LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಭೀಕರ ಅಪಘಾತದಲ್ಲಿ ಮಡಿದವರಿಗೆ ಪುಣ್ಯ ತಿಥಿ ಕಾರ್ಯಕ್ರಮ

ಧಾರವಾಡ -

ಜನೇವರಿ 15 ರಂದು ಹು-ಧಾ ಬೈಪಾಸ್ ನ
ಇಟಿಗಟ್ಟಿ ಬಳಿ‌ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮಡಿದವರಿಗಾಗಿ ಧಾರವಾಡದಲ್ಲಿ ಸಾಮೂಹಿಕ ಪುಣ್ಯ ತಿಥಿ ಕಾರ್ಯಕ್ರಮವನ್ನು ಮಾಡಲಾಯಿತು‌.

ಒಂಬತ್ತನೇಯ ದಿನವಾದ ಇಂದು ಹೃದಯ ವಿದ್ರಾವಕ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ಒಂಬತ್ತನೇ ದಿನವಾದ ಇಂದು ಧಾರವಾಡದಲ್ಲಿ ಪುಣ್ಯ ತಿಥಿ ಮಾಡಲಾಯಿತು.

ಧಾರವಾಡದ ಕೆಲಗೇರಿಯಲ್ಲಿ ಸಾಮೂಹಿಕ ಪುಣ್ಯ ತಿಥಿ ಕಾರ್ಯಕ್ರಮ ಮಾಡಲಾಯಿತು. ಇನ್ನೂ ಈ ಒಂದು ಕಾರ್ಯಕ್ರಮ ಏಪ೯ಡಿಸಿದ ಹಿನ್ನೆಲೆಯಲ್ಲಿ ಹಲವರು ಈ ಒಂದು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು ಕಂಡು ಬಂದಿತು.

ಕೆಲಗೇರಿ, ಗಾಯತ್ರಿಪುರಂ,ದೊಡ್ಡನಾಯಕನಕೊಪ್ಪ, ಸಂಪಿಗೆನಗರ, ಬನಶ್ರಿನಗರ,ಬೇಂದ್ರೆನಗರ ಹಾಗೂ ಬೈಪಾಸ್ ರಸ್ತೆಯ ಸುತ್ತಮುತ್ತಲಿನ ಬಡಾವಣೆಗಳ ನಿವಾಸಿಗಳೆಲ್ಲರೂ ಸೇರಿ ಈ ಒಂದು ಕಾರ್ಯಕ್ರಮ ಹಮ್ಮಿಕೊಂಡಿದ್ದರು.ಕೆಲಗೇರಿ ಬೈಪಾಸ್ ಮೇಲ್ಸೇತುವೆ ಪಕ್ಕದಲ್ಲೇ ಒಂದು ಶಾಮಿಯಾನಾ ಹಾಕಿ ಮೃತರ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಿ ಪುಣ್ಯತಿಥಿ ಆಚರಿಸಲಾಯಿತು.

ನಂತರ ಎಲ್ಲರೂ ಸೇರಿ ರಸ್ತೆಯಲ್ಲೇ (ಸರ್ವಿಸ್ ರಸ್ತೆ) ಕುಳಿತು ತಿಥಿ ಊಟ ಮಾಡಿ‌ ಸರ್ಕಾರದ ವಿರುದ್ಧ ಹೆದ್ದಾರಿಯನ್ನು ಅಷ್ಟಪಥವಾಗಿ ಪರಿವರ್ತಿಸಲು ಆಗ್ರಹಿಸಿ ವಿನೂತನವಾಗಿ ಪ್ರತಿಭಟನೆಯನ್ನು ಮಾಡಿದರು. ಈ ಒಂದು ಕಾರ್ಯಕ್ರಮದಲ್ಲಿ ಕಲಾವಿದ ಮಂಜುನಾಥ ಹಿರೇಮಠ, ರುದ್ರಗೌಡ ಪಾಟೀಲ್, ಬಸವರಾಜ ಕೊರವರ,ಗಿರೀಶ್ ಪೂಜಾರ,ಬಸವರಾಜ ಭಜಂತ್ರಿ, ಬಸು ಹಿರೇಮಠ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....