LIVE TV LocalCrimeNationalInternationalPoliticsEducationTechnologyEntertainmentSportsFeature
State News

PSI ಬೈರಪ್ಪ ಬಂಧನ - ವಶಕ್ಕೆ ತಗೆದುಕೊಂಡು ವಿಚಾರಣೆ ಮಾಡುತ್ತಿರುವ ಪೊಲೀಸರು......

ಬೆಂಗಳೂರು -

ವರದಕ್ಷಿಣೆಗಾಗಿ ಪತ್ನಿಗೆ ಕಿರುಕುಳ ಹಾಗೂ ಮಚ್ಚಿನಿಂದ ಹಲ್ಲೆಗೆ ಯತ್ನಿಸಿದ್ದ ಆರೋಪದಲ್ಲಿ ಪೊಲೀಸ್ ಸಬ್ ಇನ್‌ಸ್ಪೆಕ್ಟರ್‌ ಕೆ.ಎಸ್. ಬೈರಪ್ಪ ಅವರನ್ನು ಕೆಂಗೇರಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ ರೇವತಿ ಎಂಬುವರು ನೀಡಿದ ದೂರು ಆಧರಿಸಿ ಕೆ.ಎಸ್.ಬೈರಪ್ಪ ಅವರನ್ನು ಬಂಧಿಸಲಾಗಿದೆ.ಕೃತ್ಯ ನಡೆದ ಸ್ಥಳ ಆಧರಿಸಿ ತಾವರೆಕೆರೆ ಪೊಲೀಸರಿಗೆ ಪ್ರಕರಣ ವರ್ಗಾವಣೆ ಮಾಡಲಾಗಿದೆ. ಮುಂದಿನ ತನಿಖೆಯನ್ನು ಅಲ್ಲಿನ ಪೊಲೀಸರು ನಡೆಸಲಿದ್ದಾರೆ ಎಂದು ನೈರುತ್ಯ ವಿಭಾಗದ ಡಿಸಿಪಿ ಅನಿತಾ ಹದ್ದಣ್ಣನವರ್ ತಿಳಿಸಿದ್ದಾರೆ.

ಬೈರಪ್ಪ ಅವರು ಸದ್ಯ ನಗರ ಪೊಲೀಸ್ ಕಮಿಷನರ್ ಕಚೇರಿಯ ಕಂಟ್ರೋಲ್ ರೂಮ್ ವಿಭಾಗದಲ್ಲಿ ಪಿಎಸ್‌ಐ ಆಗಿ ಕೆಲಸ ಮಾಡುತ್ತಿದ್ದಾರೆ.ಆರಂಭದಲ್ಲಿ ಕೆಂಗೇರಿ ಠಾಣೆಯ ಪೊಲೀಸರಿಗೆ ರೇವತಿ ದೂರು ನೀಡಿದ್ದರು ಆ ದೂರು ಆಧರಿಸಿ ಪೊಲೀಸರು ಜುಲೈ 13ರಂದು ಎನ್‌ಸಿಆರ್ (ಗಂಭೀರವಲ್ಲದ ಪ್ರಕರಣ) ದಾಖಲಿಸಿಕೊಂಡಿದ್ದರು ಬಳಿಕ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿದ್ದ ರೇವತಿ, ಪತಿಯ ವಿರುದ್ಧ ಎಫ್‌ಐಆರ್ ದಾಖಲಿಸಿ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿದ್ದರು

ಇದೀಗ ಎಫ್‌ಐಆರ್ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಚನಾಪುರ ನಿವಾಸಿಯಾಗಿರುವ ಬೈರಪ್ಪ ಅವರು ಐದು ವರ್ಷದ ಹಿಂದೆ ರೇವತಿ ಅವರನ್ನು ಮದುವೆ ಆಗಿದ್ದರು. ದಂಪತಿಗೆ ಮೂರು ವರ್ಷದ ಹೆಣ್ಣು ಮಗುವಿದೆ.

'ತಾನು ಪಿಎಸ್‌ಐ ಆಗಿದ್ದು, ಮದುವೆ ವೇಳೆ ವರದಕ್ಷಿಣೆ ಕೊಟ್ಟಿಲ್ಲ. ತವರು ಮನೆಯಿಂದ ₹50 ಲಕ್ಷ ತೆಗೆದುಕೊಂಡು ಬರುವಂತೆ ಒತ್ತಾಯಿಸಿ ಮೇಲೆ ಹಲ್ಲೆ ಮಾಡಿದ್ದಾರೆ. ಪತಿ ಮನೆಯವರೂ ಸಹ ಕಿರುಕುಳ ನೀಡಿದ್ದಾರೆ. ಪ್ರಶ್ನಿಸಿದಕ್ಕೆ ನನ್ನ ತಂದೆಗೆ ಮಚ್ಚಿನಿಂದ ಹಲ್ಲೆ ಮಾಡುವುದಾಗಿ ಬೆದರಿಸಿದ್ದರು' ಎಂದು ರೇವತಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ವರದಕ್ಷಿಣೆ ವಿಚಾರಕ್ಕಾಗಿ ತನ್ನ ಮೇಲೆ ಮಾನಸಿಕ ಹಾಗೂ ದೈಹಿಕವಾಗಿ ಹಿಂಸೆ ನೀಡಿದ್ದಾರೆ. ಬೇರೆ ಯುವತಿಯ ಜತೆಗೆ ಸಲುಗೆ ಇದೆ ಅದನ್ನು ಪ್ರಶ್ನಿಸಿದ್ದಕ್ಕೆ ವಿಚ್ಛೇದನ ನೀಡುವಂತೆ ತಾಕೀತು ಮಾಡಿದ್ದಾರೆ ಎಂದು ರೇವತಿ ದೂರಿದ್ದಾರೆ.ಸಧ್ಯ ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ತನಿಖೆ ಮಾಡ್ತಾ ಇದ್ದಾರೆ.

 

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...