ಬೆಂಗಳೂರು -
ಕೆಪಿಎಸ್ ಸಿ ಪರೀಕ್ಷಾ ಹಗರಣ ದಲ್ಲಿ ಬಂಧನ ವಾಗಿರುವ IAS ಅಧಿಕಾರಿ ಗ್ಯಾನೇಂದ್ರ ಕುಮಾರ್ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ ಹೌದು ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ಆರೋಪ ಎದುರಿಸುತ್ತಿರುವ IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಗ್ಯಾಂಗ್ವಾರ್ ಅವರನ್ನು ಕರ್ನಾಟಕ ಸರ್ಕಾರ ಅಮಾನತುಗೊಳಿಸಿದೆ.ಸಧ್ಯ ಇವರು ಸಿಐಡಿ ಕಸ್ಟಡಿಯಲ್ಲಿದ್ದು ಹೀಗಾಗಿ ಈ ಒಂದು ಅಧಿಕಾರಿಯನ್ನು ಅಮಾನತು ಮಾಡಲಾಗಿದೆ

IAS ಅಧಿಕಾರಿ ಜ್ಞಾನೇಂದ್ರ ಕುಮಾರ್
ಕ್ರಿಮಿನಲ್ ಇನ್ವೆಸ್ಟಿಗೇಷನ್ ಡಿಪಾರ್ಟ್ಮೆಂಟ್ ತನಿಖೆ ಮುಂದುವರಿಸುತ್ತಿದ್ದಂತೆ ಸಿಐಡಿ ಕಸ್ಟಡಿಯಲ್ಲಿರುವ ಐಎಎಸ್ ಅಧಿಕಾರಿಯನ್ನು ಅಮಾನತು ಮಾಡುವ ಆದೇಶ ನೀಡಿದೆ.ಹಗರಣದ ತನಿಖೆ ನಡೆಸುತ್ತಿರೋ CID ಎರಡು ದಿನಗಳ ವಿಚಾರಣೆಯ ಬಳಿಕ ಆಗಸ್ಟ್ 29ರಂದು ಗ್ಯಾಂಗ್ವಾರ್ ಅವರನ್ನು ಬಂಧಿಸಿತ್ತು.
ಗ್ಯಾಂಗ್ವಾರ್ ಅವರು ಫೆಬ್ರವರಿ 2024ರಿಂದ ಮಾರ್ಚ್ 2026ರವರೆಗೆ ಕರ್ನಾಟಕ ಲೋಕಸೇವಾಆಯೋಗದ (KPSC)ಪರೀಕ್ಷಾ ನಿಯಂತ್ರಕರಾಗಿ ಕಾರ್ಯನಿರ್ವಹಿ ಸಿದ್ದರು. ಅವರ ವಿರುದ್ಧ ಇಬ್ಬರು ಅಭ್ಯರ್ಥಿಗಳ OMR ಉತ್ತರ ಪತ್ರಿಕೆಗಳಲ್ಲಿ ತಿದ್ದುಪಡಿ ಮಾಡಲು 1.1 ಕೋಟಿ ರೂ ಪಡೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....