LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಕ್ಷೇತ್ರ ಬದಲಿಸಿದ ಸತೀಶ್ ಜಾರಕಿಹೊಳಿ - ಯಮಕನಮರಡಿ ಕ್ಷೇತ್ರದಿಂದ ಯಾವ ಕ್ಷೇತ್ರದಿಂದ ಸ್ಪರ್ಧೆ ಗೊತ್ತಾ…..

ಬೆಳಗಾವಿ -

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕ್ಷೇತ್ರವನ್ನು ಬದಲಾಯಿ ಸಲು ತಿರ್ಮಾನವನ್ನು ಕೈಗೊಂಡಿದ್ದು ಈ ಕುರಿತಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರೇ ಮಾಹಿತಿ ನೀಡಿದ್ದು ಸವದತ್ತಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಹೇಳಿದರು.ಸವದತ್ತಿ ತಾಲೂಕಿನ ಮುನವಳ್ಳಿಯಲ್ಲಿ ಸುದ್ದಿ ಗಾರರೊಂದಿಗೆ ಮಾತನಾಡಿದ ಅವರು ಮುಂದಿನ ವಿಧಾನ ಸಭೆ ಚುನಾವಣೆಯಲ್ಲಿ ಸವದತ್ತಿ ಕ್ಷೇತ್ರದಿಂದ ಸ್ಪರ್ಧಿಸಲು ತಯಾರಿ ಮಾಡುತ್ತಿರುವುದು ನಿಜ ಎಂದು ಹೇಳಿದರು

ನಾನು ಸವದತ್ತಿ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ಧತೆ ನಡೆಸಿ ದ್ದೇನೆ.ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಬೇಕಿದೆ ಇದಕ್ಕಾಗಿ ಕ್ಷೇತ್ರದಲ್ಲಿ ನಮ್ಮದೇ ಆದ ಸಂಘಟನಾ ಶಕ್ತಿ ಬಲ ಪಡಿಸುತ್ತಿದ್ದೇವೆ ಎಂದರು.ಇನ್ನೂ ಯಮಕನಮರಡಿ ಕ್ಷೇತ್ರ ದಿಂದ ತಮ್ಮ ಪುತ್ರ ರಾಹುಲ್ ಸ್ಪರ್ಧೆ ವಿಚಾರದ ಬಗ್ಗೆ ಇನ್ನೂ ಯಾವುದೇ ತೀರ್ಮಾನವಾಗಿಲ್ಲ.ಯಮಕನಮರಡಿ ಮತ್ತು ಸವದತ್ತಿ ಕ್ಷೇತ್ರಗಳಲ್ಲದೆ ಬೆಳಗಾವಿ ಜಿಲ್ಲೆಯ 18 ಕ್ಷೇತ್ರಗಳ ಪೈಕಿ 12 ಕಡೆ ಗೆದ್ದರೆ ಸರ್ಕಾರ ರಚನೆಗೆ ಅನುಕೂಲವಾಗ ಲಿದೆ ಎಂದು ಅವರು ಹೇಳುತ್ತಾ ಹೊಸ ಕ್ಷೇತ್ರದ ಸ್ಪರ್ಧೆಯ ಬಗ್ಗೆ ಸತೀಶ್ ಜಾರಕಿಹೊಳಿ ಮಾಹಿತಿ ನೀಡಿ ಯಮಕನಮ ರಡಿ ಕ್ಷೇತ್ರವನ್ನು ಯಾರಿಗೆ ಬಿಟ್ಟುಕೊಡಲಿದ್ದಾರೆ ಯಾರು ಸ್ಪರ್ಧೆ ಮಾಡಲಿದ್ದಾರೆ ಎಂಬ ಪ್ರಶ್ನೆಗೆ ಕುತೂಹಲವನ್ನು ಕೆರಳಿಸಿದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....