಶಿಕ್ಷೆ ಕೊಡಿ ಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು.ಆಂತರಿಕ ಭದ್ರತೆ, ಅಗ್ನಿಶಾಮಕ ಮತ್ತು ತುರ್ತು ಸೇವೆ ವಿಭಾಗದ ಎಡಿಜಿಪಿ ಯಾಗಿ ಕಾರ್ಯ ನಿರ್ವಹಿಸಿರುವ ಅನುಭವ ಹೊಂದಿದ್ದಾರೆ. ಪ್ರಸ್ತುತ ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದಲ್ಲಿ ಪ್ರತಾಪ್ರೆಡ್ಡಿ ಕಾರ್ಯ ನಿರ್ವಹಿಸುತ್ತಿದ್ದರು.

ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಬಳಿಕ 2020ರ ಆಗಸ್ಟ್ ನಲ್ಲಿ ನಗರ ಪೊಲೀಸ್ ಆಯುಕ್ತರಾಗಿ ನೇಮಕಗೊಂಡಿದ್ದ ಕಮಲ್ ಪಂತ್ ಇಲಾಖೆಯಲ್ಲಿ ಗಮನಾರ್ಹ ಸುಧಾರಣೆ ತಂದಿದ್ದರು.ನಗರ ಪೊಲೀಸ್ ಆಯುಕ್ತರಾಗಿ 22 ತಿಂಗಳು ಸೇವೆ ಸಲ್ಲಿಸಿದ್ದರು. ಕೆ.ಜಿ ಹಳ್ಳಿ-ಡಿ.ಜೆ.ಹಳ್ಳಿ ಗಲಭೆ ಪ್ರಕರಣವನ್ನು ಯಶಸ್ವಿಯಾಗಿ ನಿಭಾಯಿಸಿದ್ದರು.ರೌಡಿ ಚಟುವಟಿಕೆ,ಡ್ರಗ್ಸ್ ನಿಯಂತ್ರಣಕ್ಕೆ ಕಡಿವಾಣ ಹಾಕಿದ್ದರು.ಸೈಬರ್ ಕ್ರೈಂ ತಡೆಗೆ ಶ್ರಮಿಸಿದ್ದರು. ಕೋವಿಡ್ ಸಂದರ್ಭದಲ್ಲಿ ಬೆಂಗಳೂರು ನಗರದ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇವರ ಅವಧಿಯಲ್ಲಿ ಬೆಳಕಿಗೆ ಬಂದ ಬಿಟ್ಕಾಯಿನ್ ಪ್ರಕರಣ ದೇಶಾದ್ಯಂತ ಭಾರಿ ಸದ್ದು ಮಾಡಿತ್ತು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....