LIVE TV LocalCrimeNationalInternationalPoliticsEducationTechnologyEntertainmentSportsFeature
State News

ಹೃದಯಾಘಾತದಿಂದ  ಪೊಲೀಸ್ ಕಾನ್ಸ್‌ಟೇಬಲ್‌  ನಿಧನ - ಕರ್ತವ್ಯ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ಸಮಯದಲ್ಲಿ ಮೃತಪಟ್ಟ ಸಿದ್ದಪ್ಪ.....

ಹಾಸನ -

ಹೃದಯಾಘಾತದಿಂದ  ಪೊಲೀಸ್ ಕಾನ್ಸ್‌ಟೇಬಲ್‌  ನಿಧನ - ಕರ್ತವ್ಯ ಮುಗಿಸಿ ಕೊಂಡು ಮನೆಗೆ ತೆರಳುತ್ತಿದ್ದ ಸಮಯದಲ್ಲಿ ಮೃತಪಟ್ಟ ಸಿದ್ದಪ್ಪ ಹೌದು

ಪೊಲೀಸ್ ಕಾನ್ಸ್‌ಟೇಬಲ್‌ ರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಹಾಸನದಲ್ಲಿ ನಡೆದಿದೆ.ಪ್ರಧಾನಿ ಮೋದಿಯವರ ಸಭೆಯ ಬಂದೋಬಸ್ತ್ ಕರ್ತವ್ಯ ಮುಗಿಸಿ ಮನೆಗೆ ಹಿಂದಿರುಗಿದ್ದ ಕಾನ್ಸ್‌ಟೇಬಲ್‌ ಹೃದಯಾಘಾತ. ದಿಂದ ಮೃತಪಟ್ಟಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ಪ್ರಚಾರ ಸಭೆಯ ಬಂದೋಬಸ್ತ್ ಕರ್ತವ್ಯ ಮುಗಿಸಿ ಮನೆಗೆ ಹಿಂದಿರುಗಿದ್ದ ಕಾನ್ಸ್‌ಟೇಬಲ್‌ ಹೃದಯಾಘಾತ ದಿಂದ ನಿಧನರಾಗಿದ್ದಾರೆ. ಬೇಲೂರು ಪೊಲೀಸ್ ಠಾಣೆಯ ಸಿದ್ದಪ್ಪ (50) ಮೃತಪಟ್ಟವರಾಗಿದ್ದಾರೆ. ಮೈಸೂರಿನಲ್ಲಿ ಆಯೋಜನೆಯಾಗಿದ್ದ ನರೇಂದ್ರ ಮೋದಿಯವರ ಚುನಾವಣಾ ಪ್ರಚಾರ ಕಾರ್ಯ ನಿಮಿತ್ತ ಬಂದೋ ಬಸ್ತ್ ಗೆ ತೆರಳಿ ಮಧ್ಯರಾತ್ರಿ ಮನೆಗೆ ವಾಪಸ್ಸಾಗಿ ನಿದ್ರೆಗೆ ಜಾರಿದ್ದರು

ಈ ಸಮಯದಲ್ಲಿ ಹೃದಯಾಘಾತವಾಗಿದೆ ಮಲಗಿದ ಸಿದ್ದಪ್ಪನವರು ಏಳದೇ ಇದ್ದುದನ್ನು ಕಂಡು ಅನುಮಾನಗೊಂಡು ಕುಟುಂಬ ಸದಸ್ಯರು ಎಬ್ಬಿಸಲು ಪ್ರಯತ್ನಿಸಿದರು.ಅಷ್ಟರಲ್ಲಿ ಅವರು ನಿಧನರಾಗಿರುವುದು ತಿಳಿದುಬಂದಿದೆ.

ನಿಧನದಿಂದ ಕುಟುಂಬದವರಿಗೆ ಬರಸಿಡಿಲು ಬಡಿದಂತಾಗಿದೆ.ದಿಕ್ಕು ತೋಚದೆ ಕುಟುಂಬದ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿದ್ದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹಮ್ಮದ್ ಸುಜೀತಾ ಮತ್ತು ಸಹದ್ಯೋಗಿಗಳು ಹಾಗೂ ಸ್ನೇಹಿತರು ಕಂಬನಿ ಮಿಡಿದು ಸಂತಾಪ ಸೂಚಿಸಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಹಾಸನ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....