LIVE TV LocalCrimeNationalInternationalPoliticsEducationTechnologyEntertainmentSportsFeature
State News

ಡಿಸಿ,ಎಸ್ಪಿ,ಸೇರಿದಂತೆ ಜಿಲ್ಲೆಯ ಅಧಿಕಾರಿಗಳಿಗೆ ಗೃಹ ಸಚಿವರಿಂದ ಪುಲ್ ಡ್ರಿಲ್

ಚಿಕ್ಕಬಳ್ಳಾಪುರ -

ಮತ್ತೊಂದು ಸ್ಪೋಟ ನಡೆದ ದುರಂತ ನಡೆದ ಚಿಕ್ಕಬಳ್ಳಾಪೂರ ಜಿಲ್ಲೆಯ ಘಟನಾ ಸ್ಥಳಕ್ಕೇ ಗೃಹ ಸಚಿವ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಪರಿಶೀಲನೆ ಮಾಡಿದರು.ದುರಂತ ನಡೆದ ಘಟನಾ ಸ್ಥಳಕ್ಕೇ ಸಚಿವರು ಭೇಟಿ ನೀಡಿ ಅಧಿಕಾರಿಗಳೊಂದಿಗೆ ಮಾಹಿತಿಯನ್ನು ಪಡೆದುಕೊಂಡರು.

ಇದೇ ವೇಳೆ ಇತ್ತೀಚಿಗೆ ಶಿವಮೊಗ್ಗದಲ್ಲಿ ನಡೆದ ಸ್ಪೋಟದ ಘಟನೆಯಿಂದ ಎಚ್ಚೇತ್ತುಕೊಳ್ಳದೇ ಸೂಕ್ತವಾದ ಕ್ರಮವನ್ನು ಕೈಗೊಳ್ಳದೇ ಸುಮ್ಮನಿದ್ದ ಚಿಕ್ಕಬಳ್ಳಾಪೂರ ಜಿಲ್ಲೆಯ ಜಿಲ್ಲಾಧಿಕಾರಿ,ಜಿಲ್ಲಾ ಎಸ್ಪಿ,ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಸೇರಿದಂತೆ ಜಿಲ್ಲೆಯ ಹಿರಿಯ ಅಧಿಕಾರಿಗಳಿಗೆ ಗೃಹ ಸಚಿವರು ಪುಲ್ ಡ್ರೀಲ್ ಮಾಡಿದರು.

ಘಟನೆ ಬಗ್ಗೆ ಪರಾಮರ್ಶೆ ಮಾಡುತ್ತಾ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅಧಿಕಾರಿಗಳನ್ನು ತರಾಟೆಗೆ ತಗೆದುಕೊಂಡರು.ಅರ್ಧ ಗಂಟೆಯಿಂದ ಸ್ಥಳದಲ್ಲೇ ಪರಿಶೀಲನೆ ನಡೆಸಿದ ಗೃಹ ಸಚಿವರು. ಡಿಸಿ ಆರ್ ಲತಾ. ಎಸ್ಪಿ ಜಿ ಕೆ ಮಿಥುನ್ ಕುಮಾರ್. ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಿರಿಯ ಭೂ ವಿಜ್ಞಾನಿ ನಂಜುಂಡಸ್ವಾಮಿ ಗೆ ತರಾಟೆ ತಗೆದುಕೊಂಡರು.

ಜಿಲೆಟಿನ್ ಸ್ಪೋಟ ಸಂಭವಿಸಿದ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆಯ ಹಿರೇನಾಗವೇಲಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಘಟನಾ ಸ್ಥಳದಲ್ಲಿನ ವಾಸ್ತವ ಪರಿಸ್ಥಿತಿಯನ್ನು ಸಚಿವರು ಖುದ್ದಾಗಿ ಪರಿಶೀಲಿಸಿದರು. ಪೊಲೀಸ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಂದ ಘಟನೆ ಕುರಿತು ಹೆಚ್ಚಿನ ಮಾಹಿತಿ ಪಡೆದರು.

ಘಟನೆಗೆ ಕಾರಣಗಳೇನು? ರಾತ್ರಿ ವೇಳೆ ಈ ಅಜಾಗರೂಕತೆ ಸಂಭವಿಸಿದ್ದು ಹೇಗೆ ಎಂಬುದರ ಬಗ್ಗೆ ಸಚಿವ ಬಸವರಾಜ ಬೊಮ್ಮಾಯಿ ಅವರು ಮಾಹಿತಿ ಪಡೆದುಕೊಂಡರು. ಈ ದುರ್ಘಟನೆಯಲ್ಲಿ ಮೃತ ಪಟ್ಟವರ ಆತ್ಮಕ್ಕೆ ಸಚಿವರು ನಮನ ಸಲ್ಲಿಸಿದರು.ಗೃಹ ಸಚಿವರೊಂದಿಗೆ ಆರೋಗ್ಯ ಸಚಿವ ಡಾ.ಸುಧಾಕರ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...