LIVE TV LocalCrimeNationalInternationalPoliticsEducationTechnologyEntertainmentSportsFeature
State News

OPS ಗೆ ಎಳ್ಳು ನೀರು ಬಿಟ್ಟ CM ಸಿದ್ದರಾಮಯ್ಯ - ಚುನಾವಣೆಯ ಪ್ರಣಾಳಿಕೆ ಹೇಳಿದ್ದೇನು ಸ್ವಾಮಿ ಇದನ್ನು ನಂಬಿದಲ್ವಾ ಸ್ವಾಮಿ.

ಬೆಂಗಳೂರು -

ಹೌದು OPS ಜಾರಿಗೆ ಒತ್ತಾಯಿಸಿ ಈಗಾಗಲೇ ರಾಜ್ಯದಲ್ಲಿ ಒಂದು ಕಡೆ ಹೋರಾಟಗಳು ನಡೆಯುತ್ತಿರುವ ನಡುವೆ ಈ ಒಂದು  ನಿರೀಕ್ಷೆಯ ಲ್ಲಿದ್ದ ರಾಜ್ಯ ಸರ್ಕಾರಿ ನೌಕರ'ರಿಗೆ ಬಿಗ್ ಶಾಕ್ ವೊಂದನ್ನು ಮುಖ್ಯಮಂತ್ರಿ ನೀಡಿದ್ದಾರೆ

ಹೌದು ಈ ಒಂದು ನಿರೀಕ್ಷೆ ಯಲ್ಲಿದ್ದ ರಾಜ್ಯದ ಸಮಸ್ತ ನೌಕರರಿಗೆ ಸಿಎಂ ಸಿದ್ಧರಾಮಯ್ಯ ಶಾಕ್ ನೀಡಿದ್ದಾರೆ ರಾಜ್ಯ ಕಾಂಗ್ರೆಸ್ ಸರ್ಕಾರ ಚುನಾವ ಣಾ ಪೂರ್ವದಲ್ಲಿ ತಮ್ಮ ಚುನಾವಣಾ ಪ್ರಣಾಳಿಕೆ ಯಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೇ ರಾಜ್ಯ ಸರ್ಕಾರಿ ನೌಕರರ ಬಹುದಿನದ ಬೇಡಿಕೆ ಹೊಸ ಪಿಂಚಣಿ ಯೋಜನೆ

ರದ್ದುಗೊಳಿಸಿ, ಹಳೆ ಪಿಂಚಣಿ ಯೋಜನೆ ಜಾರಿ ಗೊಳಿಸುವುದಾಗಿ ಭರವಸೆ ನೀಡಿತ್ತು.ಆದ್ರೇ ಇದೀಗ ರಾಜ್ಯ ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆಯನ್ನು ಜಾರಿ ಮಾಡಲು ನಿರ್ಧರಿಸಿಲ್ಲ ಎಂಬುದಾಗಿ ತಿಳಿಸಿದೆ.

ಈ ಮೂಲಕ OPS ಜಾರಿ ನಿರೀಕ್ಷೆಯಲ್ಲಿದ್ದಂತ ರಾಜ್ಯ ಸರ್ಕಾರಿ ನೌಕರರಿಗೆ ಬಿಗ್ ಶಾಕ್ ನೀಡಲಾಗಿದೆ.ಈ ಬಗ್ಗೆ ವಿಧಾನಪರಿಷತ್ ನಲ್ಲಿ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ ಅವರು ಕೇಳಿದಂತ ಚುಕ್ಕೆ ಗುರುತಿನ ಪ್ರಶ್ನೆಗೆಮುಖ್ಯಮಂತ್ರಿ ಸಿದ್ಧರಾಮಯ್ಯ ಉತ್ತರಿಸಿದ್ದಾರೆ.

ರಾಜ್ಯದಲ್ಲಿ NPS ಯೋಜನೆಯಡಿ ಇರುವ ಸರ್ಕಾರಿ ನೌಕರರು ಎಷ್ಟು ಎಂಬುದಕ್ಕೆ ಉತ್ತರಿಸಿ  24-06-2023ಕ್ಕೆ ಇದ್ದಂತೆ ರಾಷ್ಟ್ರೀಯ ಪಿಂಚಣಿ ಯೋಜನೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರ ಸಂಖ್ಯೆ 3,04,511. ಇದು ಸ್ವಾಯತ್ತ ಸಂಸ್ಥೆಯ ನೌಕರರು ಒಳಗೊಂಡಂತ ಸಂಖ್ಯೆ ಆಗಿದೆ ಎಂಬುದಾಗಿ ತಿಳಿಸಿದ್ದಾರೆ.

ಇನ್ನೂ ರಾಜ್ಯ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆಯನ್ನು ಜಾರಿ ಮಾಡಲು ಸರ್ಕಾರ ನಿರ್ಧರಿಸಿದೆಯೇ ಎಂಬ ಪ್ರಶ್ನೆಗೆ ಇಲ್ಲ ಎಂದು ಉತ್ತರಿಸಿದ್ದಾರೆ.ಇನ್ನೂ ರಾಜ್ಯ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆಯನ್ನು ಜಾರಿ ಮಾಡಲು ಸರ್ಕಾರ ನಿರ್ಧರಿಸಿದೆಯೇ ಎಂಬ ಪ್ರಶ್ನೆಗೆ ಇಲ್ಲ ಎಂದು ಉತ್ತರಿಸಿದ್ದಾರೆ.

ಹಾಗಿದ್ದಲ್ಲಿ ಎನ್ ಪಿಎಸ್ ಯೋಜನೆಯನ್ನು ರದ್ದು ಪಡಿಸಿ, ಹಳೆಯ ಪಿಂಚಣಿ ಯೋಜನೆಯನ್ನು ಯಾವಾಗ ಜಾರಿ ಮಾಡಲಾಗುವುದು ಎಂದು ಪ್ರಶ್ನೆಗೆ ಉತ್ತರಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ದಿನಾಂಕ 01-03-2023ರಲ್ಲಿ ರಾಜ್ಯದಲ್ಲಿ ಜಾರಿ ಇರುವ ರಾಷ್ಟ್ರೀಯ ಪಿಂಚಣಿ ಯೋಜನೆ ಯನ್ನು ರದ್ದು ಪಡಿಸುವ ಸಂಬಂಧ ಈಗಾಗಲೇ ಹಳೆಯ ಪಿಂಚಣಿ ಯೋಜನೆಯನ್ನು ಮರು ಜಾರಿ ಮಾಡಿರುವ ರಾಜ್ಯಗಳಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಿರುವ ಕುರಿತು ಕೈಗೊಂಡಿರುವ ಕ್ರಮಗಳ ಬಗ್ಗೆ ಅಧ್ಯಯನ ನಡೆಸಿ

ವರದಿ ಸಲ್ಲಿಸಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಆದೇಶಿಸಿದೆ ಎಂಬುದಾಗಿ ಮಾಹಿತಿ ನೀಡಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....