LIVE TV LocalCrimeNationalInternationalPoliticsEducationTechnologyEntertainmentSportsFeature
State News

ಒಂದು ತಿಂಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸಿದ್ದರಾಮಯ್ಯ ರಾಜೀನಾಮೆ.....

ಮಸ್ಕಿ -

ಕಾಂಗ್ರೆಸ್‌ ಒಳಜಗಳದ ಪಕ್ಷವಾಗಿದ್ದು, ಎಲ್ಲಿಯೂ ನಿಲ್ಲದ ಸಿದ್ದರಾಮಯ್ಯ ಅವರು ತಿಂಗಳಲ್ಲಿ ಆ ಪಕ್ಷಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ ಕಟೀಲ್‌ ಹೇಳಿದರು. ಮಸ್ಕಿ ಪಟ್ಟಣದಲ್ಲಿ ಬಿಜೆಪಿಯಿಂದ ಹಮ್ಮಿಕೊಂಡಿದ್ದ ಬೃಹತ್‌ ಕಾರ್ಯಕರ್ತರ ಸಮಾವೇಶದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬಿಜೆಪಿ ಗೆಲ್ಲುವ ಪಕ್ಷವಾಗಿದೆ, ಕಾಂಗ್ರೆಸ್‌ ಸೋಲಿನ ಪಕ್ಷವಾಗಿದೆ.

ಸಿದ್ದರಾಮಯ್ಯ ಅವರು ಈ ಹಿಂದೆ ಗುರುವಿಗೆ ತಿರುಮಂತ್ರ ಹಾಕಿ ಜೆಡಿಎಸ್‌ ಬಿಟ್ಟು ಕಾಂಗ್ರೆಸ್‌ ಸೇರಿದ್ದರು. ಇದೀಗ ಕಾಂಗ್ರೆಸ್‌ನಲ್ಲಿ ತನ್ನ ಅಸ್ತಿತ್ವ ಕಳೆದುಕೊಳ್ಳುತ್ತಿದ್ದು ಅದಕ್ಕಾಗಿ ತಿಂಗಳಲ್ಲಿ ಪಕ್ಷ ಬಿಡಲಿದ್ದಾರೆ. ಅದಕ್ಕಾಗಿಯೇ ಅವರು 90 ಜೊತೆ ಬಟ್ಟೆ ಹೊಲಿಸಿಕೊಂಡಿರುವುದಾಗಿ ತಿಳಿಸಿದ್ದಾರೆ ಎಂದು ವ್ಯಂಗ್ಯವಾಡಿದರು.

https://youtu.be/QNByFBu5FJg

ಉಪಚುನಾವಣೆಯಲ್ಲಿ ಬಿಜೆಪಿ ಪಂಚಜನ್ಯ ಕಹಳೆ ಮೊಳಗಿಸಿದ್ದು, ಉಪಕದನದಲ್ಲಿ ಸಿಎಂ ಯಡಿಯೂರಪ್ಪ ಅವರು ಕೃಷ್ಣರಂತೆ ಸಾರಥಿ ಯಾಗಿದ್ದಾರೆ, ಬಿ.ವೈ.ವಿಜಯೇಂದ್ರ ಅವರು ಅರ್ಜುನರಾಗಿದ್ದಾರೆ.

ಶ್ರೀರಾಮುಲು ಭೀಮರಾಗಿದ್ದು, ಎನ್‌.ರವಿಕುಮಾರ ಅವರು ಸಹದೇವರಾಗಿದ್ದಾರೆ. ಈ ಕುರುಕ್ಷೇತ್ರದಲ್ಲಿ ಪಾಂಡವರಿಗೆ ಗೆಲವು ಖಚಿತವಾಗಿ ಲಭಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಇವೆಲ್ಲದರ ನಡುವೆ ಇತ್ತ ಸಿದ್ದರಾಮಯ್ಯ ಈ ಒಂದು ವಿಚಾರ ಕುರಿತು ಏನು ಹೇಳ್ತಾರೆ ಎಂಬುದನ್ನು ಕಾದು ನೋಡಬೇಕು

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...