LIVE TV LocalCrimeNationalInternationalPoliticsEducationTechnologyEntertainmentSportsFeature
State News

ವನಹಳ್ಳಿ,ತಳವಾಯಿ,ಕನಕೂರು ಗ್ರಾಮಗಳಲ್ಲಿ ಪತಿಯ ಪರವಾಗಿ ಅಬ್ಬರದ ಪ್ರಚಾರ ಮಾಡಿದ ಪ್ರೀಯಾ ದೇಸಾಯಿ - ಮನೆ ಮನೆಗೆ ತೆರಳಿ ಮತಯಾಚನೆ ಪ್ರಚಾರ.....

ಧಾರವಾಡ -

2023 ಕರ್ನಾಟಕ ವಿಧಾನಸಭಾ ಚುನಾವಣೆ ಅಂಗವಾಗಿ ಧಾರವಾಡ ಗ್ರಾಮೀಣ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ಅಮೃತ ದೇಸಾಯಿ ಪರವಾಗಿ ಅವರ ಪತ್ನಿಯಾದ ಶ್ರೀಮತಿ ಪ್ರೀಯಾ ಅಮೃತ ದೇಸಾಯಿ ಅವರು ಧಾರವಾಡ ತಾಲೂಕಿನ ಗ್ರಾಮಾಂತರ ಕ್ಷೇತ್ರಗಳಾದ ವನಹಳ್ಳಿ ತಳವಾಯಿ, ಮತ್ತು ಕನಕೂರು ಗ್ರಾಮಗಳಿಗೆ ಭೇಟಿಕೊಟ್ಟು ಪ್ರಚಾರ ಮಾಡಿದರು

ಈ ಮೂರು ಗ್ರಾಮಗಳಲ್ಲಿ ಪಾದಯಾತ್ರೆ ಮಾಡುತ್ತ ಆ ಗ್ರಾಮಗಳ ಮನೆ ಮನೆಗೂ ತೆರಳಿ ಮಹಿಳಾ ನಾಗರಿಕರನ್ನು ಭೇಟಿ ಮಾಡಿದರು. ಅವರ ಸಹಕಾರ ಮತ್ತು ಬೆಂಬಲದಿಂದ ಈ ವರೆಗೆ ನನ್ನ ಅಧಿಕಾರ ಅವಧಿಯಲ್ಲಿ ಧಾರವಾಡ ಕ್ಷೇತ್ರಾ ಭೀವೃದ್ಧಿಗಾಗಿ ನಾನು ಕೈಗೊಂಡ ಅಭಿವೃದ್ಧಿ ಯೋಜನೆಗಳ ಬಗ್ಗೆ ತಿಳಿಸಿದರು

ಅವರೆಲ್ಲರ ಪ್ರೀತಿ ವಿಶ್ವಾಸದಿಂದ ಬಿಜೆಪಿ ಸರ್ಕಾರ ಮತ್ತೊಂದು ಬಾರಿ ನನಗೆ ಸ್ಪರ್ಧೆಸಲು ಅವಕಾಶ ಕೊಟ್ಟಿದ್ದು ಈ ಮುಂಬರುವ ಚುನಾವಣೆಯಲ್ಲಿ ಧಾರವಾಡ ಗ್ರಾಮೀಣ ಕ್ಷೇತ್ರಗಳ ಸಂಪೂರ್ಣ ಅಭೀವೃದ್ಧಿಗಾಗಿ ನಿಮ್ಮ ಮತಗಳು ಅಮೂಲ್ಯವಾ ದದ್ದು ಎಂದು ತಿಳಿಸಿದರು

ಮತ್ತೆ ಪತಿಯನ್ನು ಮತ್ತೊಂದು ಬಾರಿಗೆ ಗೆಲ್ಲಿಸಿ ಹಾಗೆ ಭಾರತ ದೇಶದಲ್ಲಿ ಅಭಿವೃದ್ಧಿಯುತ ಆಡಳಿತಕ್ಕಾಗಿ ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸುವಂತೆ ಎಲ್ಲೆಡೆ ಕರಪತ್ರಗಳನ್ನು ಹಂಚಿ ಮನವಿ ಮಾಡಿ ಮತಯಾಚನೆ ಮಾಡಿದರು.

ಈ ವೇಳೆ ಶ್ರೀಮತಿ ಜ್ಯೋತಿ ಗೌಡರ,ಶ್ರೀಮತಿ ನಿರ್ಮಲ ಹಾವೇರಿ,ಶ್ರೀಮತಿ ದೀಪಾ ಶಿರೂರ, ಶ್ರೀಮತಿ ರೇಣುಕಾ ಅರೆನ್ನವರ,ಶ್ರೀಮತಿ ಈರಮ್ಮ ಹುಬ್ಬಳ್ಳಿ, ಶ್ರೀಮತಿ ಬಸಮ್ಮ ತಳವಾರ, ಶ್ರೀಮತಿ ಸುಮಾ ನಾವಳಿ ಸೇರಿದಂತೆ ಆ ಗ್ರಾಮಗಳ ಸರ್ವ ತಾಯಂದಿರು ಯುವಕರು ಮತ್ತು ಎಲ್ಲಾ ಗ್ರಾಮ ಸ್ಥರು ಶ್ರೀಮತಿ ಪ್ರಿಯಾ ಅಮೃತ ದೇಸಾಯಿ ಅವರೊಂದಿಗೆ ಉಪಸ್ಥಿತರಿದ್ದರು.

ಸುದ್ದಿ ಸಂತೆ ನ್ಯೂಸ್ ಧಾರವಾಡ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....