LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಹುಬ್ಬಳ್ಳಿಯಲ್ಲಿ ಪುಟ್ ಪಾತ್ ತೆರುವು ಕಾರ್ಯಾಚರಣೆ.....

ಹುಬ್ಬಳ್ಳಿ-

ಸಾರ್ವಜನಿಕರ ಮನವಿ ಮೇರೆಗೆ ಹುಬ್ಬಳ್ಳಿಯ ಕೋಪ್ಪಿಕರ್ ಹಾಗೂ ದಾಜೀಬಾನ್ ಪೇಟೆ ವ್ಯಾಪ್ತಿಯಲ್ಲಿ ರಸ್ತೆ ಹಾಗೂ ಪುಟ್ ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು‌ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಹೇಳಿದರು.

ದಾಜೀಬಾನ್ ಪೇಟೆ, ಪೆಂಡಾರಗಲ್ಲಿ,‌ ಬೆಳವಾಗ್ ಗಲ್ಲಿ, ದುರ್ಗದ ಬೈಲು, ಕಲಾದಗಿ ಓಣಿಗಳಲ್ಲಿ ಅನಧಿಕೃತವಾಗಿ ಪಾಲಿಕೆ ಜಾಗವನ್ನು ಒತ್ತುವರಿ ಮಾಡಿ ವ್ಯಾಪಾರ ವಹಿವಾಟು ಮಾಡುತ್ತಿದ್ದ ಅಂಗಡಿ ಮುಂಗಟ್ಟುಗಳ ತೆರವು ಕಾರ್ಯಚರಣೆ ನೇತೃತ್ವ ವಹಿಸಿದ ಕಾರ್ಯಾಚರಣೆ ಮಾಡಿದರು.

ಕಳೆದ ಹದಿನೈದು ದಿನಗಳ ಹಿಂದೆ ಜಿಲ್ಲಾಡಳಿತ, ಪಾಲಿಕೆ ಹಾಗೂ ಪೊಲೀಸ್ ಅಧಿಕಾರಿಗಳ ಸಹಯೋಗದಲ್ಲಿ ಒತ್ತುವರಿ ತೆರವು ಮಾಡಿ ಎಚ್ಚರಿಕೆ ನೀಡಲಾಗಿತ್ತು.ವ್ಯಾಪರಿಗಳಿಗೆ ಪುನಃ ಪುಟ್ ಪಾತ್ ಒತ್ತುವರಿ ಮಾಡಿ ವ್ಯಾಪಾರ ಮಾಡುತ್ತಿದ್ದಾರೆ. ಆದ್ದರಿಂದ ರಸ್ತೆ ಹಾಗೂ ಪುಟ್ ಪಾತ್ ಮೇಲೆ ಇರಿಸಿದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.

ಒತ್ತುವರಿ ಕಾರ್ಯಾಚರಣೆ ಇಂದಿಗೆ ಮುಗಿಯುವು ದಿಲ್ಲ. ಪ್ರತಿದಿನ ಮುಂದುವರಿಸಲಾಗುವದು. ಹುಬ್ಬಳ್ಳಿ ನಗರದ ಕೊಪ್ಪಿಕರ್ ಹಾಗೂ ದಾಜಿಬಾನ್ ಪೇಟೆ ರಸ್ತೆಗಳು ಹೆಸರು ವಾಸಿಯಾಗಿವೆ. ರಸ್ತೆಗಳು ಸಾಕಷ್ಟು ಅಗಲವಾಗಿದ್ದರು, ವ್ಯಾಪಾರಿಗಳು ರಸ್ತೆ ಹಾಗೂ ಪುಟ್ ಪಾತ್ ಒತ್ತುವರಿ ಮಾಡಿದ್ದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿತ್ತು.
ಪಾಲಿಕೆಯಿಂದ 24 ಕಡೆ ಪಾದಯಾತ್ರಿಗಳ ಸಂಚಾರಿ ವಲಯಗಳನ್ನು ಗುರುತಿಸಲಾಗಿದೆ.

ಶೀಘ್ರವಾಗಿ ಅಧಿಸೂಚನೆ ಹೊರಡಿಸಲಾಗುವುದು. ರಸ್ತೆ ಬದಿ ವ್ಯಾಪಾರಿಗಳಿಗಿಂತ ಮಳಿಗೆ ಹೊಂದಿರುವ ವ್ಯಾಪಾರಿಗಳು ಫುಟ್ ಪಾತ್ ಗಳನ್ನು ಅತಿಕ್ರಮಿಸಿ ದ್ದಾರೆ. ಅಂಗಡಿಯನ್ನು ಗೋಡನ್ ತರ ಬಳಸಿ ರಸ್ತೆ ಬದಿಯಲ್ಲಿ ವ್ಯಾಪಾರ ನಡೆಸುತ್ತಿದ್ದಾರೆ. ಇಂತಹ ವ್ಯಾಪಾರಿಗಳನ್ನು ಗಮನದಲ್ಲಿಟ್ಟುಕೊಂಡು ಕಾರ್ಯಾಚರಣೆ ನಡೆಸಲಾಗುತ್ತಿದೆ.

ಪಾಲಿಕೆಯಿಂದ ಕಾರ್ಯಾಚರಣೆ ಮುಂದುವರಿಸು ತ್ತಾರೆ. ಅಂಗಡಿಗಳ ಮಾಲಿಕರಿಗೆ ಎಚ್ಚರಿಕೆ ನೀಡಲಾಗುವುದು. ಹುಬ್ಬಳ್ಳಿ ಧಾರವಾಡ ನಗರದಲ್ಲಿ ಪಾರ್ಕಿಂಗ್ ಸಲುವಾಗಿ 94 ರಸ್ತೆಗಳನ್ನು ಗುರುತಿಸಲಾಗಿದೆ.ಇದನ್ಮು ಪಾಲಿಕೆಯಿಂದ ಪೊಲೀಸ್ ಕಮಿಷನರ್ ಅವರಿಗೆ ಕಳುಹಿಸಿಕೊಡ ಲಾಗಿದೆ. ಶೀಘ್ರವಾಗಿ ಪೊಲೀಸ್ ಆಯುಕ್ತರು ಅಧಿಸೂಚನೆ ಹೊರಡಿಸುವರು. 54 ಬೀದಿ ಬದಿ ವ್ಯಾಪಾರಿ ರಸ್ತೆಗಳನ್ನು ಸಹ ಗುರುತಿಸ ಲಾಗಿದೆ ಇದನ್ನು ಅಧಿಸೂಚಿಸಲಾಗಿದೆ. ಕೊಪ್ಪಿಕರ್ ಹಾಗೂ ದಾಜಿಬಾನ್ ಪೇಟೆ ರಸ್ತೆಗಳು‌ 18‌ ಮೀಟರ್ ಅಗಲವಾಗಿವೆ. ನಕ್ಷೆಯ ಅನುಸಾರ ರಸ್ತೆಯನ್ನು ಅಳೆದು ಒತ್ತುವರಿಯಾಗಿದ್ದರೆ ಅದನ್ನು ಸಹ ತೆರವುಗೊಳಿಸಲಾಗುವುದು ಎಂದರು.

ಪಾಲಿಕೆ ಆಯುಕ್ತ ಡಾ.ಸುರೇಶ್ ಇಟ್ನಾಳ್, ಉಪ ಪೊಲೀಸ್ ಆಯುಕ್ತ ರಾಮರಾಜನ್, ಉಪ ವಿಭಾಗಾಧಿಕಾರಿ ಗೋಪಾಲಕೃಷ್ಣಾ, ಹುಬ್ಬಳ್ಳಿಯ ತಹಶಿಲ್ದಾರ ಶಶಿಧರ ಮಾಡ್ಯಾಳ ಸೇರಿದಂತೆ ಪಾಲಿಕೆ ವಲಯ ಅಧಿಕಾರಿಗಳು, ಪೊಲೀಸ್ ಹಾಗೂ ಪಾಲಿಕೆ ಸಿಬ್ಬಂದಿ ಉಪಸ್ಥಿತಿರಿದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....