LIVE TV LocalCrimeNationalInternationalPoliticsEducationTechnologyEntertainmentSportsFeature
State News

ಉಪನೋಂದಣಿ,ಉಪ ಖಜಾನೆ ಕಚೇರಿ ಆರಂಭ – ಶಾಸಕ ಶಂಕರ ಪಾಟೀಲ ಮುನೇನಕೊಪ್ಪ ಉದ್ಘಾಟನೆ

ಅಣ್ಣಿಗೇರಿ -

ನೂತನವಾಗಿ ಅಣ್ಣಿಗೇರಿ ಪಟ್ಟಣದಲ್ಲಿ ಆರಂಭಗೊಂಡ ಉಪಖಜಾನೆ ಕಚೇರಿಯನ್ನು ನಗರ ಮೂಲಸೌಕರ್ಯ ಅಭಿವೃದ್ದಿ ಹಾಗೂ ಹಣಕಾಸು ನಿಗಮದ ಅಧ್ಯಕ್ಷರು ಹಾಗೂ ನವಲಗುಂದ ವಿಧಾನಸಭಾ ಕ್ಷೇತ್ರದ ಶಾಸಕರಾದ ಶಂಕರಪಾಟೀಲ ಮುನೇನಕೊಪ್ಪ ಕಾರ್ಯಾಲಯ ಉದ್ಘಾಟಿಸಿದರು.

ಅಣ್ಣಿಗೇರಿ ಪಟ್ಟಣದ ಸ್ಥಳೀಯ ಹುಡ್ಕೊ ಕಾಲೊನಿಯಲ್ಲಿ ನೂತನ ಕಚೇರಿಯನ್ನು ಲೋಕಾರ್ಪಣೆ ಮಾಡಲಾಯಿತು.

ಇನ್ನೂ ಇದೇ ವೇಳೆ ಶಾಸಕರು ಮಾತನಾಡಿ ಹೊಸ ತಾಲ್ಲೂಕು ಕೇಂದ್ರಕ್ಕೆ ಈಗಾಗಲೇ ತಹಶೀಲ್ದಾರ್‌, ಉಪನೋಂದಣಿ ಹಾಗೂ ಖಜಾನೆ ಕಚೇರಿಗಳನ್ನು ತರಲಾಗಿದೆ. ಮುಂಬರುವ ದಿನಗಳಲ್ಲಿ ಹಂತಹಂತವಾಗಿ ಉಳಿದ ಕಚೇರಿಗಳನ್ನೂ ಆರಂಭಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದರು.

ಇನ್ನೂ ಪಟ್ಟಣ ತಾಲ್ಲೂಕು ಕೇಂದ್ರವಾದ ನಂತರ ಸಾಕಷ್ಟು ಅಭಿವೃದ್ದಿ ಹೊಂದುತ್ತಿದೆ. ಜೊತೆಗೆ ತಾಲ್ಲೂಕಿಗೆ ಅಗತ್ಯವಾಗಿರುವ ವಿವಿಧ ಸರ್ಕಾರಿ ಕಚೇರಿಗಳನ್ನು ಹಂತಹಂತವಾಗಿ ತರಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ ಎಂದರು.

ಇದರೊಂದಿಗೆ ತಾಲ್ಲೂಕಿನ ಎಲ್ಲ ಕಚೇರಿಗಳು ಒಂದೇ ಸೂರಿನಡಿ ಕೆಲಸ ಮಾಡಲು ಮಿನಿವಿಧಾನ ಸೌಧ ಕೂಡ ಆದಷ್ಟು ಬೇಗನೆ ನಿರ್ಮಿಸಲಾಗುವುದು. ಇದರೊಂದಿಗೆ ಜನರಿಗೆ 24X7 ಕುಡಿಯುವ ನೀರು ಒದಗಿಸಲಾಗುವುದು ಎಂದರು.

ಇನ್ನೂ ಇದೇ ವೇಳೆ ಖಜಾನೆ ಇಲಾಖೆಯ ಬೆಳಗಾವಿ ಜಂಟಿ ನಿರ್ದೇಶಕ ಸುರೇಶ ಹಳ್ಯಾಳ ಮಾತನಾಡಿ ಮೊದಲು ಖಜಾನೆ ಇಲಾಖೆಯಿಂದ ಆಗುತ್ತಿದ್ದ ಕೆಲಸಗಳಿಗೆ ಸಾಕಷ್ಟು ಸಮಯ ಬೇಕಾಗುತ್ತಿತ್ತು. ಈಗ ಆದಷ್ಟು ಶೀಘ್ರವಾಗಿ ಕೆಲಸಗಳಾಗುತ್ತವೆ ಎಂದರು.

ಜಿಲ್ಲಾ ಖಜಾನೆ ಉಪನಿರ್ದೇಶಕಿ ವೈ.ವೈ.ಹೊನ್ನಳ್ಳಿ, ನೂತನ ತಾಲ್ಲೂಕಿನ ಸಹಾಯಕ ಖಜಾನೆ ಅಧಿಕಾರಿ ಎಂ.ಎಂ.ಚಿಕ್ಕನ್ನವರ, ಷಣ್ಮುಖ ಗುರಿಕಾರ, ಮುಖ್ಯಾಧಿಕಾರಿ ಕೆ.ಎಫ್.ಕಟಗಿ,

ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರದ ಖಜಾನೆ ಇಲಾಖೆ ಸಿಬ್ಬಂದಿಗಳಾದ ದೀಪಾ ಗಡ್ಕರಿ,ಪರವೀನ್ ಬಾನು ಬುಳ್ಳನ್ನವರ ಸೇರಿದಂತೆ ಕಚೇರಿಯ ಸಿಬ್ಬಂದ್ದಿಗಳು ಈ ಒಂದು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...