ಬಾಗಲಕೋಟೆ -
ಅಧಿಕಾರಿಗಳಿಗೆ ಶೋಕಾಸ್ ನೋಟಿಸ್ ಜಾರಿ ಹೌದು ಬಾಗಲಕೋಟೆ ಯ ನಗರದ ವಾಂಬೆ ಕಾಲನಿಯ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿದ ಸಂದರ್ಭ ದಲ್ಲಿ ಕೇಂದ್ರದ ಮುಂಭಾಗದಲ್ಲಿ ಚರಂಡಿ ಕಟ್ಟಿಕೊಂಡು ಕೊಳಚೆ ನೀರು ನಿಂತಿರುವುದು ಹಾಗೂ ತೀವ್ರ ಅಸ್ವಚ್ಛತೆ ಕಂಡುಬಂದಿದ್ದು, ಸಣ್ಣ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಇದು ಗಂಭೀರ ನಿರ್ಲಕ್ಷ್ಯ ಎಂದು ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾ ಪಂಚಾಯಿತಿ ಸಿಇಒ ಗಜಾನನ ಬಾಲೆ ಅಧಿಕಾರಿಗಳಿಗೆ ಸ್ಥಳದಲ್ಲಿ ಯೇ ಶೋಕಾಸ್ ನೋಟಿಸ್ ಜಾರಿಗೊಳಿಸಿದರು.
ನಗರದ ವಿವಿಧ ಸರ್ಕಾರಿ ಸಂಸ್ಥೆಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಸಾರ್ವಜನಿಕ ಆರೋಗ್ಯ, ನೈರ್ಮಲ್ಯ, ಶಿಕ್ಷಣ ಹಾಗೂ ಮೂಲಸೌಕರ್ಯ ವ್ಯವಸ್ಥೆಗಳನ್ನು ಪರಿಶೀಲಿಸುವ ಸಂದರ್ಭದಲ್ಲಿ ಅಂಗನವಾಡಿ ಮುಂಭಾಗದಲ್ಲಿ ಅಸ್ವಚ್ಚತೆ ಕಂಡುಬಂದಿತು. ಈ ಹಿನ್ನಲೆ ಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು, ಬಾಗಲಕೋಟೆ ಸಿಡಿಪಿಒ, ವೃತ್ತ ಮೇಲ್ವಿಚಾರಕರು ಹಾಗೂ ಅಂಗನವಾಡಿ ಕಾರ್ಯಕರ್ತೆಗೆ ಕಾರಣ ಕೇಳಿ ನೋಟಿಸ್ ನೀಡಿದ್ದಾರೆ.
ಅಲ್ಲದೆ ಚರಂಡಿ ತಡೆಯನ್ನು ತಕ್ಷಣ ತೆರವುಗೊಳಿಸಿ, ಅಂಗನವಾಡಿ ಸುತ್ತಮುತ್ತ ಸ್ವಚ್ಛತೆ ಹಾಗೂ ಮಕ್ಕಳ ಆರೋಗ್ಯ ಮತ್ತು ಸುರಕ್ಷತೆಗೆ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸುದ್ದಿ ಸಂತೆ ನ್ಯೂಸ್ ಬಾಗಲಕೋಟೆ.....