LIVE TV LocalCrimeNationalInternationalPoliticsEducationTechnologyEntertainmentSportsFeature
Local News

SIRD&PR RC ಕೇಂದ್ರದ ಬೋಧಕರಾಗಿದ್ದ ರಾಜೇಂದ್ರ ದೇಸಾಯಿ ಇನ್ನು ನೆನಪು ಮಾತ್ರ ಅಗಲಿದ ಬೋಧಕ ಸಿಬ್ಬಂದಿಗೆ ಭಾವಪೂರ್ಣ ನಮನ ಸಲ್ಲಿಸಿದ ಕಚೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು.....

ಧಾರವಾಡ -

ಧಾರವಾಡದ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ,ಪ್ರಾದೇಶಿಕ ಕೇಂದ್ರ ಸಿಡಾಕ್ ಆವರಣ ಬೇಲೂರು ಕೈಗಾರಿಕಾ ಪ್ರದೇಶ ಧಾರವಾಡದ ಕಚೇರಿಯಲ್ಲಿ ಕಳೆದ ಹಲವಾರು ವರ್ಷಗಳಿಂದ ಪರಿಣಿತ ಬೋಧಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಜೇಂದ್ರ ದೇಸಾಯಿ ದಿ.14-05-21ರಂದು ನಿಧನ ರಾಗಿದ್ದಾರೆ. ಕೋವಿಡ್-19 ಸಾಂಕ್ರಾಮಿಕ ಲಾಕ್ ಡೌನ್ ಹಿನ್ನಲೆಯಲ್ಲಿ ಸದರಿಯವರು ತಮ್ಮ ಸ್ವಂತ ಊರಾದ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂ ಕಿನ ಕುಳ್ಳೂರು ಗ್ರಾಮದಲ್ಲಿದ್ದ ಅವರಿಗೆ ಕಳೆದ ಮೂರು ನಾಲ್ಕು ದಿನಗಳಿಂದ ಉಸಿರಾಟದ ಸಮಸ್ಯೆ ಎದುರಾಗಿತ್ತು. ಚಿಕಿತ್ಸೆಗಾಗಿ ರಾಮದುರ್ಗದ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.ಆದರೆ ನಿನ್ನೆ ಚಿಕಿತ್ಸೆ ಫಲಿಸ ದೇ ಮೃತರಾಗಿದ್ದಾರೆ.

ಕಚೇರಿಯಲ್ಲಿ ಎಲ್ಲರೊಂದಿಗೆ ಒಳ್ಳೆಯ ಒಡನಾಟ ವನ್ನು ಹೊಂದಿದ್ದ ಅವರು ಮಾನವೀಯ ಗುಣಗಳ ನ್ನು ಮೈಗೂಡಿಸಿಗೊಂಡು ಎಲ್ಲರ ಪ್ರೀತಿ-ವಿಶ್ವಾಸಕ್ಕೆ ಭಾಜನರಾಗಿದ್ದರು.ಗ್ರಾಮೀಣಭಿವೃದ್ಧಿ ಮತ್ತು ಪಂಚಾ ಯತ್ ರಾಜ್ ವಿಷಯದಲ್ಲಿ ಅಪಾರ ಅನುಭವ ಜ್ಞಾನ ಹಾಗೂ ತಮ್ಮದೆಯಾದ ವಿಶೇಷ ಶೈಲಿಯಿಂದ ಭೋಧನೆಯಲ್ಲಿ ನೈಪುಣ್ಯತೆ ಹೊಂದಿದ್ದು ಸಂಸ್ಥೆಯ ವತಿಯಿಂದ ಅನೇಕ ತರಬೇತಿಗಳನ್ನು ಯಶಸ್ವಿಯಾ ಗಿ ನಿರ್ವಹಿಸಿ ಅಪಾರ ಜನಮನ್ನಣೆ ಪಡೆದಿದ್ದರು ರಾಜೇಂದ್ರ ದೇಸಾಯಿ ದೈವಾಧೀನರಾಗಿರುವ ಸುದ್ದಿ ತಿಳಿದ ಕಚೇರಿಯ ಎಲ್ಲಾ ಸಿಬ್ಬಂದಿಗಳು ಕಂಬನಿ ಮಿಡಿದಿದ್ದಾರೆ. ಸಂಸ್ಥೆಯ ನಿರ್ದೇಶಕರು,ಉಪ ನಿರ್ದೇಶಕರು, ಬೋಧಕರು ಆಡಳಿತ ಮತ್ತು ಲೆಕ್ಕಾಧಿ ಕಾರಿಗಳು ಹಾಗೂ ಕಚೇರಿಯ ಎಲ್ಲಾ ಸಿಬ್ಬಂದಿಗಳು ಅವರ ಒಡನಾಟ ಸ್ಮರಿಸುತ್ತ ಭಾವಪೂರ್ಣ ನಮನ ದೊಂದಿಗೆ ಸಂತಾಪವನ್ನು ಸೂಚಿಸಿದ್ದಾರೆ.ಅವರಿಲ್ಲದ ಕುಟುಂಬಕ್ಕೆ ದುಖಃವನ್ನು ತಡೆದುಕೊಳ್ಳುವ ಶಕ್ತಿಯ. ನ್ನು ಆ ದೇವರು ನೀಡಲೆಂದು ಹಾಗೂ ಅವರ ಮನೆ ಯವರಿಗೆ, ಬಂಧುಗಳಿಗೆ ಮತ್ತು ಸ್ನೇಹಿತರಿಗೆ ದುಖಃ ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿ ಮೃತರ ಆತ್ಮಕ್ಕೆ ಶಾಂತಿ ಕೋರಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....