LIVE TV LocalCrimeNationalInternationalPoliticsEducationTechnologyEntertainmentSportsFeature
State News

52 ವಿದ್ಯಾರ್ಥಿಗಳ ಅಮಾನತು ಮುಂದುವರೆದ ವಿದ್ಯಾರ್ಥಿಗಳ ಹೋರಾಟ.....

ಶಿವಮೊಗ್ಗ -

ಹಿಜಾಬ್ ವಿಚಾರ ಕುರಿತಂತೆ ಶಿವಮೊಗ್ಗ ದಲ್ಲಿ 52 ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದೆ.ಹೌದು ಹದಿನೈದು ದಿನಗಳ ಹಿಂದೆ ಭುಗಿಲೆದ್ದ ಹಿಜಾಬ್ ವಿವಾದ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು ಹೈಕೋರ್ಟ್ ಆದೇಶದ ಹೊರತಾಗಿಯೂ ಶನಿವಾರ ಹಲವು ಕಡೆ ಹಿಜಾಬ್ ಧರಿಸಿ ಬಂದಿದ್ದ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿಸಲಾಗಿದೆ.ಹೀಗಾಗಿ ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪದಲ್ಲಿ ಹಿಜಾಬ್ ತೆಗೆಯಲು ನಿರಾಕರಿಸಿದ ವಿದ್ಯಾರ್ಥಿನಿಯರು ತಮಗೆ ಪ್ರವೇಶ ನಿರಾಕರಿಸಿದ ಸರ್ಕಾರಿ ಪದವಿ ಪೂರ್ವ ಕಾಲೇಜು ಆಡಳಿತ ಮಂಡಳಿ ವಿರುದ್ಧ ಪ್ರತಿಭಟನೆ ನಡೆಸಿದರು.

ಹಿಜಾಬ್ ನಮ್ಮ ಹಕ್ಕು, ಪ್ರಾಣ ಬಿಟ್ಟೇವು ಹಿಜಾಬ್ ಬಿಡೆವು ಎಂದು ಘೋಷಣೆ ಕೂಗುತ್ತಾ ಕಾಲೇಜ್ ಅವರಣದಲ್ಲಿ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದರು.ಶುಕ್ರವಾರವೇ ನಮ್ಮನ್ನು ಕಾಲೇಜ್ ನಿಂದ ಅಮಾನತು ಮಾಡಲಾಗಿದ್ದು, ಕಾಲೇಜಿಗೆ ಬರಬಾರದು ಎಂದು ತಿಳಿಸಲಾಗಿದೆ ಎಂದು ವಿದ್ಯಾರ್ಥಿಯೊಬ್ಬರು ಸುದ್ದಿಗಾರರಿಗೆ ತಿಳಿಸಿದ್ದಾರೆ. ಶನಿವಾ ರವೂ ಕಾಲೇಜಿಗೆ ಆಗಮಿಸಿ ಘೋಷಣೆಗಳನ್ನು ಕೂಗಿ ಹಿಜಾಬ್ ಧರಿಸಲು ಅವಕಾಶ ನೀಡುವಂತೆ ಒತ್ತಾಯಿಸಿ ದರು.ಆದರೆ ಅವರನ್ನು ಒಳಗೆ ಬಿಡಲಿಲ್ಲ.ನಾವು ಕಾಲೇಜ್ ಗೆ ಬಂದಿದ್ದೇವೆ.ಆದರೆ ಪ್ರಾಂಶುಪಾಲರು ನಮ್ಮನ್ನು ಅಮಾ ನತುಗೊಳಿಸಿದ್ದಾರೆ ಮತ್ತು ಕಾಲೇಜಿಗೆ ಬರುವ ಅಗತ್ಯವಿಲ್ಲ ಎಂದು ಹೇಳಿದರು.ಪೊಲೀಸರು ಸಹ ಕಾಲೇಜಿಗೆ ಬರಬೇಡಿ ಎಂದು ಹೇಳಿದರು.ಇಂದು ಯಾರೂ ನಮ್ಮೊಂದಿಗೆ ಮಾತ ನಾಡಲಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....