LIVE TV LocalCrimeNationalInternationalPoliticsEducationTechnologyEntertainmentSportsFeature
State News

ನಿವೃತ್ತ IPS ಅಧಿಕಾರಿ ಆರ್ ಪಿ ಶರ್ಮಾ ಇನ್ನಿಲ್ಲ

ಬೆಂಗಳೂರು -

ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಹಿರಿಯ ಐಪಿಎಸ್ ಅಧಿಕಾರಿ ಆರ್. ಪಿ. ಶರ್ಮಾ (ರಾಜ್ ವೀರ್ ಪ್ರತಾಪ್ ಶರ್ಮಾ) ನಿಧನರಾಗಿದ್ದಾರೆ. ಅವರಿಗೆ 61 ವರ್ಷ ವಯಸ್ಸಾಗಿತ್ತು. ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಶರ್ಮಾ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಆರ್ ಪಿ ಶರ್ಮಾ ಅವರು ರಾಜ್ಯ ಪೊಲೀಸ್ ವಸತಿ ನಿಗಮದ ಪೊಲೀಸ್ ಮಹಾನಿರ್ದೇಶಕರಾಗಿ ಸೇವೆ ಸಲ್ಲಿಸಿ ಕಳೆದ ಡಿಸೆಂಬರ್ ನಲ್ಲಿ ನಿವೃತ್ತರಾಗಿದ್ದರು. ಪತ್ನಿ ಹಿರಿಯ ಐಎಎಸ್‌ ಅಧಿಕಾರಿ ನಾಗಲಾಂಬಿಕ ದೇವಿ ಹಾಗೂ ಇಬ್ಬರು ಮಕ್ಕಳನ್ನು ಶರ್ಮಾ ಅವರು ಅಗಲಿದ್ದಾರೆ.

ಆರ್.ಪಿ.ಶರ್ಮಾ ಈ ಹಿಂದೆ ಸೆ.2 ರಂದು ಗನ್ ಕ್ಲೀನ್ ಮಾಡುವಾಗ ಆಕಸ್ಮಿಕವಾಗಿ ಹಾರಿದ ಗುಂಡಿನಿಂದ ಗಾಯಗೊಂಡಿದ್ದರು. ಘಟನೆ ಬಳಿಕ ಅವರನ್ನು ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಐಸಿಯುನಲ್ಲಿ ಚಿಕಿತ್ಸೆ ಪಡೆದ ಬಳಿಕ ಡಿಸ್ಚಾರ್ಜ್ ಆಗಿದ್ದರು. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಶರ್ಮಾ ಮತ್ತೆ ಆಸ್ಪತ್ರೆ ಸೇರಿದ್ದರು. ಆದರೆ ಬಹು ಅಂಗಾಂಗ ವೈಫಲ್ಯದಿಂದ ಚಿಕಿತ್ಸೆ ಫಲಾರಿಯಾಗದೆ ಇಂದು ನಿಧನರಾಗಿದ್ದಾರೆ.

ಪತ್ರ ಬರೆದು ಸುದ್ದಿಯಾಗಿದ್ದರು
2018ರಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಯಾಗಿದ್ದಾಗ ಪೊಲೀಸ್ ಇಲಾಖೆಯಲ್ಲಿ ರಾಜಕಾರಿ ಣಿಗಳ ಹಸ್ತಕ್ಷೇಪದ ವಿರುದ್ಧ ಆರ್.ಪಿ.ಶರ್ಮಾ ಧ್ವನಿ ಎತ್ತಿದ್ದರು. ಅವರು ಬರೆದಿದ್ದ ಪತ್ರವೊಂದು ಮಾಧ್ಯಮಗಳಿಗೆ ಸೋರಿಕೆಯಾದ ಹಿನ್ನೆಲೆಯಲ್ಲಿ ಸರ್ಕಾರವು ಅವರ ವಿರುದ್ಧ ಶಿಸ್ತುಕ್ರಮ ಜರುಗಿಸಿತ್ತು. 2017 ರಲ್ಲಿ ಶರ್ಮಾ ಬೆಂಗಳೂರು ಮಹಾನಗರ ಕಾರ್ಯಪಡೆಯ ಮುಖ್ಯಸ್ಥರಾಗಿದ್ದರು. ಈ ವೇಳೆ ರಾಜಕಾಲುವೆ ಮತ್ತು ಇತರ ಸರ್ಕಾರಿ ಜಾಗ ಒತ್ತುವರಿ ತೆರವುಗೊಳಿಸಲು ಖಡಕ್ ತೀರ್ಮಾನ ತೆಗೆದುಕೊಂಡು ಜನಪ್ರಿಯರಾಗಿದ್ದರು. ಬಿಬಿಎಂಪಿ ಎಂಜಿನಿಯರ್‌ಗಳು ಮತ್ತು ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಸಲ್ಲಿಸುತ್ತಿದ್ದ ದೂರುಗಳ ವಿರುದ್ಧ ಶೀಘ್ರ ಕ್ರಮ ತೆಗೆದುಕೊಳ್ಳುತ್ತಿದ್ದರು. ಈ ನಡೆಯು ಜನಮೆಚ್ಚುಗೆಗೆ ಪಾತ್ರವಾಗಿತ್ತು.ಇವೆಲ್ಲದರ ನಡುವೆ ಈ ಹಿರಿಯ ಪೊಲೀಸ್ ಅಧಿಕಾರಿ ಇನ್ನೂ ನೆನಪು ಮಾತ್ರ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...