LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಹುಬ್ಬಳ್ಳಿ ಧಾರವಾಡ -ಡಿಸಿಪಿಯಾಗಿ ರಾಮರಾಜನ್ ಅಧಿಕಾರ ಸ್ವೀಕಾರ.

ಹುಬ್ಬಳ್ಳಿ

ಹುಬ್ಬಳ್ಳಿ ಧಾರವಾಡ ಕಾನೂನು ಸುವ್ಯವಸ್ಥೆಯ ಡಿಸಿಪಿಯಾಗಿ ರಾಮರಾಜನ್ ಅಧಿಕಾರ ಸ್ವೀಕಾರ ಮಾಡಿದ್ರು.ಹುಬ್ಬಳ್ಳಿಯ ನವನಗರದಲ್ಲಿರುವ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸ್ವೀಕಾರ ಮಾಡಿಕೊಂಡ್ರು.ಪಿ ಕೃಷ್ಣಕಾಂತ ಅವರನ್ನು ಧಾರವಾಡ ಜಿಲ್ಲಾ ಎಸ್ಪಿಯಾಗಿ ವರ್ಗಾವಣೆ ಮಾಡಿದ ನಂತರವೂ ಅವರಿಗೆ ಈ ಒಂದು ಡಿಸಿಪಿ ಹುದ್ದೆಯನ್ನು ಪ್ರಭಾರಿಯನ್ನಾಗಿ ಹೆಚ್ಚುವರಿಯಾಗಿ ನೀಡಲಾಗಿತ್ತು. ಸಧ್ಯ ಈ ಜಾಗಕ್ಕೇ ರಾಮರಾಜನ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಮಾಡಿದ್ದು ಇಂದು ಕಚೇರಿಯಲ್ಲಿ ಸರಳವಾಗಿ ಯಾವುದೇ ಆಡಂಬರವಿಲ್ಲದೇ ಅಧಿಕಾರ ಸ್ವೀಕಾರ ಮಾಡಿಕೊಂಡ್ರು.

ಇನ್ನೂ ಈ ಒಂದು ಕಾರ್ಯಕ್ರಮದಲ್ಲಿ ಹುಬ್ಬಳ್ಳಿ ಧಾರವಾಡ ಎಲ್ಲಾ ಪೊಲೀಸ್ ಠಾಣೆಗಳ ಹಿರಿಯ ಪೊಲೀಸ್ ಅಧಿಕಾರಿಗಳು ಇನಸ್ಪೇಕ್ಟರ್ ಗಳು ಸೇರಿದಂತೆ ಪೊಲೀಸ್ ಆಯುಕ್ತರ ಕಚೇರಿಯ ಸಿಬ್ಬಂದ್ದಿಗಳು ಉಪಸ್ಥಿತರಿದ್ದರು.ಇನ್ನೂ 2017 ರ ಐಪಿಎಸ್ ಆಗಿರುವ ಕೆ.ರಾಮರಾಜನ್, ಅಧಿಕಾರ ಸ್ವೀಕಾರದ ಸಮಯದಲ್ಲಿ ಯಾರಿಂದಲೂ ಪುಷ್ಪಗುಚ್ಚವನ್ನ ಪಡೆಯದೇ ಮೊದಲ ದಿನವೇ ಸರಳ ವ್ಯಕ್ತಿಯೊಂಬುದನ್ನು ತೋರಿಸಿಕೊಟ್ಟಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ ಪ್ರಭಾರದಲ್ಲಿದ್ದ ಹುದ್ದೆಗೆ ಚೆನ್ನಪಟ್ಟಣದಲ್ಲಿ ಎಸಿಪಿಯಾಗಿದ್ದ ಇವರನ್ನ ಅನ್ಯ ಕಾರ್ಯದ ನಿಮಿತ್ತ (ಓಓಡಿ) ಆಧಾರದ ಮೇಲೆ ನಗರಕ್ಕೆ ವರ್ಗಾವಣೆ ಮಾಡಿ, ರಾಜ್ಯ ಸರಕಾರ ನಿನ್ನೆಯಷ್ಟೇ ಆದೇಶ ಮಾಡಿತ್ತು.ಕಲಬುರಗಿಯಲ್ಲಿ ತರಬೇತಿ ಮುಗಿಸಿರುವ ತಮಿಳುನಾಡು ಮೂಲದ ಕೆ.ರಾಮರಾಜನ್ ಕಿರಿಯ ವಯಸ್ಸಿನ ಅಧಿಕಾರಿಯಾಗಿದ್ದಾರೆ.ಇನ್ನೂ ಅಧಿಕಾರ ಸ್ವೀಕಾರದ ನಂತರ ನೂತನ ಡಿಸಿಪಿ ಸಾಹೇಬ್ರು ಅವಳಿ ನಗರದ ಎಲ್ಲಾ ಪೊಲೀಸ್ ಠಾಣೆಗಳ ಅಧಿಕಾರಿಗಳ ಪರಿಚಯವನ್ನು ಮಾಡಿಕೊಂಡು ಮೊದಲನೇಯ ದಿನ ಸಭೆ ಮಾಡಿ ಕೆಲ ಮಾಹಿತಿಯನ್ನು ಪಡೆದುಕೊಂಡು ಎಲ್ಲರೂ ಜೊತೆಯಾಗಿ ಸರಿಯಾಗಿ ಕೆಲಸ ಮಾಡಿಕೊಂಡು ಹೊಗೋಣ ಎಂದು ಹೇಳಿದ್ರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸಿಗಲಿದೆ ಸ್ಥಾನ CM ಭರವಸೆ - ಸಚಿವ ಸ್ಥಾನ ನಿರೀಕ್ಷೆ ಯಲ್ಲಿದ್ದ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿದ ನಾಡ ದೊರೆ.....ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....