LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಆಸ್ತಿ ವಿವಾದ -ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ

ಧಾರವಾಡ -

ಆಸ್ತಿ ವಿಷಯಕ್ಕೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತನ ಮೇಲೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಮೋಹನ ಲಿಂಬಿಕಾಯಿ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ನಾಗನಗೌಡ ನೀರಲಗಿ ಪಾಟೀಲ ಎಂಬುವವರ ಮೇಲೆ ಕುಮಾರ ಪಾಟೀಲ ಎಂಬಾತ ಹಲ್ಲೆ ನಡೆಸಿದ್ದಾನೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಮೋಹನ ಲಿಂಬಿಕಾಯಿ ಹಾಗೂ ನಾಗನಗೌಡ ನೀರಲಗಿ ಪಾಟೀಲ ಅವರ ಮಧ್ಯೆ ಲ್ಯಾಂಡ್ ವಿಷಯಕ್ಕೆ ಸಂಬಂಧಿಸಿದಂತೆ ವ್ಯವಹಾರ ಇತ್ತು. ಈ ವ್ಯವಹಾರವೇ ಹಲ್ಲೆಗೆ ಕಾರಣ ಎಂದು ಗೊತ್ತಾಗಿದೆ.

ಲ್ಯಾಂಡ್ ವಿಷಯಕ್ಕೆ ಸಂಬಂಧಿಸಿದಂತೆ ಇಂದು ಕುಮಾರ ಪಾಟೀಲ ನಾಗನಗೌಡ ಅವರ ಕಚೇರಿಗೆ ಮೂರು ಜನರೊಂದಿಗೆ ಬಂದಿದ್ದ. ಈ ವೇಳೆ ಮಾತುಕತೆ ನಡೆದು, ಕುಮಾರ ಪಾಟೀಲ ಕೊಡಲಿಯಿಂದ ನಾಗನಗೌಡ ಅವರ ಮೇಲೆ ಹಲ್ಲೆ ನಡೆಸಿದ್ದಾನೆ. ಹಲ್ಲೆ ನಡೆಸುವ ವೇಳೆ ಕುಮಾರ ಪಾಟೀಲ ಮೋಹನ ಲಿಂಬಿಕಾಯಿ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡುತ್ತಲೇ ಇದ್ದ. ಇದಕ್ಕೆಲ್ಲ ಕಾರಣ ಮೋಹನ ಲಿಂಬಿಕಾಯಿ ಅವರೇ ಎಂದು ಹಲ್ಲೆಗೊಳಗಾದ ನಾಗನಗೌಡ ನೇರವಾಗಿ ಆರೋಪ ಮಾಡಿದ್ದಾರೆ. ಅಲ್ಲದೇ ಈ ಘಟನೆ ಸಂಬಂಧ ದೂರು ದಾಖಲಿಸಿದರೆ ನಿಮ್ಮ ಮನೆಯವರೆಲ್ಲರನ್ನೂ ಬಿಡೋದಿಲ್ಲ ಎಂದು ಬೆದರಿಕೆ ಕೂಡ ಹಾಕಿದ್ದಾನೆ ಎಂದು ನಾಗನಗೌಡ ಆರೋಪಿಸಿದ್ದಾರೆ.

ನಾಗನಗೌಡ ಅವರ ಕಚೇರಿಗೆ ಬಂದ ಕುಮಾರ ಪಾಟೀಲ ಅಲ್ಲೇ ಇದ್ದ ಕೊಡಲಿಯಿಂದ ತಲೆಗೆ ಹೊಡೆಯಲು ಯತ್ನಿಸಿದ್ದಾರಂತೆ. ಅದನ್ನು ತಪ್ಪಿಸಿಕೊಂಡ ನಾಗನಗೌಡ ಅವರ ಕೈಗೆ ಪೆಟ್ಟಾಗಿದೆ. ಸದ್ಯ ಅವರನ್ನು ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದ್ದು, ವಿದ್ಯಾಗಿರಿ ಠಾಣೆಯಲ್ಲಿ ದೂರು ದಾಖಲಿಸಲಾಗುವುದು ಎಂದು ನಾಗನಗೌಡ ತಿಳಿಸಿದ್ದಾರೆ.

ಹಲ್ಲೆಗೊಳಗಾದ ನಾಗನಗೌಡ ಬಿಜೆಪಿ ಕಾರ್ಯಕರ್ತ. ಹಲ್ಲೆ ಮಾಡಿದ ಕುಮಾರ ಪಾಟೀಲ ಕೂಡ ನವಲಗುಂದ ತಾಲೂಕಿನ ಬಿಜೆಪಿ ಉಪಾಧ್ಯಕ್ಷರಾಗಿದ್ದಾರೆ. ಇನ್ನು ಈ ಘಟನೆಗೆ ಕಾರಣವಾಗಿರುವ ಮೋಹನ ಲಿಂಬಿಕಾಯಿ ಅವರು ಕೂಡ ಬಿಜೆಪಿ ಮುಖಂಡರಾಗಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....