LIVE TV LocalCrimeNationalInternationalPoliticsEducationTechnologyEntertainmentSportsFeature
State News

ಬಸ್ ಗಾಗಿ ವಿದ್ಯಾರ್ಥಿ ಗಳ ಪ್ರತಿಭಟನೆ - ವಿದ್ಯಾರ್ಥಿ ಗಳ ಹೋರಾಟಕ್ಕೆ ಸಾಥ್ ನೀಡಿದ ಪಾಲಕರು.....

ಲಕ್ಷ್ಮೇಶ್ವರ -

ಶಾಲಾ ವೇಳೆಗೆ ಬಸ್‌ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಗದಗ ಜಿಲ್ಲೆಯ ಲಕ್ಷ್ಮೇಶ್ವರದ ಹರದಗಟ್ಟಿ ಗ್ರಾಮದಲ್ಲಿ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಬಸ್‌ ತಡೆದು ಆಕ್ರೋಶ ವ್ಯಕ್ತಪಡಿಸಿದರು.ಶಾಲಾ-ಕಾಲೇಜು ಪ್ರಾರಂಭ ವಾಗಿ ತಿಂಗಳು ಕಳೆದರೂ ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳು ಪಟ್ಟಣ ಪ್ರದೇಶಗಳ ವಿದ್ಯಾಭ್ಯಾಸಕ್ಕೆ ತೆರಳಲು ಸಕಾಲಿಕ ಬಸ್‌ ವ್ಯವಸ್ಥೆ ಇಲ್ಲ.ಕೆಲವೊಮ್ಮೆ ಬಸ್‌ ಸಿಗದೇ ಶಾಲೆಗೆ ಹೋಗುವುದನ್ನೇ ಬಿಡುತ್ತಿರುವ ವಿದ್ಯಾರ್ಥಿ ಗಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ ಎಂದು ಪಾಲಕರು ಅಸಮಾಧಾನ ವ್ಯಕ್ತಪಡಿಸಿದರು.

ಹರದಗಟ್ಟಿ ಗ್ರಾಮದಿಂದ ಬೆಳ್ಳಟ್ಟಿ ಶಾಲೆಗೆ ತೆರಳಲು ಪ್ರತಿ ದಿನ ಈ ಮಾರ್ಗದ ಮಲ್ಲಾಪುರ,ಹುಲ್ಲೂರ,ನೆಲೂಗಲ್‌ ಗ್ರಾಮದ ವಿದ್ಯಾರ್ಥಿಗಳು ಬಸ್‌ ವ್ಯವಸ್ಥೆಯಿಲ್ಲದೇ ವಿದ್ಯಾರ್ಥಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ವಿದ್ಯಾರ್ಥಿಗಳಷ್ಟೇ ಅಲ್ಲದೇ ಜನಸಮಾನ್ಯರು,ನೌಕರರು, ವ್ಯಾಪಾರಸ್ಥರು ಸಮಸ್ಯೆ ಅನುಭವಿಸುತ್ತಿದ್ದಾರೆ. ಲಕ್ಷ್ಮೇಶ್ವರ ದಿಂದ ಹರದಗಟ್ಟಿ,ಮಲ್ಲಾಪುರ,ಹುಲ್ಲೂರ ಗ್ರಾಮದ ಅನೇಕ ವಿದ್ಯಾರ್ಥಿಗಳು ಬೆಳಗ್ಗೆಯಿಂದ ಕಾಯುತ್ತಾರೆ.ಈ ಮಾರ್ಗ ವಾಗಿ ನಿತ್ಯ ಬೆಳಗ್ಗೆ 8.30ಕ್ಕೆ ಬರುತ್ತಿದ್ದ ಬಸ್‌ 10.30ಕ್ಕೆ ಬರುತ್ತದೆ.ರಸ್ತೆ ಸರಿಯಿಲ್ಲದ್ದರಿಂದ ಬೆಳ್ಳಟ್ಟಿ ತಲುಪಲು 1 ಗಂಟೆ ಬೇಕು.ಅಷ್ಟರಲ್ಲಿ ಮೊದಲೆರಡು ಅವಧಿಯ ಕ್ಲಾಸ್‌ ಮುಗಿದಿರುತ್ತವೆ.ಅಲ್ಲದೇ ಸಂಜೆಯೂ ಸರಿಯಾದ ವೇಳೆಗೆ ಬಸ್‌ ಇಲ್ಲ.ಈ ಸಮಸ್ಯೆ ಸಂಬಂಧಪಟ್ಟ ಸಾರಿಗೆ ಘಟಕದ ವರಿಗೆ ಹೇಳಿದರೂ ಸಮಸ್ಯೆ ಬಗೆಹರಿಯುತ್ತಿಲ್ಲ ಎಂದು ಗ್ರಾಮಸ್ಥರಾದ ಮಾರುತಿ ಲಮಾಣಿ, ಪರಮೇಶ ಲಮಾಣಿ ಅಸಮಾಧಾನ ವ್ಯಕ್ತಪಡಿಸಿದರು.ಗ್ರಾಮಸ್ಥರು ಬಸ್‌ ತಡೆದ ವಿಷಯ ತಿಳಿದ ಡಿಪೋ ಮ್ಯಾನೇಜರ್‌ ಏಕಾಏಕಿ ಬಸ್‌ ತಡೆಯುವುದು ಸಮಂಜಸವಲ್ಲ.ನಿಮ್ಮ ಮನವಿ ಸಲ್ಲಿಸಿದರೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದರಿಂದ ಬಸ್‌ ಬಿಡಲಾ ಯಿತು.

ಈ ವೇಳೆ ಗ್ರಾಮಸ್ಥರಾದ ರವಿಕುಮಾರ್‌ ಲಮಾಣಿ,ರವಿ ಲಮಾಣಿ,ಮಾರುತಿ ಲಮಾಣಿ,ಫಕ್ಕೀರಪ್ಪ ಮಾಳಗಿಮನಿ, ಅರ್ಜುನ ಲಮಾಣಿ,ಸುರೇಶ ನಾಯಕ,ಲಕ್ಷ್ಮಣ ಲಮಾಣಿ, ಅಂಬರೀಶ ಲಮಾಣಿ,ಪರಸಪ್ಪ ಲಮಾಣಿ ಸೇರಿದಂತೆ ಹಲವರು 2 ದಿನಗಳ ಕಾಲಾವಕಾಶ ನೀಡಲಾಗುತ್ತದೆ. ಸಮಸ್ಯೆ ಬಗೆಹರಿಸದಿದ್ದರೆ ಮತ್ತೆ ಬಸ್‌ ತಡೆದು ಪ್ರತಿಭಟನೆ ನಡೆಸಲಾಗುತ್ತದೆ ಎಂದು ಹೇಳಿ ಬಸ್‌ ಬಿಟ್ಟು ಕಳಿಸಿದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...