LIVE TV LocalCrimeNationalInternationalPoliticsEducationTechnologyEntertainmentSportsFeature
International News

ಸೈನಿಕರೊಂದಿಗೆ ದೀಪಾವಳಿ ಆಚರಣೆ ಮಾಡಿದ ಪ್ರಧಾನಿ ನರೇಂದ್ರ ಮೋದಿ

ರಾಜಸ್ಥಾನ-

ಪ್ರತಿ ವರುಷದಂತೆ ಈವರುಷವೂ ಕೂಡಾ ದೇಶದ ಪ್ರಧಾನಿ ನರೇಂದ್ರ ಮೋದಿ ಬೆಳಕಿನ ಹಬ್ಬ ದೀಪಾವಳಿಯನ್ನು ದೇಶದ ಯೋಧರೊಂದಿಗೆ ಆಚರಣೆ ಮಾಡಿದರು.

ಈ ಬಾರಿಯೂ ಭಾರತೀಯ ಸೇನಾ ಯೋಧರೊಂದಿಗೆ ದೀಪಾವಳಿ ಆಚರಿಸಿದ ಪ್ರಧಾನಿ ದೇಶದ ರಕ್ಷೆಣೆಯಲ್ಲಿರುವ ಯೋಧರಿಗೆ ಆತ್ಮಸ್ಥೈರ್ಯವನ್ನು ತುಂಬಿದರು .

ದೀಪಾವಳಿ ಆಚರಿಸಲು ರಾಜಸ್ಥಾನದ ಜೈಸಲ್‌ಮೇರ್‌ಗೆ ತೆರಳಿದ ಪ್ರಧಾನಿ ಯೋಧರೊಂದಿಗೆ ಹಬ್ಬವನ್ನು ಆಚರಣೆ ಮಾಡಿದರು,ಸೈನಿಕರ ಸಮವಸ್ತ್ರದಲ್ಲಿ ಆಗಮಿಸಿದ ಮೋದಿ ಯೋಧರೊಂದಿಗೆ ಯೋಧರಾಗಿ ಕೆಲ ಸಮಯ ಕಳೆದು ದೀಪಾವಳೆಯನ್ನು ಆಚರಣೆ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ಮೋದಿಯವರು 2014 ರಲ್ಲಿ ದೀಪಾವಳಿಯ ಸಿಯಾಚಿನಗೆ ಹೋದಾಗ, ಕೆಲವರು ಆಶ್ಚರ್ಯಗೋಳಗಾಗಿದ್ದರು . ನಾನು ನನ್ನ ಜನರ ನಡುವೆ ಬರುತ್ತೇನೆ, ನನ್ನ ಜನರನ್ನು ಬಿಟ್ಟು ನಾನೆಲ್ಲಿ ಹೋಗಲಿ ? ನೀವು ಹಿಮಭರಿತ ಬೆಟ್ಟಗಳಲ್ಲಿ ಅಥವಾ ಮರುಭೂಮಿಯಲ್ಲಿ ವಾಸಿಸುತ್ತಿರಲಿ, ನನ್ನ ದೀಪಾವಳಿ ನಿಮ್ಮ ನಡುವೆ ಬರುವ ಮೂಲಕ ಪೂರ್ಣಗೊಳ್ಳುತ್ತದೆ ಎಂದು ಹೇಳಿದರು.

ಇನ್ನೂ ಪರಿಸ್ಥಿತಿ ಏನೇ ಇರಲಿ, ನಿಮ್ಮ ಶಕ್ತಿ ಮತ್ತು ಶೌರ್ಯವನ್ನು ಎಲ್ಲಿಯೂ ಹೋಲಿಸಲಾಗದು. 130 ಕೋಟಿ ದೇಶವಾಸಿಗಳು ನಿಮ್ಮ ಶೌರ್ಯಕ್ಕೆ ತಲೆಬಾಗುತ್ತಾ ನಿಮ್ಮೊಂದಿಗೆ ದೃಡ ವಾಗಿ ನಿಂತಿದ್ದಾರೆ. ನಿಮ್ಮ ಶೌರ್ಯದ ಬಗ್ಗೆ ಹೆಮ್ಮೆ ಪಡುತ್ತಾರೆ. ವಿಶ್ವದ ಯಾವುದೇ ಶಕ್ತಿಯು ನಮ್ಮ ಧೈರ್ಯಶಾಲಿ ಸೈನಿಕರ ದೇಶದ ಗಡಿ ರಕ್ಷಿಸುವುದನ್ನು ತಡೆಯಲು ಸಾಧ್ಯವಿಲ್ಲ ಎಂದು ಹೆಮ್ಮೆ ಪಟ್ಟರು . ಇನ್ನೂ ಗಡಿಯಲ್ಲಿ ನೀವು ಮಾಡುವ ತ್ಯಾಗ, ತಪಸ್ಸು ದೇಶದ ಜನರಲ್ಲಿ ನಂಬಿಕೆ ಹುಟ್ಟುಹಾಕುತ್ತದೆ.ಮಿಲಿಟರಿ ಕೌಶಲ್ಯದ ಇತಿಹಾಸವನ್ನು ತೆಗೆದು ಓದಿದಾಗಲೆಲ್ಲಾ ಲಾಂಗ್‌ವಾಲಾ ಕದನ ನೆನಪಾಗುತ್ತದೆ ಇಂದಿಗೂ ಪ್ರತಿಯೊಬ್ಬ ಭಾರತೀಯರ ಹೃದಯವನ್ನು ತುಂಬುತ್ತದೆ ಎಂದು ನೆನೆದರು.

ಪ್ರತಿ ಬಾರಿಯೂ, ಪ್ರತಿ ಹಬ್ಬದಲ್ಲೂ, ನಾನು ನಿಮ್ಮ ನಡುವೆ ಬಂದಾಗಲೆಲ್ಲಾ, ನಾನು ನಿಮ್ಮೊಂದಿಗೆ ಹೆಚ್ಚು ಸಮಯ ಕಳೆಯುತ್ತೇನೆ,ನಿಮ್ಮ ಸಂತೋಷ ಮತ್ತು ದುಃಖದಲ್ಲಿ ನಾನು ಹೆಚ್ಚು ತೊಡಗಿಸಿಕೊಳ್ಳುತ್ತೇನೆ. ಸಾಮರ್ಥ್ಯವು ವಿಜಯದ ನಂಬಿಕೆ, ದಕ್ಷತೆಯು ಶಾಂತಿಯ ಬಹುಮಾನವಾಗಿದೆ. ಭಾರತ ಇಂದು ಸುರಕ್ಷಿತವಾಗಿದೆ, ಏಕೆಂದರೆ ಭಾರತಕ್ಕೆ ತನ್ನನ್ನು ತಾನು ರಕ್ಷಿಸಿಕೊಳ್ಳುವ ಶಕ್ತಿ ಇದೆ. ಎಂದು ಪ್ರಧಾನಿ ಮೋದಿಯವರು ಭಾರತದ ಘನತೆಯನ್ನು ಕುರಿತು ಸೈನಿಕರಿಗೆ ಹೇಳಿದರು.

ಇನ್ನೂ ಈ ಒಂದು ವಿಶೇಷವಾದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ
ಸೇನಾ ಮುಖ್ಯಸ್ಥ ಜನರಲ್ ಎಂ. ಎಂ. ನರವಣೆ , ಬಿಎಸ್‌ಎಫ್‌ ಮಹಾ ನಿರ್ದೇಶಕ ರಾಕೇಶ್ ಅಸ್ಥಾನಾ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೇ ರಾಜಸ್ಥಾನದ ಬಿಜೆಪಿ ಪಕ್ಷದ ಹಿರಿಯರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...