LIVE TV LocalCrimeNationalInternationalPoliticsEducationTechnologyEntertainmentSportsFeature
State News

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಆರಂಭವಾಗಲಿದೆ ಹೊಸ ಯೋಜನೆ - 4245 ಶಾಲೆಗಳಲ್ಲಿ ಏಕ ಕಾಲದಲ್ಲಿ ಆರಂಭವಾಗಲಿದೆ ರಾಣಿ ಲಕ್ಷ್ಮೀಬಾಯಿ ಅತ್ಮ ರಕ್ಷಣಾ ಕಾರ್ಯಕ್ರಮ.....

ಬೆಂಗಳೂರು -

ಹೆಣ್ಣು ಮಕ್ಕಳ ಸ್ವರಕ್ಷಣೆಗಾಗಿ ಕರಾಟೆಯನ್ನು ಇನ್ಮುಂದೆ ಪ್ರೌಢಶಾಲಾ ಮತ್ತು ಪಿಯು ವಿದ್ಯಾರ್ಥಿನಿಯರಿಗೂ ಕಲಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.ಹೌದು ಸಮಗ್ರ ಶಿಕ್ಷಣ ಕರ್ನಾಟಕ ವು 2021-22ನೇ ಸಾಲಿನಲ್ಲಿ ರಾಜ್ಯದ 4245 ಸರ್ಕಾರಿ ಪ್ರೌಢಶಾಲೆ ಹಾಗೂ 441 ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿನಿಯರಿಗೆ ರಾಣಿ ಲಕ್ಷ್ಮೀ ಬಾಯಿ ಆತ್ಮ ರಕ್ಷಣಾ ಪ್ರಶಿಕ್ಷಣ್ ಎಂಬ ಕಾರ್ಯಕ್ರಮದಡಿ ಸ್ವರಕ್ಷ ಣಾ ಕೌಶಲಗಳ ತರಬೇತಿ ನೀಡುವುದರ ಮೂಲಕ ಅವರಲ್ಲಿ ಸ್ವರಕ್ಷಣಾ ಕೌಶಲಗಳ ಸಾಮರ್ಥ್ಯ ಬೆಳೆಸಲು ನಿರ್ಧರಿಸಿ ಆರಂಭ ಮಾಡಲು ಮುಂದಾಗಿದೆ

ರಾಜ್ಯದ ಸರ್ಕಾರಿ ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಯರಿಗೆ ವಾರಕ್ಕೆ 2 ಅವಧಿಯಂತೆ ತಿಂಗಳಿಗೆ 8 ಅವಧಿ ಯಂತೆ ಒಟ್ಟು 20 ಅವಧಿಗಳ ತರಬೇತಿ ನೀಡುವುದು ತರಬೇತಿಯನ್ನು ಶಾಲಾ-ಕಾಲೇಜುಗಳ ಮುಖ್ಯಸ್ಥರ ನೇತೃತ್ವ ದಲ್ಲಿ ಸ್ಥಳೀಯ ಸಂಪನ್ಮೂಲ ತರಬೇತಿದಾರರಿಂದ ನೀಡು ವುದು.ಅದೇ ರೀತಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ,ಎನ್ ಸಿಸಿ ಹಾಗೂ ಇತರ ಸಂಘ- ಸಂಸ್ಥೆಗಳ ನೆರವಿನಿಂದ ವಿದ್ಯಾರ್ಥಿನಿಯರಿಗೆ ಕೌಶಲಗಳ ಬಗ್ಗೆ ಮಾಹಿತಿ ನೀಡಬೇಕೆಂದು ಇಲಾಖೆ ತಿಳಿಸಿದೆ.

ತರಬೇತಿದಾರನನ್ನು ಆಯ್ಕೆ ಮಾಡುವ ವೇಳೆ ವಿದ್ಯಾರ್ಹತೆ ಪ್ರಮಾಣಪತ್ರ ಪರಿಶೀಲಿಸಿ,ಸದ್ವರ್ತನೆ ತರಬೇತುದಾರರನ್ನು ಆಯ್ಕೆ ಮಾಡಬೇಕು ಎಂದು ಸೂಚನೆ ನೀಡಿದೆ. ತರಬೇತು ದಾರರಿಗೆ ಪ್ರತಿ ಅವಧಿಗೆ 200 ರೂ.ಗಳಂತೆ 200 ಅವಧಿಗೆ 4,000 ರೂ.ಗೌರವಧನ ನೀಡುವುದು.ಯೋಜನೆ ಅನು ಷ್ಠಾನ ಮಾಡಿರುವುದನ್ನು ಪೋಟೋ ಸಹಿತ ಮಾಹಿತಿ ಯನ್ನು ಶಿಕ್ಷಣ ಇಲಾಖೆಗೆ ಕಳುಹಿಸಬೇಕೆಂದು ಸೂಚನೆ ನೀಡಲಾಗಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...