LIVE TV LocalCrimeNationalInternationalPoliticsEducationTechnologyEntertainmentSportsFeature
Sports News

ಪಂಜಾಬ್ ಗೆ 242 ಗುರಿ ನೀಡಿದ RCB - ಶತಕವಂಚಿತರಾದ ವಿರಾಟ್,ಭರ್ಜರಿ ಬ್ಯಾಟಿಂಗ್ ಮಾಡಿದ RCB ಆಟಗಾರರು.....

ಧರ್ಮಶಾಲಾ -

ಪಂಜಾಬ್ ಗೆ 242 ಗುರಿ ನೀಡಿದ RCB  ಶತಕವಂಚಿತರಾದ ವಿರಾಟ್,ಭರ್ಜರಿ ಬ್ಯಾಟಿಂಗ್ ಮಾಡಿದ RCB ಆಟಗಾರರು ಹೌದು

ಐಪಿಎಲ್ ಟೂರ್ನಿಯಲ್ಲಿ ಪಂಜಾಬ್ ಎದುರಿನ ಪಂಧ್ಯದಲ್ಲಿ RCB ಟೀಮ್ 242 ಗುರಿಯನ್ನು ನೀಡಿದೆ.ಹೌದು ಧರ್ಮಶಾಲಾದಲ್ಲಿನ ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಪಂಜಾಬ್ ತಂಡವು RCB ತಂಡಕ್ಕೆ ಬ್ಯಾಟಿಂಗ್ ಮಾಡಲು ಅವಕಾಶ ನೀಡಿತು.ಹಿಮಾಚಲ ಪ್ರದೇಶದ ಕ್ರಿಕೆಟ್ ಸಂಸ್ಥೆಯ ಮೈದಾನದಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡಲು ಆರಂಭ ಮಾಡಿದ ಆರ್‌ಸಿಬಿ ತಂಡವು ಆರಂಭದಲ್ಲೇ ನಾಯಕ ಫಾಫ್ ಡು ಪ್ಲೆಸಿಸ್(9) ಹಾಗೂ ವಿಲ್ ಜ್ಯಾಕ್ಸ್(12) ವಿಕೆಟ್‌ ಕಳೆದುಕೊಂಡಿತು.

ಐಪಿಎಲ್‌ಗೆ ಪಾದಾರ್ಪಣೆ ಮಾಡಿದ ಕೊಡಗಿನ ಕುವರ ವಿದ್ವತ್ ಕಾವೇರಪ್ಪ ಈ ಇಬ್ಬರು ಬ್ಯಾಟರ್‌ ಗಳನ್ನು ಪೆವಿಲಿಯನ್ನಿಗಟ್ಟುವಲ್ಲಿ ಯಶಸ್ವಿಯಾ ದರು ಈ ವೇಳೆಗೆ 4.4 ಓವರ್‌ಗಳಲ್ಲಿ ಆರ್‌ಸಿಬಿ ಸ್ಕೋರ್ ಎರಡು ವಿಕೆಟ್ ನಷ್ಟಕ್ಕೆ 43 ರನ್ ಆಗಿತ್ತು.ಪವರ್‌ ಪ್ಲೇನೊಳಗೆ ಎರಡು ಪ್ರಮುಖ ವಿಕಟ್ ಕಳೆದುಕೊಂಡ ಆರ್‌ಸಿಬಿ ತಂಡಕ್ಕೆ ಮೂರನೇ ವಿಕೆಟ್‌ಗೆ ರಜತ್ ಪಾಟೀದಾರ್ ಹಾಗೂ ವಿರಾಟ್ ಕೊಹ್ಲಿ ಆಸರೆಯಾದರು.

ಆರಂಭದಿಂದಲೇ ಪಂಜಾಬ್ ಬೌಲರ್‌ಗಳ ಮೇಲೆ ಸವಾರಿ ಮಾಡಿದ ರಜತ್ ಪಾಟೀದಾರ್ ಕೇವಲ 21 ಎಸೆತಗಳನ್ನು ಎದುರಿಸಿ ಈ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ 4ನೇ ಅರ್ಧಶತಕ ಸಿಡಿಸಿ ಸಂಭ್ರಮಿಸಿದರು.ಮೂರನೇ ವಿಕೆಟ್‌ಗೆ ಕೊಹ್ಲಿ-ಪಾಟೀದಾರ್ ಜೋಡಿ ಕೇವಲ 32 ಎಸೆತಗಳನ್ನು ಎದುರಿಸಿ 76 ರನ್‌ಗಳ ಜೊತೆ ಯಾಟವಾಡಿದರು.ಅಂತಿಮವಾಗಿ ಪಾಟೀದಾರ್ 23 ಎಸೆತಗಳನ್ನು ಎದುರಿಸಿ 3 ಬೌಂಡರಿ ಹಾಗೂ 6 ಸಿಕ್ಸರ್ ಸಹಿತ 55 ರನ್ ಬಾರಿಸಿ ಸ್ಯಾಮ್ ಕರ್ರನ್‌ಗೆ ವಿಕೆಟ್ ಒಪ್ಪಿಸಿದರು.

ಮೊದಲ 10 ಓವರ್ ಅಂತ್ಯಕ್ಕೆ ಆರ್‌ಸಿಬಿ 3 ವಿಕೆಟ್ ಕಳೆದುಕೊಂಡು 119 ರನ್ ಬಾರಿಸಿತು. ಆರಂಭದಿಂದಲೇ ಸ್ಪೋಟಕ ಬ್ಯಾಟಿಂಗ್ ನಡೆಸಿದ ವಿರಾಟ್ ಕೊಹ್ಲಿ ಪಂಜಾಬ್ ಬೌಲರ್‌ಗಳನ್ನು ಮನಬಂದಂತೆ ದಂಡಿಸಿದ ಕೊಹ್ಲಿ ಕೇವಲ 47 ಎಸೆತಗಳನ್ನು ಎದುರಿಸಿ 7 ಬೌಂಡರಿ ಹಾಗೂ 6 ಸಿಕ್ಸರ್ ಸಹಿತ 92 ರನ್ ಬಾರಿಸಿ ಆರ್ಶದೀಪ್ ಸಿಂಗ್‌ಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಗೆ ಮರಳಿದರು.

ಇನ್ನು ಇದೇ ಪಂದ್ಯದ ಮೂಲಕ ವಿರಾಟ್ ಕೊಹ್ಲಿ ಈ ಆವೃತ್ತಿಯ ಐಪಿಎಲ್‌ ಟೂರ್ನಿಯಲ್ಲಿ 600+ ರನ್ ಬಾರಿಸಿದ ಮೊದಲ ಬ್ಯಾಟರ್ ಎನಿಸಿಕೊಂ ಡರು  ಇದರ ಜತೆ ಪಂಜಾಬ್ ಎದುರು 1000 ರನ್ ಸಿಡಿಸಿದ ಸಾಧನೆಯನ್ನು ಕೊಹ್ಲಿ ಮಾಡಿದರು

ಇನ್ನು ಕೊಹ್ಲಿಗೆ ಉತ್ತಮ ಸಾಥ್ ನೀಡಿದ ಕ್ಯಾಮರೋನ್ ಗ್ರೀನ್ 5ನೇ ವಿಕೆಟ್‌ಗೆ 46 ಎಸೆತಗಳನ್ನು ಎದುರಿಸಿ 92 ರನ್‌ಗಳ ಜತೆಯಾಟ ನಿಭಾಯಿಸಿದರು.ಗ್ರೀನ್ 27 ಎಸೆತಗಳನ್ನು ಎದುರಿಸಿ 5 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 46 ರನ್ ಬಾರಿಸಿ ಕೊನೆಯವರಾಗಿ ಹರ್ಷಲ್ ಪಟೇಲ್‌ಗೆ ವಿಕೆಟ್ ಒಪ್ಪಿಸಿದರು.

ನಂತರ ಆಟಗಾರರು ನಿಂತುಕೊಳ್ಳದೇ ಪೆವಿಲಿ ಯನ್ ನತ್ತ ಮುಖ ಮಾಡಿದ್ದು ಕಂಡು ಬಂದಿತು. ಅಂತಿಮವಾಗಿ 20 ಒವರ್ ಗಳಲ್ಲಿ 242 ಗುರಿ ನೀಡಿದರು.

ಸುದ್ದಿ ಸಂತೆ ನ್ಯೂಸ್ ಧರ್ಮಶಾಲಾ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...