LIVE TV LocalCrimeNationalInternationalPoliticsEducationTechnologyEntertainmentSportsFeature
State News

ಖಾಸಗಿ ಶಾಲಾ ಕಿರುಕುಳ - ಬೇಸತ್ತ ಶಿಕ್ಷಕ ಆತ್ಮಹತ್ಯೆ - ವೈರಲ್ ಆಯಿತು ಸೆಲ್ಪಿ ವಿಡಿಯೋ

ಚಿಕ್ಕಬಳ್ಳಾಪೂರ -

ಪ್ರತಿಷ್ಠಿತ ಖಾಸಗಿ ಶಾಲೆಯ ಕಿರುಕುಳಕ್ಕೆ ಬೇಸತ್ತ ಶಿಕ್ಷಕನೊರ್ವ ಸೆಲ್ಪಿ ವಿಡಿಯೋ ಮಾಡಿ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೌದು ಇಂಥಹದೊಂದು ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕ

ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲ್ಲೂಕಿನ ಮಂಚೇನಹಳ್ಳಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಪ್ರತಿಷ್ಠಿತ ಮಂಚೇನಹಳ್ಳಿ ಆಚಾರ್ಯ ಶಾಲೆಯಲ್ಲಿ ಇಂಗ್ಲಿಷ್ ಶಿಕ್ಷಕರಾಗಿರುವ ಚಂದ್ರಶೇಖರ್ (35) ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ.

ಶಿಕ್ಷಕ 5 ನೇ ವಾರ್ಡ್ ಲಕ್ಮೀಪುರದ ತನ್ನ ಟ್ಯೂಟೋರಿಯಲ್ ನಲ್ಲಿ ಸೂಸೈಡ್ ಮಾಡಿಕೊಂಡಿದ್ದಾರೆ. ತನ್ನ ಸಾವಿಗೆ ಆಚಾರ್ಯ ಅನುದಾನಿತ ಶಾಲೆಯ ಆಡಳಿತ ಮಂಡಳಿ ಕಾರಣ ಅಂತ ಬೋರ್ಡ್ ಮೇಲೆ ಬರೆದಿದ್ದಾರೆ.

ಕಳೆದ 8 ವರ್ಷಗಳಿಂದ ಆಚಾರ್ಯ ಖಾಸಗಿ ಶಾಲೆಯಲ್ಲಿ ಇಂಗ್ಲಿಷ್ ಶಿಕ್ಷಕನಾಗಿದ್ದರು. ಇನ್ನೂ ಆತ್ಮಹತ್ಯೆಗೂ ಮುನ್ನ ಸೆಲ್ಫೀ ವೀಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಶಿಕ್ಷಕ ಚಂದ್ರಶೇಖರ್.

ಆಚಾರ್ಯ ಶಾಲೆಯ ಆಡಳಿತ ಮಂಡಳಿ ವಿರುದ್ಧ ಹತಾಶೆ ಮನಸ್ಥಿತಿಯಲ್ಲಿ ವೀಡಿಯೋವೊಂದನ್ನು ಮಾಡಿ ನಂತರ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ.ಶಿಕ್ಷಕ ಚಂದ್ರಶೇಖರ ಆತ್ಮಹತ್ಯೆ ವಿಡಿಯೋ ಫೋಟೋಗಳು ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿವೆ.

ಇದರೊಂದಿಗೆ ಟ್ಯೂಶನ್ ಬೊರ್ಡ್ ಮೇಲೆ ಮಕ್ಕಳೇ ನಿಮಗೆ ಒಳ್ಳೇಯದಾಗಲಿ ನನ್ನನ್ನು ಕ್ಷಮಿಸಿ ಎಂದು ಬರೆದಿದ್ದಾರೆ.

ವಿಷಯ ತಿಳಿದ ಮಂಚೇನಹಳ್ಳಿ ಪೊಲೀಸರು ಸ್ಥಳಕ್ಕ ಭೇಟಿ ನೀಡಿ ಪರಿಶೀಲನೆ ಮಾಡಿದ್ರು. ಈ ಕುರಿತಂತೆ ಪ್ರಕರಣವೊಂದನ್ನು ದಾಖಲು ಮಾಡಿಕೊಂಡಿರುವ ಮಂಚೇನಹಳ್ಳಿ ಪೊಲೀಸರು ತನಿಖೆ ಮಾಡ್ತಾ ಇದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....