LIVE TV LocalCrimeNationalInternationalPoliticsEducationTechnologyEntertainmentSportsFeature
State News

ಸರ್ಕಾರಿ ಶಾಲೆಗೆ ಹುಳು ಮಿಶ್ರಿತ ತೊಗರಿ ಬೆಳೆ ಪೊರೈಕೆ – ಮರಳಿ ಕಳಿಸುತ್ತಿರುವ ಶಾಲಾ ಮುಖ್ಯಸ್ಥರು

ಸಿಂಧನೂರು -

ಹುಳು ಮಿಶ್ರಿತ ತೊಗರಿ ಬೆಳೆಯನ್ನು ಸರ್ಕಾರಿ ಶಾಲೆಗೆ ಪೂರೈಕೆ ಮಾಡಿದ ಘಟನೆ ಸಿಂಧನೂರಿನಲ್ಲಿ ನಡೆದಿದೆ. ಹಲವು ಸರ್ಕಾರಿ ಶಾಲೆಗಳಿಗೆ ಪೊರೈಕೆ ಮಾಡಿದ್ದು ಗಮನಕ್ಕೆ ಬರುತ್ತಿದ್ದಂತೆ ಅವುಗಳನ್ನು ಮರಳಿ ಆಯಾ ಶಾಲಾ ಮುಖ್ಯಸ್ಥರೇ ವಾಪಸ್ ಮಾಡಲಾರಂಭಿಸಿದ್ದಾರೆ. ತಾಲೂಕಿ ನಲ್ಲಿ ಅಕ್ಷರ ದಾಸೋಹ ಯೋಜನೆಯಡಿ ವಿದ್ಯಾರ್ಥಿಗಳ ಮಧ್ಯಾಹ್ನದ ಊಟಕ್ಕೆ ಬೇಕಾಗುವ ಬೆಳೆಯಲ್ಲೂ ನಡೆದ ವ್ಯವಹಾರ ಇಂತಹ ಬೆಳವಣಿಗೆಗೆ ಕಾರಣವಾಗಿದೆ.ಆಯಾ ಶಾಲೆಗಳಿಗೆ ಆಹಾರ ನಾಗರಿಕ ಸರಬರಾಜು ನಿಗಮದಿಂದ ಪೂರೈಕೆಯಾಗಿದ್ದ ಬೇಳೆ ಗುಣಮಟ್ಟ ಸರಿಯಿಲ್ಲವೆಂದು ವಾಪಸ್ ಕಳಿಸಲಾಗಿದೆ.ಅದನ್ನು ಸ್ವೀಕರಿಸಿ ಬೇರೆ ಬೆಳೆಯ ನ್ನು ಆಹಾರ ನಿಗಮದವರು ವರ್ಗಾಯಿಸಿ ಕೊಡಲಾರಂಭಿ ಸಿದ್ದಾರೆ.ತಾಲೂಕಿನ 348 ಸರಕಾರಿ ಶಾಲೆಗಳಿಗೆ ಬಿಸಿಯೂ ಟಕ್ಕಾಗಿ 310 ಕ್ವಿಂಟಾಲ್ ತೊಗರಿ ಬೇಳೆಗೆ ಬೇಡಿಕೆಯಿದೆ.

54,084 ವಿದ್ಯಾರ್ಥಿಗಳು ಅಕ್ಷರ ದಾಸೋಹ ಯೋಜನೆ ಪ್ರಯೋಜನ ಪಡೆಯುತ್ತಿದ್ದಾರೆ. ಈ ಎಲ್ಲ ವಿದ್ಯಾರ್ಥಿಗಳಿಗೆ ಕಲಬುರಗಿ ಶಿವಶಕ್ತಿ ಏಜೆನ್ಸಿಯವರ ಮೂಲಕ ತೊಗರಿ ಬೆಳೆಯನ್ನು ಪೂರೈಕೆ ಮಾಡಲಾಗಿದೆ.ಈ ಬೆಳೆಯನ್ನು ನೋಡುತ್ತಿದ್ದಂತೆ ತಾಲೂಕಿನ ಗೊಬ್ಬರಕಲ್,ಜವಳಗೇರಾ, ಸಿಂಗಾಪುರ ಶಾಲೆಯ ಸಿಬ್ಬಂದಿ, ಬಿಸಿಯೂಟಕ್ಕೆ ಬಳಸಲು ಸೂಕ್ತವಾಗಿಲ್ಲವೆಂದು ವಾಪಸ್ ಮಾಡಿದ್ದಾರೆ.ಇನ್ನೂ ಅಕ್ಷರ ದಾಸೋಹ ಯೋಜನೆಗೆ ಸಂಬಂಧಿಸಿ ಹಂಚಿಕೆಯಾದ ತೊಗರಿ ಬೆಳೆಯ ಪೈಕಿ 140 ಚೀಲಗಳನ್ನು ತೆಗೆದು ಇರಿಸಲಾ ಗಿದೆ.70 ಕ್ವಿಂಟಾಲ್ನ್ನು ಟೆಂಡರ್ ಪಡೆದುಕೊಂಡಿರುವ ಸಂಸ್ಥೆಗೆ ವಾಪಸ್ ಕಳುಹಿಸಲಾಗಿದೆ.ಶಾಲಾ ಸಿಬ್ಬಂದಿ ಇದನ್ನು ಸ್ವೀಕರಿಸಿದ ಹಿನ್ನೆಲೆಯಲ್ಲಿ ಸಮಸ್ಯೆ ಬೆಳಕಿಗೆ ಬಂದಿದೆ. ಈಗಾಗಲೇ ಶಾಲೆಗಳಿಗೆ ತಲುಪಿರುವ ದಾಸ್ತಾನು ವಾಪಸ್ ನೀಡುತ್ತಿರುವುದರಿಂದ ಸಮಸ್ಯೆ ಬಿಗಡಾಯಿಸಿದೆ. 1,400 ಕ್ವಿಂಟಾಲ್ ಬೇಳೆಯನ್ನು ಕೊಟ್ಟಿರುವ ಸಂಸ್ಥೆಗೆ ಇದರಿಂದ ಬಿಸಿ ತಟ್ಟಲಾರಂಭಿಸಿದೆ.ಇದು ಒಂದು ವಿಚಾರ ವಾದರೆ ಇನ್ನೂ ದರದಲ್ಲೂ ಕೂಡಾ ವ್ಯತ್ಯಾಸವಾಗುತ್ತಿದೆ ಮುಕ್ತ ಮಾರುಕಟ್ಟೆಯಲ್ಲಿ ಗ್ರಾಹಕರು ಖರೀದಿ ಮಾಡುತ್ತಿ ರುವ ತೊಗರಿ ಬೆಳೆಯ ಬೆಲೆ ಪ್ರತಿ ಕೆಜಿಗೆ 95-110 ರೂ.ದರ ವಿದೆ.ಆದರೆ, ಸರಕಾರದ ಅಕ್ಷರ ದಾಸೋಹ ಯೋಜನೆಗೆ ಪೂರೈಕೆ ಮಾಡುವ ಏಜೇನ್ಸಿಯವರು 84.50 ರೂ.ಗೆ ಸರಬರಾಜು ಮಾಡುತ್ತಿದ್ದಾರೆ. ಈ ಮಧ್ಯೆ ಉಳಿಕೆ ಮಾರ್ಗ ಅನುಸರಿಸಿದ ಪರಿಣಾಮ ಕಳಪೆ ಬೆಳೆ ಶಾಲೆಗಳಿಗೆ ತಲುಪಿವೆ.ಆಹಾರ ನಿಗಮದ ಉಗ್ರಾಣದಲ್ಲಿ ಗೋಧಿ ಪಕ್ಕದಲ್ಲಿ ಬೇಳೆ ಇಟ್ಟಿರುವುದರಿಂದ ಹುಳು ಬಂದಿದ್ದು. ನಾನು ಭೇಟಿಗೆ ಹೋದಾಗ ಎಲ್ಲ ಕಡೆ ದೂರುಗಳಿಲ್ಲ ಸಮಸ್ಯೆ ಇದ್ದ ಕಡೆಗಳಲ್ಲಿ ಆಹಾರ ನಿಗಮ ವ್ಯವಸ್ಥಾಪಕರು ತಕ್ಷಣವೇ ಬದಲಾವಣೆ ಮಾಡಿ ಕೊಟ್ಟಿದ್ದಾರೆ ಎಂಬ ಮಾತನ್ನು ಅಕ್ಷರ ದಾಸೋಹ ಯೋಜನೆ ಅಧಿಕಾರಿಗಳು ಹೇಳುತ್ತಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...